ರಾಯಚೂರು: ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ತಮ್ಮ ಪುತ್ರನ ಮದುವೆ ಹಿನ್ನೆಲೆಯಲ್ಲಿ ಲಿಂಗಸುಗೂರಿನಲ್ಲಿ ಆಯೋಜಿಸಿದ್ದ 501 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಚಿತ್ರನಟ ಯಶ್, ರಾಧಿಕಾ ಪಂಡಿತ್ ದಂಪತಿ ಭಾಗವಹಿಸಿದ್ದರು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನವ ಜೋಡಿಗಳಿಗೆ ಯಶ್ ದಂಪತಿಗಳು ಶುಭ ಹಾರೈಸಿದರು. ಯಶ್ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರಿಂದ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಈ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿ ಹಲವಾರು ರಾಜಕೀಯ ಮುಖಂಡರು ಭಾಗವಹಿಸಿ ನವ ಜೋಡಿಗಳಿಗೆ ಶುಭಕೋರಿದರು.
ಇದನ್ನೂ ಓದಿ: ಯಶೋಮಾರ್ಗ ಪರಿಶ್ರಮಕ್ಕೆ ಸಿಕ್ತು ಪ್ರತಿಫಲ: ಭರ್ತಿಯಾಯ್ತು ಬತ್ತಿ ಹೋಗಿದ್ದ ತಲ್ಲೂರು ಕೆರೆ- ಸೋಮವಾರ ಬಾಗಿನ ಅರ್ಪಣೆ