ಯಾದಗಿರಿ: ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಕೋಟಿ ಕೋಟಿ ಹಣವನ್ನು ಬಿಡುಗಡೆ ಮಾಡುತ್ತದೆ. ಆದರೆ ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎನ್ನುವುದಕ್ಕೆ ಯಾದಗಿರಿಯ ಜಿಲ್ಲಾಸ್ಪತ್ರೆಗೆ ನೀವು ಎಂಟ್ರಿ ಕೊಟ್ಟು ನೀಡಬಹುದು.
ಹೌದು. ಊರಿನಿಂದ ರೋಗಿಗಳು ನೀರು ತರಬೇಕಾದ ದುಸ್ಥಿತಿ ಯಾದಗಿರಿಯ ಜಿಲ್ಲಾಸ್ಪತ್ರೆಗೆ ಬಂದೊದಗಿದೆ. ನಿತ್ಯವು ನೂರಾರು ಬಡ ರೋಗಿಗಳು ಹಣವಿಲ್ಲದೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಬರುತ್ತಾರೆ. ಆದ್ರೆ ಈ ಆಸ್ಪತ್ರೆಯಲ್ಲಿ ದಾಖಲಾಗಬೇಕಾದರೆ ನೀರಿಗಾಗಿ ನಿತ್ಯವು ನೂರಾರು ರೂಪಾಯಿ ಖರ್ಚು ಮಾಡಬೇಕಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ಎರಡು ಕೊಳವೆ ಬಾವಿ ಮೂಲಕ ನೀರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಎರಡೂ ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ. ಬಳಕೆಗೆ ಮಾತ್ರ ಈ ನೀರನ್ನು ಬಳಸಬಹುದಾಗಿದೆ. ಕೊಳವೆ ಬಾವಿ ನೀರನ್ನೇ ಶುದ್ಧೀಕರಿಸಿ ರೋಗಿಗಳಿಗೆ ಸಮರ್ಪಕವಾಗಿ ನೀರು ಪೂರೈಸಬೇಕು. ಆದರೆ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಆಸ್ಪತ್ರೆ ಕಟ್ಟಡದ ಮೇಲೆ ನೀರು ಶುದ್ಧಿಕರಣ ಘಟಕ ಅಳವಡಿಸಿದ್ದರೂ 15-20 ದಿನಗಳಿಗೊಮ್ಮೆ ಬಳಕೆ ಮಾಡಲಾಗುತ್ತಿದೆ. ಆದ್ದರಿಂದ ಅಗತ್ಯ ಪ್ರಮಾಣದ ಶುದ್ಧ ನೀರು ಸರಬರಾಜು ಆಗುತ್ತಿಲ್ಲ.
ಆಸ್ಪತ್ರೆ ಕಟ್ಟಡದ ಮೇಲೆ ನೀರು ಶುದ್ಧಿಕರಣ ಘಟಕ ಅಳವಡಿಸಿದ್ರು 15-20 ದಿವಸಕ್ಕೊಮೆ ಬಳಕೆ ಮಾಡುತ್ತಿದ್ದಾರೆ. ಅದರಿಂದ ರೋಗಿಗಳಿಗೆ ಪೂರೈಸಬೇಕಾದಷ್ಟು ನೀರು ಶುದ್ಧಿಕರಣ ಮಾಡಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆ ತಳಭಾಗದಲ್ಲಿ ಚಿಕ್ಕದಾದ ನೀರು ಶುದ್ಧಿಕರಣ ಘಟಕ ಹಾಕಿ ಕೈತೊಳೆದುಕೊಂಡಿದ್ದಾರೆ. ಇದರಿಂದ ಕೂಡ ಒಂದು ಹನಿ ನೀರು ಸರಿಯಾಗಿ ಸಿಗುತ್ತಿಲ್ಲ.
ಬೇಸಿಗೆ ಆರಂಭವಾಗಿದ್ದು ದಾಹ ಹೆಚ್ಚಾಗುತ್ತಿದೆ. ಸರ್ಕಾರ ಮಾತ್ರ ಆಸ್ಪತ್ರೆಗೆ ಬರುವ ಜನರಿಗೆ ಶುದ್ಧ ನೀರಿನ ವ್ಯವಸ್ಥೆ ಮಾಡುತ್ತಿಲ್ಲ. ಹಗಲು ಸಮಯದಲ್ಲಿ ಬಡ ರೋಗಿಗಳು ಹಾಗೂ ಅವರ ಸಂಬಂಧಿಕರು ಆಸ್ಪತ್ರೆ ಮುಂಭಾಗದ ಅಂಗಡಿಗಳಲ್ಲಿ ನೀರನ್ನು ಖರೀದಿ ಮಾಡುತ್ತಾರೆ. ರಾತ್ರಿ ವೇಳೆಯಲ್ಲಿ ದಾಹವಾದ್ರೆ ರೋಗಿಗಳು ನೀರಿಲ್ಲದೇ ನರಕಯಾತನೆ ಅನುಭವಿಸುವಂತಾಗಿದೆ. ಇನ್ನು ಮುಂದಾದರು ಸಂಬಂಧಪಟ್ಟ ಅಧಿಕಾರಿಗಳು, ಉಸ್ತುವಾರಿ ಸಚಿವರು ಇತ್ತ ಕಾಳಜಿ ವಹಿಸಿ ಬಡ ರೋಗಿಗಳಿಗೆ ಶುದ್ಧ ನೀರು ಪೂರೈಸುವ ಕೆಲಸ ಮಾಡಬೇಕಾಗಿದೆ.