ಕ್ಲೈಮ್ಯಾಕ್ಸ್ ಹಂತದಲ್ಲಿ ಸಂಪುಟ ಸರ್ಕಸ್ – ಕ್ಯಾಬಿನೆಟ್ ಪಟ್ಟಿ ಫೈನಲ್‍ಗೆ ಕೌಂಟ್‍ಡೌನ್

Public TV
1 Min Read
Boomai Cabinet

– ಬೊಮ್ಮಾಯಿ ಸಂಪುಟಕ್ಕೆ ಯಾರು ಇನ್, ಯಾರು ಔಟ್?

ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ಸಂಪುಟ ಸರ್ಕಸ್ ಇಂದು ಮುಗಿಯುವ ಸಾಧ್ಯತೆ ಇದೆ. ಸಂಪುಟ ಪಟ್ಟಿ ಭಾನುವಾರ ರಾತ್ರಿಯೇ ಫೈನಲ್ ಆಗೋದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಸಂಭಾವ್ಯರ ಪಟ್ಟಿಯೊಂದಿಗೆ ಭಾನುವಾರ ಸಂಜೆ ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಂಪುಟ ಪಟ್ಟಿಯನ್ನು ಬಸವರಾಜ ಬೊಮ್ಮಾಯಿ ಫೈನಲ್ ಮಾಡಿಕೊಂಡು ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಒಂದೊಮ್ಮೆ ಎಲ್ಲಾ ಸರಿ ಹೋದಲ್ಲಿ ಇಂದು ಅಥವಾ ನಾಳೆ ಸಂಜೆಯೇ ನೂತನ ಸಂಪುಟ ಅಸ್ತಿತ್ವಕ್ಕೆ ಬರಲಿದೆ. ಈ ಬೆಳವಣಿಗೆ ಸಚಿವ ಸ್ಥಾನದ ಆಕಾಂಕ್ಷಿಗಳ ಎದೆ ಬಡಿತ ಹೆಚ್ಚಿಸಿದೆ.

BOMMAI 5

ಕಳೆದ ಬಾರಿ ಸಿಕ್ಕಂತೆ ಈ ಬಾರಿ ಬೆಂಗಳೂರಿನ ಶಾಸಕರಿಗೆ ಹೆಚ್ಚು ಪ್ರಾತಿನಿಧ್ಯ ಸಿಗೋದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಬಿಎಸ್‍ವೈ ಸಂಪುಟದಲ್ಲಿ ಬೆಂಗಳೂರಿನ 8 ಸಚಿವರಿದ್ದರು. ಬೊಮ್ಮಾಯಿ ಸಂಪುಟದಲ್ಲಿ ಅಷ್ಟು ಮಂದಿಗೆ ಚಾನ್ಸ್ ಸಿಗೋದು ಕಡಿಮೆ ಎನ್ನಲಾಗ್ತಿದೆ. ಇನ್ನು ಭಾನುವಾರ ಬೊಮ್ಮಾಯಿ ನಿವಾಸಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ ನೀಡಿ ಲಾಬಿ ಮಾಡಿದ್ರು. ಇದನ್ನೂ ಓದಿ: ಸ್ವಾಮೀಜಿಗಳು ಬಿಜೆಪಿಗೆ ಬೆದರಿಕೆ ಹಾಕುವುದು ತಪ್ಪು: ಈಶ್ವರಪ್ಪ

ಬೊಮ್ಮಾಯಿ ಸಂಪುಟ ಸೇರಬಹುದು ಎನ್ನಲಾಗಿರುವ ಸಂಭಾವ್ಯರ ಪಟ್ಟಿ:
ಬಸವ’ರಾಜ’ ‘ಮಂತ್ರಿ’ ಮಂಡಲ!
ಅಶ್ವತ್ಥ ನಾರಾಯಣ್- ಮಲ್ಲೇಶ್ವರಂ ಶಾಸಕ, ಶ್ರೀರಾಮುಲು-ಮೊಳಕಾಲ್ಮೂರು ಶಾಸಕ, ಅರವಿಂದ್ ಲಿಂಬಾವಳಿ-ಮಹದೇವಪುರ ಶಾಸಕ, ಮಾಧುಸ್ವಾಮಿ-ಚಿಕ್ಕನಾಯಕನಹಳ್ಳಿ ಶಾಸಕ, ಮುರುಗೇಶ್ ನಿರಾಣಿ-ಬೀಳಗಿ ಶಾಸಕ, ಮುನಿರತ್ನ-ಆರ್.ಆರ್.ನಗರ ಶಾಸಕ, ಬಿ.ಸಿ.ಪಾಟೀಲ್-ಹಿರೇಕೆರೂರು ಶಾಸಕ, ಬೈರತಿ ಬಸವರಾಜು-ಕೆಆರ್ ಪುರಂ ಶಾಸಕ, ಡಾ.ಕೆ.ಸುಧಾಕರ್-ಚಿಕ್ಕಬಳ್ಳಾಪುರ ಶಾಸಕ, ಎಸ್.ಟಿ.ಸೋಮಶೇಖರ್-ಯಶವಂತಪುರ ಶಾಸಕ, ಅರವಿಂದ ಬೆಲ್ಲದ್-ಧಾರವಾಡ ಪಶ್ಚಿಮ, ಉಮೇಶ್ ಕತ್ತಿ-ಹುಕ್ಕೇರಿ ಶಾಸಕ, ವಿ.ಸೋಮಣ್ಣ-ಗೋವಿಂದರಾಜನಗರ ಶಾಸಕ, ಸುನಿಲ್ ಕುಮಾರ್-ಕಾರ್ಕಳ ಶಾಸಕ, ಎಸ್.ಅಂಗಾರ-ಸುಳ್ಯ ಶಾಸಕ ಇದನ್ನೂ ಓದಿ: ಇಂದು ಅಥವಾ ನಾಳೆ ಸಂಪುಟ ರಚನೆ: ಸಿಎಂ ಬೊಮ್ಮಾಯಿ

Share This Article