Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಮಧ್ಯೆ ನಾಳೆಯಿಂದ SSLC ಪರೀಕ್ಷೆ- ರಾಜ್ಯ ಸರ್ಕಾರದ ಕ್ರಮಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ಮಧ್ಯೆ ನಾಳೆಯಿಂದ SSLC ಪರೀಕ್ಷೆ- ರಾಜ್ಯ ಸರ್ಕಾರದ ಕ್ರಮಗಳೇನು?

Bengaluru City

ಕೊರೊನಾ ಮಧ್ಯೆ ನಾಳೆಯಿಂದ SSLC ಪರೀಕ್ಷೆ- ರಾಜ್ಯ ಸರ್ಕಾರದ ಕ್ರಮಗಳೇನು?

Public TV
Last updated: June 24, 2020 7:20 am
Public TV
Share
3 Min Read
SSLC FINAL
SHARE

– ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳ ಸಿದ್ಧತೆ

ಬೆಂಗಳೂರು: ಕೊರೊನಾ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ. ಜೊತೆಗೆ ಸಿದ್ಧತೆ ಕೂಡ ನಡೆಸಿದೆ.

ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ 3 ಸಾವಿರ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.

SSLC 1

ಜೊತೆಗೆ ಪ್ರತಿ ದಿನ ಪರೀಕ್ಷೆ ಮುಗಿದ ಬಳಿಕ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಖಡಕ್ ಆಗಿ ಸೂಚಿಸಲಾಗಿದೆ. 3,209 ಪರೀಕ್ಷಾ ಕೇಂದ್ರಗಳಲ್ಲಿ 5,755 ಆರೋಗ್ಯ ತಪಾಸಣೆ ಕೇಂದ್ರಗಳನ್ನ ತೆರೆಯಲಾಗಿದೆ. ಇಂದು ಮಲ್ಲೇಶ್ವರಂನ 13ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಸ್ಕೂಲ್‍ನಲ್ಲಿ ಪರೀಕ್ಷಾ ಸಿದ್ಧತೆಯ ಅಣುಕು ಪ್ರದರ್ಶನವನ್ನು ಶಿಕ್ಷಣ ಇಲಾಖೆ ಏರ್ಪಡಿಸಿದೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆ ಇಲ್ಲ
ಯಾವುದೇ ಕಾರಣಕ್ಕೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆ ಇಲ್ಲ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಎಕ್ಸ್ ಪರ್ಟ್ ಕಮೀಟಿ ಸದಸ್ಯ ವೈದ್ಯರ ಜೊತೆ ಈ ಎಲ್ಲಾ ಆತಂಕಗಳ ಬಗ್ಗೆ ಚರ್ಚಿಸಲಾಗಿದೆ. ಅವರ ಮಾರ್ಗದರ್ಶನ ಮೇಲೆ ಎಲ್ಲಾ ಸುರಕ್ಷಿತಾ ಕ್ರಮಗಳೊಂದಿಗೆ ಪರೀಕ್ಷಾ ಸಿದ್ಧತೆ ನಡೆದಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.

SSLC 1 1

ರಾಜ್ಯ ಸರ್ಕಾರದ ಕ್ರಮಗಳೇನು?
* ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ಕೊಡಲಾಗುವುದು
* ಪರೀಕ್ಷಾ ಕೇಂದ್ರದಲ್ಲಿ ಪ್ರತಿನಿತ್ಯ ಥರ್ಮಲ್ ಸ್ಕ್ಯಾನಿಂಗ್
* ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ವ್ಯವಸ್ಥೆ ಮಾಡಲಾಗಿದೆ
* ಪರೀಕ್ಷೆ ಮುಗಿದ ಬಳಿಕ ಪ್ರತಿ ಕೊಠಡಿ ಸ್ಯಾನಿಟೈಸ್
* ಶೌಚಾಲಯ ಶುಚಿತ್ವ ಕಾಪಾಡಲು ಅಗತ್ಯ ಕ್ರಮ
* ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಸಿಬ್ಬಂದಿ ನೇಮಕ
* 1 ಕೊಠಡಿಯಲ್ಲಿ 18 ವಿದ್ಯಾರ್ಥಿಗಳನ್ನು ಕೂರಿಸುವ ವ್ಯವಸ್ಥೆ
* ಪ್ರತಿ ವಿದ್ಯಾರ್ಥಿ ನಡುವೆ ಮೂರೂವರೆ ಅಡಿ ಅಂತರ
* ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಡೆಸ್ಕ್ ಗಳ ವ್ಯವಸ್ಥೆ
* ಅನ್ಯ ಆರೋಗ್ಯ ಸಮಸ್ಯೆ ಇದ್ದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ
* ಕಂಟೈನ್ಮೆಂಟ್ ಝೋನ್‍ನಲ್ಲಿ ಪರೀಕ್ಷಾ ಕೇಂದ್ರ ರದ್ದು
* ಇಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ
* ರೆಗ್ಯುಲರ್ ವಿದ್ಯಾರ್ಥಿಯಾಗಿ ಪರೀಕ್ಷೆ ಬರೆಯಲು ಅವಕಾಶ

SSLC 2

ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ತಜ್ಞರು ಕೆಲವೊಂದು ಸಲಹೆಗಳನ್ನ ನೀಡಿದ್ದಾರೆ.
* ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಅಂತರ ಪಾಲಿಸಬೇಕು
* ಸ್ನೇಹಿತರ ಜೊತೆ ಗುಂಪು ಚರ್ಚೆಯಲ್ಲಿ ತೊಡಗಿಸಿಕೊಳ್ಳಬೇಡಿ
* ಮಾಸ್ಕ್ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು
* ಮಾಸ್ಕ್ ಕಿರಿಕಿರಿಯಾದ್ರೆ ಆಗಾಗ ತೆಗೆದು ಸುಧಾರಿಸಿಕೊಳ್ಳಿ
* ಪರೀಕ್ಷಾ ಕೇಂದ್ರಕ್ಕೆ ಬೇಗ ಬಂದು ಆರೋಗ್ಯ ತಪಾಸಣೆ ಮಾಡಿಸಿ
* ವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ನೀರು ತೆಗೆದುಕೊಂಡು ಬನ್ನಿ
* ಸಾಧ್ಯವಾದರೆ ಕೈಗಳಿಗೆ ಆಗಾಗ ಸ್ಯಾನಿಟೈಸರ್ ಹಾಕಿಕೊಳ್ಳಿ
* ಪರೀಕ್ಷಾ ಕೇಂದ್ರದ ಬಳಿ ಹೊರಗಿನ ಪದಾರ್ಥ ತಿನ್ನಬೇಡಿ
* ಪರೀಕ್ಷೆ ಮುಗಿದ ಬಳಿಕವೂ ಸಾಮಾಜಿಕ ಅಂತರ ಪಾಲಿಸಿ
* ಪರೀಕ್ಷೆ ಕೇಂದ್ರಕ್ಕೆ ಬರುವಾಗ ಸಾರಿಗೆ ವ್ಯವಸ್ಥೆ ಬಗ್ಗೆ ಗಮನವಿರಲಿ
* ಒಂದು ವೇಳೆ ಮನೆಯಲ್ಲಿ ಕ್ವಾರಂಟೈನಿಗಳಿದ್ದರೆ ಮಾಹಿತಿ ನೀಡಿ
* ಪರೀಕ್ಷೆ ಬರೆಯದ ಪರಿಸ್ಥಿತಿ ಇದ್ದರೆ ಚಿಂತೆ ಬೇಡ
* ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ
* ಪರೀಕ್ಷಾ ಕೇಂದ್ರದಲ್ಲಿ ಅವ್ಯವಸ್ಥೆ ಇದ್ದರೆ ಮಾಹಿತಿ ನೀಡಿ

ವಿಜಯಪುರದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಸೋಂಕು
ಇದರ ಮಧ್ಯೆ ವಿಜಯಪುರ ಜಿಲ್ಲೆಯ ಖ್ವಾಜಾ ನಗರದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಧೃಡವಾಗಿದೆ. ಈ ಹಿನ್ನೆಲೆ ಸೋಂಕಿತ ವಿದ್ಯಾರ್ಥಿನಿಗೆ ನಾಳೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಅವಕಾಶಕ್ಕೆ ನಿರಾಕರಿಸಲಾಗಿದೆ. ಮುಂದಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಯುವತಿಗೆ ಅವಕಾಶ ನೀಡಲಾಗುವುದು ಅಂತ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಹೇಳಿದ್ದಾರೆ.

TAGGED:bengaluruCoronaDepartment of EducationexamPublic TVSSLCstudentsಎಸ್‍ಎಸ್‍ಎಲ್‍ಸಿಕೊರೊನಾಪಬ್ಲಿಕ್ ಟಿವಿಪರೀಕ್ಷೆಬೆಂಗಳೂರುವಿದ್ಯಾರ್ಥಿಗಳುಶಿಕ್ಷಣ ಇಲಾಖೆ
Share This Article
Facebook Whatsapp Whatsapp Telegram

Cinema news

Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories

You Might Also Like

Seemanth kumar Singh Maheshwar Rao
Bengaluru City

77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್

Public TV
By Public TV
11 minutes ago
Modi Trump
Latest

ಗುಡ್‌ ನ್ಯೂಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Public TV
By Public TV
46 minutes ago
Ballari Janardhan Reddy Sriramulu Model House Fire
Bellary

ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ

Public TV
By Public TV
51 minutes ago
Hubballi Cutout
Dharwad

ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್‌ ಮುರಿದು ಬಿದ್ದು ಮೂವರು ಗಂಭೀರ

Public TV
By Public TV
1 hour ago
Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
2 hours ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?