ಕೊಪ್ಪಳ: ಯಲಬುರ್ಗಾ ತಾಲೂಕಿನ ಭಾನಾಪುರ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಲು ಹೋಗಿ ಆಯಾತಪ್ಪಿ ಬಿದ್ದು ಆಸ್ಪತ್ರೆ ಸೇರಿದ್ದ ಮಹಿಳೆ ಮೃತಪಟ್ಟಿದ್ದಾರೆ.
ಮೃತ ದುರ್ದೈವಿ ಮಹಿಳೆಯನ್ನು ಯಲಬುರ್ಗಾ ತಾಲೂಕಿನ ಸೋಂಪುರ ಗ್ರಾಮದ ನಿವಾಸಿಯಾದ ಕಲ್ಲಮ್ಮ(55) ಎಂದು ಗುರುತಿಸಲಾಗಿದೆ.
ನಡೆದಿದ್ದೇನು?: ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ತೇರಳಲು ರೈಲು ಹತ್ತಿದ ವೇಳೆ ಕಲ್ಲಮ್ಮ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಎರಡೂ ಕಾಲುಗಳಿಗೆ ಗಂಭೀರ ಗಾಯಳಾಗಿತ್ತು. ತಕ್ಷಣವೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಎರಡೂ ಕಾಲುಗಳಲ್ಲಿ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಕಲ್ಲಮ್ಮ ಮೃತಪಟ್ಟಿದ್ದಾರೆ.
ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.