ಹೈದ್ರಾಬಾದ್: ತಿರುಮಲ ವೇಂಕಟೇಶ್ವರ ದೇವಸ್ಥಾನಕ್ಕೆ ಹೈದ್ರಾಬಾದ್ನ ಭಕ್ತರೊಬ್ಬರು ದುಬಾರಿ ಬೆಲೆಯ ಚಿನ್ನದ ಖಡ್ಗ ನೀಡಿದ್ದಾರೆ.
ಹೈದರಾಬಾದ್ನ ಭಕ್ತ ಎಂ.ಶ್ರೀನಿವಾಸ್ ಪ್ರಸಾದ್ ಮತ್ತು ಅವರ ಪತ್ನಿ ವೆಂಕಟೇಶ್ವರ ಸ್ವಾಮಿಗೆ 4 ಕೋಟಿ ರೂಪಾಯಿ ಮೌಲ್ಯದ 6.5 ಕೆಜಿ ತೂಕವುಳ್ಳ ಚಿನ್ನದ ಖಡ್ಗವನ್ನು ದೇವರಿಗೆ ಅರ್ಪಿಸಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದಾರೆ. ದೇವರಿಗೆ ಖಡ್ಗವನ್ನು ನೀಡುವ ಮೊದಲು ತಿರುಮಲ ಕಲೆಕ್ವಿವ್ ಅತಿಥಿ ಗೃಹದಲ್ಲಿ ಭಾನುವಾರ ಮಾಧ್ಯಮಗಳ ಮುಂದೆ ಚಿನ್ನದ ಖಡ್ಗವನ್ನು ಪ್ರದರ್ಶಿಸಿದ್ದಾರೆ.
ಈ ದಂಪತಿ ಕಳೆದ ವರ್ಷವೇ ದೇವಸ್ಥಾನಕ್ಕೆ ಖಡ್ಗ ಕಾಣಿಕೆಯಾಗಿ ಕೊಡಬೇಕು ಎಂದು ನಿರ್ಧರಿಸಿದ್ದೇವು. ಆದರೆ ಕೊರೊನಾ ಇರುವ ಕಾರಣದಿಂದಾಗಿ ಕೊಡಲು ಸಾಧ್ಯವಾಗಿರಲಿಲ್ಲ ಎಂದು ದಂಪತಿ ಹೇಳಿಕೊಂಡಿದ್ದಾರೆ.
ಈ ಖಡ್ಗವನ್ನು ತಮಿಳುನಾಡಿನ ಕೊಯುಮತ್ತೂರಿನಲ್ಲಿರುವ ವಿಶೇಷ ಆಭರಣಕಾರರು ತಯಾರಿಸಿದ್ದಾರೆ. ಆರುತಿಂಗಳ ಕಾಲಾವಕಾಶದಲ್ಲಿ ಖಡ್ಗ ತಯಾರಿಸಲಾಗಿದೆ. ಸುಮಾರು ಆರೂವರೆ ಕೆಜಿ ತೂಕವಿದೆ. ಸರಿಸುಮಾರಾಗಿ 4 ಕೋಟಿ ರೂಪಾಯಿಯಾಗಿದೆ.
ಇದಕ್ಕೂ ಮೊದಲು ತಮಿಳುನಾಡಿನ ತೆನಿ ಮೂಲದ ಜವಳಿ ವ್ಯಾಪಾರಿ ತಂಗಾ ದೋರೈ ಅವರು 2018ರಲ್ಲಿ 1.75 ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನದ ಕತ್ತಿಯನ್ನು ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿದ್ದರು.