Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಗದಿಯಂತೆ ನಡೆಯಲಿದೆ ಸಿಇಟಿ – ಹೈಕೋರ್ಟ್‌ನಲ್ಲಿ ಮ್ಯಾರಥಾನ್‌ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ನಿಗದಿಯಂತೆ ನಡೆಯಲಿದೆ ಸಿಇಟಿ – ಹೈಕೋರ್ಟ್‌ನಲ್ಲಿ ಮ್ಯಾರಥಾನ್‌ ವಿಚಾರಣೆ

Corona

ನಿಗದಿಯಂತೆ ನಡೆಯಲಿದೆ ಸಿಇಟಿ – ಹೈಕೋರ್ಟ್‌ನಲ್ಲಿ ಮ್ಯಾರಥಾನ್‌ ವಿಚಾರಣೆ

Public TV
Last updated: July 29, 2020 7:37 pm
Public TV
Share
5 Min Read
CET EXAM 3
Students writing Common Entrance Test (CET) at an Examination centre in Hubballi on Tuesday. -KPN ### Hubballi: CET exam
SHARE

ಬೆಂಗಳೂರು: ನಾಳೆ ನಿಗದಿಯಾದಂತೆ ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ ಸಿಇಟಿ ಪರೀಕ್ಷೆಯನ್ನು  ಮುಂದೂಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಮಹತ್ವದ ಆದೇಶ ಪ್ರಕಟಿಸಿದೆ.

ಕೊರೊನಾ ಸಮಯದಲ್ಲಿ ಸಿಇಟಿ ನಡೆಸುತ್ತಿರುವುದನ್ನು ಪ್ರಶ್ನಿಸಿ ವಕೀಲರಾದ ಎಸ್.ಪಿ. ಪ್ರದೀಪ್ ಕುಮಾರ್, ಅಬ್ದುಲ್ಲಾ ಖಾನ್‌, ಎನ್‌ಎಸ್‌ಯುಐ ವಿದ್ಯಾರ್ಥಿಗಳು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ ನ್ಯಾ. ಅರವಿಂದ ಕುಮಾರ್ ಮತ್ತು ನ್ಯಾ. ಎಂ.ಐ ಅರುಣ್ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು. ಮಧ್ಯಾಹ್ನ 2:30ಕ್ಕೆ ಆರಂಭಗೊಂಡ ವಿಚಾರಣೆ ಸಂಜೆ 5:30ರ ವರೆಗೆ ನಡೆಯಿತು. ಬಳಿಕ 15 ನಿಮಿಷ ಮುಂದೂಡಿ ಮತ್ತೆ ಆರಂಭವಾಗಿ ಮತ್ತೆ ಮುಂದೂಡಲಾಗಿತ್ತು. ಅಂತಿಮವಾಗಿ ರಾತ್ರಿ 7:30ಕ್ಕೆ ಆದೇಶ ಪ್ರಕಟಕೊಂಡಿತು.

2nd puc exam 4

ಸಿಇಟಿಯನ್ನು ಮುಂದೂಡಿದರೆ ಏನು ನಷ್ಟವಾಗಲಿದೆ? ಮುಂದೂಡಿದರೆ ಸರಿಪಡಿಸಲಾಗದಷ್ಟು ತೊಂದರೆಯಾಗಲಿದೆಯೇ ಎಂದು ನ್ಯಾ. ಅರವಿಂದ್‌ ಕುಮಾರ್‌ ಸರ್ಕಾರವನ್ನು ಪ್ರಶ್ನೆ ಮಾಡಿದರು. ಮುಂದೂಡಿದರೆ ಈಗಾಗಲೇ ಸಿದ್ಧಗೊಂಡಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಎಎಜಿ ಧ್ಯಾನ್ ಚಿನ್ನಪ್ಪ ಉತ್ತರ ನೀಡಿದರು.

ಕಂಟೈನ್ಮೆಂಟ್ ಝೋನ್ ನಿಂದ ಬರುವವರಿಗೆ ಸೂಕ್ತ ವ್ಯವಸ್ಥೆ ‌ಮಾಡಬೇಕು. ಎಲ್ಲಾ ಪೊಲೀಸರಿಗೆ ಈ ಬಗ್ಗೆ ಮಾಹಿತಿ‌ ನೀಡಬೇಕು. ಅವರ ಕೈಯಲ್ಲಿ ಇರುವ ಹಾಲ್ ಟಿಕೆಟ್‌ ಪಾಸ್ ಎಂದು ಪರಿಗಣಿಸಬೇಕು ಎಂದು ಹೈಕೋರ್ಟ್‌ ಸರ್ಕಾರಕ್ಕೆ ಸೂಚಿಸಿತು.

karnataka high court

ವಾದ ಹೀಗಿತ್ತು:
ಅರ್ಜಿದಾರರ ಪರ ಹಿರಿಯ ವಕೀಲ ಪೊನ್ನಣ್ಣ, ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಕಡಿಮೆ ಇತ್ತು. ಈಗ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ. ಬೆಂಗಳೂರು ನಗರದಲ್ಲಿ 48 ಸಾವಿರ ಪ್ರಕರಣವಿದೆ. ನೂರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ವಾದಿಸಿದರು.

ಅರ್ಜಿದಾರರ ಪರ ವಕೀಲ ಅನಿಲ್‌ ಕುಮಾರ್‌ ವಾದ ಮಂಡಿಸಿ, 97 ಕೇಂದ್ರಗಳಲ್ಲಿ ಎರಡು ದಿನ ಪರೀಕ್ಷೆ ನಡೆಯಲಿದೆ. ಪಾಸಿಟಿವ್‌ ಇರುವವರು ಸ್ವಂತ ಅಂಬುಲೆನ್ಸ್‌ನಲ್ಲಿ 2 ಗಂಟೆ ಮೊದಲು ಬರಬೇಕು. ಜೊತೆ ಲಂಚ್‌ ಬಾಕ್ಸ್‌ ತರಬೇಕು ಎಂದು ಮಾರ್ಗಸೂಚಿ ಹೇಳಿದೆ. ಆದರೆ ಈಗ ಆಸ್ಪತ್ರೆಗೆ ತೆರಳಲು ಅಂಬುಲೆನ್ಸ್‌ ಇಲ್ಲದಿರುವಾಗ ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪ್ರಶ್ನಿಸಿದರು.

PUC English Exam A

ವಕೀಲ ಅಬ್ದುಲ್ ಮನನ್ ಖಾನ್, ಪರೀಕ್ಷೆಯಲ್ಲಿ ಬೆರಳಚ್ಚು ತೆಗೆದುಕೊಳ್ಳಲು ಇಂಕ್ ಪ್ಯಾಡ್ ಬಳಸುತ್ತಾರೆ. ಎಲ್ಲರೂ ಅದೇ ಇಂಕ್ ಪ್ಯಾಡ್ ಬಳಸಿದರೆ ಕೊರೊನಾ ಒಬ್ಬರಿಂದ ಒಬ್ಬರಿಗೆ ಹಬ್ಬುವ ಸಾಧ್ಯತೆಯಿದೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳೇ ಈಗ ಪರೀಕ್ಷೆ ಬೇಡ ಎಂದು ಆಂದೋಲನ ಮಾಡುತ್ತಿದ್ದಾರೆ. ಹೀಗಾಗಿ ಈ ಸಮಯದಲ್ಲಿ ಪರೀಕ್ಷೆ ಮಾಡುವುದು ಬೇಡ ಎಂದು ವಾದಿಸಿದರು.

ಸರ್ಕಾರ ಪರ ಎಎಜಿ ಧ್ಯಾನ್ ಚಿನ್ನಪ್ಪ, ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಿದ್ದಾರೆ. ಅವರೆಲ್ಲ ನಾಳೆ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು. ಪೊನ್ನಣ್ಣ ಅವರು ಪಕ್ಕದ ತೆಲಂಗಾಣದಲ್ಲಿ ಪರೀಕ್ಷೆಯನ್ನು ಮುಂದೂಡಿದ್ದಾರೆ ಎಂದಾಗ ಎಎಜಿ, ಎರಡು ವಾರದ ಹಿಂದೆ ಕೇರಳದಲ್ಲಿ ಎಂಜಿನಿಯರಿಂಗ್ ಪರೀಕ್ಷೆ ಮಾಡಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದರು.

PUC English Exam D

ಕಲಾಪದ ವೇಳೆ ಹೈಕೋರ್ಟ್‌ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಂತೆ ಸಿಇಟಿಯಲ್ಲೂ ವಂಚಿತರಾದವರಿಗೆ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಾ ಎಂದು ಪ್ರಶ್ನಿಸಿತು. ಇದಕ್ಕೆ ಎಎಜಿ 40 ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಅವರಿಗೆ ಈಗಾಗಲೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್‌ನಲ್ಲೂ ಕೊರೊನಾ ನಿಯಂತ್ರಣಕ್ಕೆ ಬರುವ ಸಾಧ್ಯತೆ ಇಲ್ಲ ಎಂದು ಉತ್ತರಿಸಿದರು.

ನ್ಯಾ. ಅರವಿಂದ ಕುಮಾರ್ ಮತ್ತೊಮ್ಮೆ ಪರೀಕ್ಷೆಯಿಂದ ವಂಚಿತರಾದವರ ಕಥೆ ಏನು? ಪರೀಕ್ಷೆಗೆ ಇನ್ನು ಕೆಲ ಗಂಟೆ ಇದೆ ಆದರೆ ಸೂಕ್ತ ವ್ಯವಸ್ಥೆ ಮಾಡಿಲ್ಲ. ಇಷ್ಟು ಆತುರದಿಂದ ಪರೀಕ್ಷೆಯನ್ನು ಯಾಕೆ ನಡೆಸಲಾಗುತ್ತದೆ ಎಂದು ಸರ್ಕಾರವನ್ನು ಪ್ರಶ್ನಿಸಿದರು.

PUC 8 2

ನೀವು ಪರೀಕ್ಷೆ ದಿನ ನಿಗದಿ ಪಡಿಸಿದ್ದೀರಿ. ಪರೀಕ್ಷೆ ದಿನಾಂಕ ಪ್ರಕಟವಾಗುವಾಗ ಸಂಖ್ಯೆ ಬಹಳ ಕಡಿಮೆ ಇತ್ತು. ಈಗ ವಿದ್ಯಾರ್ಥಿಗಳನ್ನು ತೊಂದರೆಗೆ ಸಿಲುಕಿಸಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿ ಸರ್ಕಾರದ ಮಾರ್ಗಸೂಚಿಯ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.

ನಾಳೆ ಪಾಸಿಟಿವ್ ಇರುವ ವಿದ್ಯಾರ್ಥಿ ಬಂದರೆ ಆತ ಎಲ್ಲಿ ಇರಬೇಕು? ವಿದ್ಯಾರ್ಥಿಯ ಉಷ್ಣಾಂಶ ಜಾಸ್ತಿ ಆದರೆ ಅವನ ಗತಿ ಏನು? ನಿಮ್ಮ ಎಸ್‌ಒಪಿ ಜುಲೈ 18 ರಂದು ಬಂದಿದೆ. ಅಂದಿಗೂ ಇಂದಿಗೂ ಬಹಳ ವ್ಯತ್ಯಾಸ ಇದೆ ಅಲ್ವಾ? ಈಗಾಗಲೇ ಮನೆಯವರಿಗೆ ಪಾಸಿಟಿವ್‌ ಇದ್ದು, ಆ ವಿದ್ಯಾರ್ಥಿಗಳು ಪರೀಕ್ಷೆಗೆ ಬಂದರೆ ಏನು ಕ್ರಮ ತೆಗೆದುಕೊಂಡಿದ್ದೀರಿ? ಕಂಟೈನ್ಮೆಂಟ್ ಝೋನ್ ಗಳು ಈಗ ಬದಲಾಗಿದೆ ಎಲ್ಲವೇ ಎಂದು ಜಡ್ಜ್‌ ಸರ್ಕಾರವನ್ನು ಪ್ರಶ್ನಿಸಿದರು.

ಈ ಪ್ರಶ್ನೆಗೆ ಎಎಜಿ, ನಿನ್ನೆ ಎಲ್ಲಾ ಜಿಲ್ಲಾಡಳಿತದ ಜೊತೆ ಸಭೆ ಮಾಡಲಾಗಿದೆ. ಎಲ್ಲರೂ ಪರೀಕ್ಷೆ ಗೆ ಸಿದ್ದರಾಗಿದ್ದಾರೆ. 8,100 ರೂಂ ‌ಗಳ ವ್ಯವಸ್ಥೆ ಇದೆ. 1,94000 ವಿದ್ಯಾರ್ಥಿಗಳು ಬರೆಯುತ್ತಾರೆ. ಯುಜಿಸಿ ಪರೀಕ್ಷೆಗಳು ಸೆಪ್ಟೆಂಬರ್ 30ಕ್ಕೆ ಮುಕ್ತಾಯ ಆಗುತ್ತದೆ. ಕೊರೋನಾ ಕಡಿಮೆ ಆಗುತ್ತಾ? ಜಾಸ್ತಿ ಆಗುತ್ತಾ ಎನ್ನುವುದು ನಮಗೂ ಗೊತ್ತಿಲ್ಲ ಎಂದು ಉತ್ತರಿಸಿದರು.

2nd puc exam 4

ಈಗಾಗಲೇ 37 ಸಾವಿರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವನ್ನು ಬದಲಾಯಿಸಿದ್ದಾರೆ. ಪಿಯುಸಿ ಇಂಗ್ಲಿಷ್‌, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿದೆ. ಎಲ್ಲ ಕೇಂದ್ರಗಳಲ್ಲಿ ಒಂದು ಕೊಠಡಿಯನ್ನು ಮೀಸಲಿಡಲಾಗುತ್ತದೆ. ಉಷ್ಣಾಂಶದಲ್ಲಿ ವ್ಯತ್ಯಾಸ ಆದರೆ ಅಲ್ಲಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಉತ್ತರಿಸಿದರು. ಎರಡು ಕಡೆಯ ವಾದವನ್ನು ಆಲಿಸಿದ ಕೋರ್ಟ್ ರಾತ್ರಿ 7:30ಕ್ಕೆ ತನ್ನ‌  ಆದೇಶವನ್ನು ಪ್ರಕಟಿಸಿತು.

ಅರ್ಜಿಯಲ್ಲಿ ಏನಿತ್ತು?
ರಾಜ್ಯದಲ್ಲಿ 2020ನೇ ಸಾಲಿನ ಸಿಇಟಿ ಪರೀಕ್ಷೆ ಜುಲೈ 30, 31 ಹಾಗೂ ಆಗಸ್ಟ್ 1ಕ್ಕೆ ನಿಗದಿ ಪಡಿಸಿ ಮೇ 13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಜುಲೈ 18ರಂದು ಪ್ರಾಧಿಕಾರ ಪರೀಕ್ಷಾ ಕೇಂದ್ರಗಳು ಯಾವ ರೀತಿ ತಯಾರಿ ನಡೆಸಬೇಕು ಎಂಬುದರ ಸಂಬಂಧವಾಗಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.

2nd puc exam 1

ಕೊರೊನಾ ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ಪಿಯು ಅಂಕಗಳ ಆಧಾರದಲ್ಲಿ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ಪ್ರವೇಶ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದರು.

ರಾಜ್ಯದಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ನಂತರ ಪರೀಕ್ಞಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

2nd puc exam 6

ಜುಲೈ 30 ರಂದು ಜೀವಶಾಸ್ತ್ರ, ಗಣಿತ ಜುಲೈ 31 ರಂದು ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ನಡೆದರೆ ಆಗಸ್ಟ್‌ ಒಂದರಂದು ಬೆಂಗಳೂರು ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಪ್ರತಿ ದಿನ ಬೆಳಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕನ್ನಡ ಭಾಷಾ ಪರೀಕ್ಷೆಯನ್ನು 50 ಅಂಕಗಳಿಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾಗುತ್ತದೆ. ಇತರೆ ವಿಷಯಗಳ ಪರೀಕ್ಷೆಗಳನ್ನು 60 ಅಂಕಗಳಿಗೆ ನಡೆಸಲಾಗುತ್ತದೆ.

ಮೊದಲನೇ ವರ್ಷದ / ಮೊದಲನೇ ಸೆಮಿಸ್ಟರ್ ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನದ ಕೋರ್ಸ್‌ಗಳು ಮತ್ತು ಬಿ-ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.

TAGGED:CETeducation high courtkarnatakaಕರ್ನಾಟಕಕೊರೊನಾಕೋವಿಡ್ 19ಸಿಇಟಿಹೈಕೋರ್ಟ್
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

panipat women
Crime

ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಅಂತ 6 ವರ್ಷದ ಹುಡುಗಿ ಕೊಂದ ಮಹಿಳೆ

Public TV
By Public TV
10 minutes ago
chalavadi narayanaswamy 1
Bengaluru City

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Public TV
By Public TV
48 minutes ago
BY Vijayendra MP Renukacharya
Bengaluru City

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ: ರೇಣುಕಾಚಾರ್ಯ

Public TV
By Public TV
50 minutes ago
MP RENUKACHARYA
Bengaluru City

ಕಾಂಗ್ರೆಸ್ ಹೈಕಮಾಂಡ್ ಸತ್ತು ಹೋಗಿದೆ, ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟ ಬಿಟ್ಟು ರೈತರ ಸಮಸ್ಯೆ ಆಲಿಸಲಿ: ರೇಣುಕಾಚಾರ್ಯ

Public TV
By Public TV
1 hour ago
Mandya
Districts

ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Public TV
By Public TV
2 hours ago
eshwara khandre forest staff
Chamarajanagar

ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?