Public TV - Latest Kannada News, Public TV Kannada Live, Public TV News
- Advertisement -
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
Latest

ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್

Public TV
Last updated: 2021/06/09 at 2:26 PM
Public TV
Share
2 Min Read
SHARE

– ಮೂರನೇ ಅಲೆಗೆ ಸಿದ್ಧಗೊಳ್ಳಲು ಅಧಿಕಾರಿಗಳಿಗೆ ಸೂಚನೆ
– ಆಸ್ಪತ್ರೆಗಳು ಆಮ್ಲಜನಕದ ಇಂಡೆಂಟ್ ನೀಡಲು ನೂತನ ತಂತ್ರಜ್ಞಾನ

ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್ ಆಫೀಸರ್ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ. ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂದರ್ಭದಲ್ಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಅಲ್ಲದೆ ಜಿಲ್ಲೆಗಳಲ್ಲಿ ಬಫರ್ ಸ್ಟಾಕ್ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ: ರಾಜಾಹುಲಿ ಮನತುಂಬಿದ ನಗುವಿನ ಹಿಂದೆ ಅವರು..!

ಎನ್‍ಐಸಿ ಮೂಲಕ ಒಂದು ತಂತ್ರಜ್ಞಾನವನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಈ ತಂತ್ರಜ್ಞಾನದ ಮೂಲಕ ಆಸ್ಪತ್ರೆಗಳು ಆಮ್ಲಜನಕದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಇದು ಇನ್ನು 3 ದಿನಗಳಲ್ಲಿ ಸಿದ್ಧವಾಗಲಿದ್ದು ಅದನ್ನು ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುವುದು. ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ. ಒಂದು ಬಾರಿ ಈ ಪ್ರಕ್ರಿಯೆ ಪ್ರಾರಂಭವಾದ ನಂತರ ಗೊಂದಲಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ. ನೋಡಲ್ ಅಧಿಕಾರಿಗಳು ಆಸ್ಪತ್ರೆಗೆ ಆದ್ಯತೆಯ ಮೇರೆಗೆ ಆಮ್ಲಜನಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಮೇಲುಸ್ತುವಾರಿ ವಹಿಸಿಲಿದ್ದಾರೆ ಎಂದರು. ಇದನ್ನೂ ಓದಿ: ಗುರುವಾರದ ನಂತರ ಅನ್‍ಲಾಕ್ ಆಗುತ್ತಾ? ಮೊದಲ ಹಂತದಲ್ಲಿ ಯಾವುದಕ್ಕೆಲ್ಲ ವಿನಾಯ್ತಿ?

3ನೇ ಕೋವಿಡ್ ಅಲೆ ಬಂದರೆ ರಾಜ್ಯ ಆಮ್ಲಜನಕ ವಿಷಯದಲ್ಲಿ ಸಿದ್ಧವಾಗಿರಬೇಕಾಗಿರುವುದು ಬಹಳ ಅತ್ಯವಶ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಅಲ್ಲದೆ, ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಅಧಿಕಾರಿಗಳಿಗೆ ಇದೇ ಸಂಧರ್ಭದಲ್ಲಿ ಅಭಿನಂದಿಸಿದರು. ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್ ಅಧಿಕಾರಿ ಮೌನಿಶ್ ಮೌದ್ಗಿಲ್, ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED: Corona, Coronavirus, Covid 19, government, hospital, Jagadish Shettar, karnataka, ಆಮ್ಲಜನಕ, ಆಸ್ಪತ್ರೆ, ಕರ್ನಾಟಕ, ಕೇಂದ್ರ ಸರ್ಕಾರ, ಕೊರೊನಾ, ಕೊರೊನಾವೈರಸ್, ಕೋವಿಡ್ 19, ಜಗದೀಶ್ ಶೆಟ್ಟರ್, ಸರ್ಕಾರ
Share This Article
Facebook Twitter Whatsapp Whatsapp Telegram
ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
By Public TV
ದಿನ ಭವಿಷ್ಯ 30-09-2023
By Public TV
ಜಗತ್ತಿಗೆ ಭಿಕ್ಷುಕರ ರಫ್ತಿನಲ್ಲಿ ಪಾಕಿಸ್ತಾನವೇ ಫಸ್ಟ್ – ಜೇಬುಗಳ್ಳರ ಸಂಖ್ಯೆಯಲ್ಲೂ ಪಾಕಿಸ್ತಾನಿಯರೇ ಹೆಚ್ಚು
By Public TV
ಶನಿವಾರವೇ ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿಎಂ ತೀರ್ಮಾನ; ತಜ್ಞರ ಸಲಹೆಗಳೇನು?
By Public TV
ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ
By Public TV
ಯಡಿಯೂರಪ್ಪರಂತೆ ಅವರ ಪುತ್ರ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಬೇಕು: ರೇಣುಕಾಚಾರ್ಯ
By Public TV
ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
By Public TV

You Might Also Like

Chikkamagaluru

ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

Public TV By Public TV 36 mins ago
Bengaluru City

ರಾಜ್ಯದ ಹವಾಮಾನ ವರದಿ: 30-09-2023

Public TV By Public TV 15 hours ago
Astrology

ದಿನ ಭವಿಷ್ಯ 30-09-2023

Public TV By Public TV 17 hours ago
International

ಜಗತ್ತಿಗೆ ಭಿಕ್ಷುಕರ ರಫ್ತಿನಲ್ಲಿ ಪಾಕಿಸ್ತಾನವೇ ಫಸ್ಟ್ – ಜೇಬುಗಳ್ಳರ ಸಂಖ್ಯೆಯಲ್ಲೂ ಪಾಕಿಸ್ತಾನಿಯರೇ ಹೆಚ್ಚು

Public TV By Public TV 4 hours ago
Sports

ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲೇ ಪಾಕ್‌ಗೆ ಸೋಲಿನ ರುಚಿ – ಕಿವೀಸ್‌ಗೆ 5 ವಿಕೆಟ್‌ಗಳ ಜಯ

Public TV By Public TV 5 hours ago
Bengaluru City

ಶನಿವಾರವೇ ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿಎಂ ತೀರ್ಮಾನ; ತಜ್ಞರ ಸಲಹೆಗಳೇನು?

Public TV By Public TV 9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?