ರಾಯಚೂರು: ರಂಜಾನ್ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ವ್ಯಾಪಾರ ಜೋರಾಗಿದ್ದು, ಸುಡು ಬಿಸಿಲಿನಲ್ಲೂ ಜನ ಮುಗಿಬಿದ್ದು ವಸ್ತುಗಳನ್ನ ಕೊಳ್ಳುತ್ತಿದ್ದಾರೆ.
ಇಂದು ಸಂಜೆ 7 ರಿಂದಲೇ ಕರ್ಫ್ಯೂ ಇರುವುದರಿಂದ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿವೆ. ಹೀಗಾಗಿ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ವ್ಯಾಪಾರ ಸಾಧ್ಯವಿಲ್ಲ. ಸೋಮವಾರ ರಂಜಾನ್ ಇರುವುದರಿಂದ ಇಂದು ವ್ಯಾಪಾರ ವಹಿವಾಟು ಜೋರಾಗಿದೆ.
ನಗರದ ಬಟ್ಟೆ ಬಜಾರ್, ಸೂಪರ್ ಮಾರ್ಕೆಟ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನ ಮುಗಿಬಿದ್ದು ವ್ಯಾಪಾರ ನಡೆಸಿದ್ದಾರೆ. ಆದರೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನ ಮರೆತು ಜನರು ವ್ಯಾಪಾರ ಮಾಡುತ್ತಿದ್ದಾರೆ.
ಕೊರೊನಾ ವೈರಸ್ ಭೀತಿಯಿಲ್ಲದೆ ಗುಂಪು ಗುಂಪಾಗಿ ವ್ಯಾಪಾರ ಮಾಡುತ್ತಿದ್ದಾರೆ. ಹೀಗಾಗಿ ರಸ್ತೆಗಳಲ್ಲಿ ಜನ, ವಾಹನಗಳೇ ತುಂಬಿವೆ. ಆಹಾರ ಪದಾರ್ಥ, ಹಣ್ಣು, ಚಪ್ಪಲಿ, ಬಟ್ಟೆಗಳನ್ನ ಜನ ಯಾವುದೇ ಭಯಭೀತಿಯಿಲ್ಲದೆ ಕೊಳ್ಳುತ್ತಿದ್ದಾರೆ.