ಧಾರವಾಡ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ನಡೆದಿರುವ ವಿಚಾರವಾಗಿ ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ನಡೆದ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆನ್ಲೈನ್ಲ್ಲೇ ಅಧಿಕಾರಿಗಳ ಬೆವರಿಳಿಸಿದ್ದಾರೆ.
ನವದೆಹಲಿಯಿಂದ ಆನ್ಲೈನ್ ನಲ್ಲೇ ವಿಡಿಯೋ ಸಂವಾದ ಮೂಲಕ ಸಭೆ ತೆಗೆದುಕೊಂಡ ಜೋಶಿ, ಬೇರೆಯವರ ಹೆಸರಿನಲ್ಲಿ ಹಣ ಜಮಾ ಮಾಡಿಸಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ವಿಷಯದ ಚರ್ಚೆ ಬಂದಾಗ, ಜಿಲ್ಲಾ ಪಂಚಾಯ್ತಿ ಸಿಇಒ ಸತೀಶ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಈ ವೇಳೆ ಸಮಾಜಾಯಿಸಿ ನೀಡಲು ಹೋಗಿ ಪ್ರಗತಿ ವರದಿಯಲ್ಲಿ ಪದ ಬಳಕೆ ತಪ್ಪಾಗಿದೆ ಎಂದು ಸಿಇಒ ಹೇಳಿದ್ದಕ್ಕೆ ಮತ್ತೆ ಆಕ್ರೋಶಿತರಾದ ಸಚಿವ ಜೋಶಿ, ನನ್ನ ಬಳಿ ಉದ್ಯೋಗ ಖಾತ್ರಿ ಹಣ ದುರುಪಯೋಗ ದಾಖಲೆಗಳಿವೆ ಎಂದು ತೋರಿಸಿದರು. ತಪ್ಪಿತಸ್ಥರ ವಿರುದ್ಧ ಈ ಕೂಡಲೇ ಕ್ರಮ ಕೈಗೊಳ್ಳುವಂತೆ ಸಿಇಒಗೆ ಜೋಶಿ ಖಡಕ್ ವಾರ್ನಿಂಗ್ ಕೂಡ ಮಾಡಿದರು.