Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

Exclusive: ಉಸಿರಿರೋತನಕ ಕೇಳಿ ಸಚಿವ ಸ್ಥಾನ ಪಡೆಯಲ್ಲ- ಕುಂದಾಪುರದ ವಾಜಪೇಯಿ ಹಾಲಾಡಿ ನೇರ ನುಡಿ

Public TV
Last updated: July 29, 2021 4:29 pm
Public TV
Share
3 Min Read
Haladi Srinivas Shetty 2
SHARE

– ಪಬ್ಲಿಕ್ ಟಿವಿ ಜೊತೆ ಮನಸ್ಸು ಬಿಚ್ಚಿಟ್ಟ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಉಡುಪಿ: ನಾನು ಸಚಿವ ಸ್ಥಾನವನ್ನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಉಸಿರು ಇರೋತನಕ ನಾನು ಬೆಂಗಳೂರಿಗೆ ಹೋಗಿ ಸಚಿವ ಸ್ಥಾನ ಕೇಳಲ್ಲ. ಯಾರ ಕಾಲಿಗೂ ಬೀಳುವುದಿಲ್ಲ ಎಂದು ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಯಾವ ನಾಯಕನ ಹಿಂದೆ ಸುತ್ತು ಬರುತ್ತಾ ತಿರುಗಾಡಲು ಹೋಗುವುದಿಲ್ಲ. ನಾನು ರಾಜಕೀಯದಲ್ಲಿ ಸಮತೋಲನ ಕಳೆದುಕೊಳ್ಳುವುದಿಲ್ಲ. ನಾನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ. ಈಗಲೂ ಕೇಳಲು ಹೋಗಲ್ಲ ಎಂದರು.

Haladi Srinivas Shetty 1

ಸರ್ಕಾರಿ ಕಾರು ಗನ್ ಮ್ಯಾನ್ ಮನೆ ಬೇಡ:
ರಾಜಕೀಯ ಲಾಬಿ, ಜಾತಿವಾದಿತನ ನಾನು ಮಾಡುವುದಿಲ್ಲ. ಯಾರ ಕಾಲಿಗೆ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಶ್ರದ್ಧೆಯಿಂದ ಮಾಡುತ್ತೇನೆ. ಶಾಸಕನಾಗಿ ಜನ ಸೇವೆಯನ್ನು ಐದು ಅವಧಿಯಲ್ಲೂ ಮಾಡುತ್ತಿದ್ದೇನೆ ಎಂದು ಹಾಲಾಡಿ ಹೇಳಿದರು.

UDP Haladi Srinivasa Shetty medium

ನಾನು ಮಂತ್ರಿಯಾದರೆ ಸರ್ಕಾರಿ ಕಾರು, ಎಸ್ಕಾರ್ಟ್, ಗನ್ ಮ್ಯಾನ್ ತೆಗೆದುಕೊಳ್ಳುವುದಿಲ್ಲ. ನಾನು ಜನರ ಜೊತೆ ಕೆಲಸ ಮಾಡುವವನು ನನಗೆ ಯಾವ ಜೀವ ಭಯವಿಲ್ಲ. ಜೀವ ಭಯ ಇದ್ದವರು ಜನಸೇವೆ ಮಾಡಲು ಸಾಧ್ಯವಿಲ್ಲ. Public Tv Exclusive medium ನನಗೆ ಈವರೆಗೆ ಯಾರಿಂದಲೂ ಯಾವುದೇ ಕರೆಗಳು ಮಾಹಿತಿಗಳು ಬಂದಿಲ್ಲ. ಕರೆ ಬಂದರೆ ನಾನು ಇದನ್ನು ಹೇಳಲು ಸಿದ್ಧನಿದ್ದೇನೆ ಎಂದರು. ನಾನು ಹೆಡ್ ರಾಜಕಾರಣಿ ಅಲ್ಲ. ನನ್ನದು ನೇರನುಡಿಯ ರಾಜಕಾರಣ. ದುರಹಂಕಾರ ಅಲ್ಲ, ಯಾರ ಭಯದಲ್ಲೂ ಇಲ್ಲ. ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು ಎಂದರು.

Haladi Srinivas Shetty 1

ಸ್ಥಾನಮಾನ ಕೇಳುವುದು ಪ್ರಜಾಪ್ರಭುತ್ವ ಅಲ್ಲ
ಕೇಳಿ ಸಚಿವ ಸ್ಥಾನವನ್ನ ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆ ಅಲ್ಲ. ಕೇಳಿ ಅಧಿಕಾರವನ್ನು ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಲ್ಲ. ಶ್ವಾಸ ಇದ್ದರೆ ಸಚಿವ ಸ್ಥಾನ ಕೇಳಲು ಹೋಗಲ್ಲ. ನಾನು ಜಾತ್ಯಾತೀತ ರಾಜಕಾರಣಿ. ನನ್ನ ಹುಟ್ಟಿನಿಂದ ನಾನು ಜಾತಿ ಸಂಘರ್ಷಕ್ಕೆ ಹೋಗಿಲ್ಲ. ಪ್ರಬಲ ಜಾತಿಯಲ್ಲಿ ಹುಟ್ಟಿದ್ದು ಆಕಸ್ಮಿಕ. ಎಲ್ಲಾ ಜಾತಿಯವರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಒಂದು ಜಾತಿಯ ಉದ್ಧಾರಕ್ಕಾಗಿ ಜನ ನನ್ನನ್ನು ಗೆಲ್ಲಿಸಿದ್ದಲ್ಲ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಇದನ್ನೂ ಓದಿ: ಇಂದಿನಿಂದ ಆಗಸ್ಟ್ 1ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

Udp Haladi Srinivasa Shetty F medium

ಜಾತಿವಾದಿಗಳು ಶಾಸಕರಾಗಲೇಬಾರದು
ಜಾತಿವಾದಿಗಳು ಜಾತಿಯ ಸಂಘಕ್ಕೆ ಸಚಿವರಾಗಬೇಕು. ಜಾತಿವಾದಿಗಳು ಯಾವುದೇ ಕಾರಣಕ್ಕೂ ಶಾಸಕರಾಗಬಾರದು. ಜಾತಿವಾದಿಗಳು ಸಾರ್ವತ್ರಿಕ ಚುನಾವಣೆಗೆ ಬರಬಾರದು. ನನ್ನಲ್ಲಿ ಯಾವುದೇ ನಾಟಕೀಯ ಮಾತುಗಳು ಇಲ್ಲ. ಉಪಯೋಗಕ್ಕೆ ಇಲ್ಲದ್ದನ್ನ ಕೊಟ್ಟರೆ ಕಿಸೆಗೆ ಹಾಕಿಕೊಂಡು ಬರುವುದಿಲ್ಲ. ಶಾಸಕರು ಹೆರಿಗೆ ಕೋಣೆಯ ದಾದಿಯ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಮಾರ್ಮಿಕವಾಗಿ ಹೇಳಿದರು. ನನ್ನ ಮಾತುಗಳನ್ನು ನೀವು ಹೇಗೆ ಬೇಕಾದರೂ ವಿಶ್ಲೇಷಣೆ ಮಾಡಿಕೊಳ್ಳಬಹುದು. ವಿಶ್ಲೇಷಣೆ ಮಾಡಲು ಮಾಧ್ಯಮಗಳಿಗೆ ಹಕ್ಕು ಇದೆ ಎಂದರು. ಇದನ್ನೂ ಓದಿ: ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ: ಜಗದೀಶ್ ಶೆಟ್ಟರ್

Basavaraj Bommai 1 2

ಹಾಲಾಡಿ ಶ್ರೀನಿವಾಸ್ ಶೆಟ್ಟಿ ಉಡುಪಿ ಜಿಲ್ಲೆಯ ಕುಂದಾಪುರದ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ಸಚಿವ ಸ್ಥಾನ ಕೊಡುವುದಾಗಿ ಬೆಂಗಳೂರಿಗೆ ಕರೆಸಿಕೊಂಡು ಬಿಜೆಪಿ ಒಮ್ಮೆ ಮೋಸ ಮಾಡಿತ್ತು. ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಮಂತ್ರಿ ಸ್ಥಾನ ಕೊಡುವ ಬದಲು ಕೋಟ ಶ್ರೀನಿವಾಸ ಪೂಜಾರಿಗೆ ಸಚಿವ ಸ್ಥಾನ ನೀಡಿತ್ತು. ಆ ಬೇಸರದಿಂದ ಪಕ್ಷೇತರರಾಗಿ ಹಾಲಾಡಿ ಸ್ಪರ್ಧೆ ಮಾಡಿ ಸುಮಾರು 40,611 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಬಿ.ಎಸ್ ಯಡಿಯೂರಪ್ಪ ಮತ್ತು ಟೀಂ ಸಂಧಾನ ಮಾಡಿ ಹಾಲಾಡಿ ತಣ್ಣಗಾಗಿದ್ದರು. ಪಕ್ಷೇತರರಾಗಿ ಗೆದ್ದ ನಂತರ ಐದು ವರ್ಷದ ಅವಧಿಯ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ತೇಜಸ್ವಿನಿ ಅನಂತ್ ಕುಮಾರ್, ಮಗಳು ಜೆಡಿಎಸ್‍ಗೆ ಬಂದ್ರೆ ಸ್ವಾಗತ, ಪಕ್ಷದಲ್ಲಿ ಉತ್ತಮ ಗೌರವ: ಎಚ್‍ಡಿಕೆ

TAGGED:Basavaraja BommaibjpBommai CabinetHaladi Srinivas ShettyKundapurPublic TVಕುಂದಾಪುರಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿಬೊಮ್ಮಾಯಿ ಕ್ಯಾಬಿನೆಟ್ಹಾಲಾಡಿ ಶ್ರೀನಿವಾಸ್ ಶೆಟ್ಟಿ
Share This Article
Facebook Whatsapp Whatsapp Telegram

You Might Also Like

Srinagar Kitty
Cinema

ವೇಷತೊಟ್ಟು ಜೋಗತಿಯಾದ ನಟ ಶ್ರೀನಗರ ಕಿಟ್ಟಿ

Public TV
By Public TV
3 minutes ago
Nandagokula Serial
Cinema

ನಂದಗೋಕುಲ ಧಾರಾವಾಹಿಯಲ್ಲಿ ಹೈಡ್ರಾಮಾ..!

Public TV
By Public TV
13 minutes ago
Bengaluru
Bengaluru City

ರೇಣುಕಾಸ್ವಾಮಿ ಮಾದರಿಯಲ್ಲಿ ಭಯಾನಕ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌ – ಪ್ರಮುಖ ಆರೋಪಿ ಅರೆಸ್ಟ್‌

Public TV
By Public TV
21 minutes ago
Kolar Sathish gowda wife
Districts

ಎನ್‌ಐಎ ನೊಟೀಸ್ ನೀಡಿರುವುದು ನಿಜ, ವಿಚಾರಣೆಗೆ ಹಾಜರಾಗುತ್ತೇವೆ: ಸತೀಶ್ ಗೌಡ ಪತ್ನಿ

Public TV
By Public TV
33 minutes ago
Kitty Party
Bengaluru City

ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

Public TV
By Public TV
43 minutes ago
Shiv Sena MLA Sanjay Gaikwad
Latest

ಹಳಸಿದ ದಾಲ್ ಬಡಿಸಿದ್ದಕ್ಕೆ ಕ್ಯಾಂಟೀನ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?