ಜಾರ್ಖಂಡ್: ಮಾನಸಿಕ ಅಸ್ವಸ್ಥನೊಬ್ಬ ತನ್ನ ತಾಯಿ ತಿಂಡಿ ಕೊಡಲು ತಡ ಮಾಡಿದ್ದಕ್ಕೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಂದ ಘಟನೆ ಜಾರ್ಖಂಡ್ನ ದನ್ಬಾದ್ನಲ್ಲಿ ನಡೆದಿದೆ.
21 ವರ್ಷದ ಯುವಕ ಬೆಳಗ್ಗೆ 10 ಗಂಟೆಗೆ ತನ್ನ ತಾಯಿಯ ಹತ್ತಿರ ತಿಂಡಿ ಕೇಳಿದ್ದಾನೆ. ಆದರೆ ತಿಂಡಿ ಕೊಡಲು ತಡವಾದಾಗ ಆತ ತನ್ನ ತಾಯಿ ಸಾಯುವರೆಗೂ ಬಿದಿರಿನ ಕೋಲಿನಿಂದ ಹೊಡೆದಿದ್ದಾನೆ ಎಂದು ವರದಿಯಾಗಿದೆ.
ತನ್ನ ತಾಯಿಯನ್ನು ಕೊಲೆ ಮಾಡಿದ ನಂತರ ಯುವಕ ತನ್ನ ಸಹೋದರಿ ಹಾಗೂ ಅತ್ತಿಗೆ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಆದರೆ ಅವರು ಆತನಿಂದ ತಪ್ಪಿಸಿಕೊಂಡಿದ್ದಾರೆ. ಆಗ ಅಕ್ಕಪಕ್ಕದ ಮನೆಯವರು ಆತನನ್ನು ಹಿಡಿದು, ರೂಮಿನಲ್ಲಿ ಕೂಡಿ ಹಾಕಿ, ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಗೋವಿಂದ್ಪುರ ಪೊಲೀಸ್ ಠಾಣೆಯ ಅಧಿಕಾರಿ ಮನೋಜ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಆತನ ಕುಟುಂಬದವರು ತಿಳಿಸಿದ್ದಾರೆ.