Bengaluru City
ರಜನಿಕಾಂತ್ ಸಂಘಟನೆಯಿಂದ ಹಿರಿಯ ಕಲಾವಿದರಿಗೆ ಸಹಾಯ

– 40 ಹಿರಿಯ ಕಲಾವಿದರಿಗೆ ದಿನಸಿ ಕಿಟ್ ವಿತರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಜನಿಕಾಂತ್ ಸಂಘಟನೆಯ ರಜನಿ ಸಂತೋಷ್ ಮತ್ತು ತಂಡದವರು ಸುಮಾರು 40 ಜನ ಹಿರಿಯ ಕಲಾವಿದರಿಗೆ ಒಂದು ತಿಂಗಳಿಗಾಗುವಷ್ಟು ದಿನಸಿ ಕಿಟ್ಗಳನ್ನು ನೀಡುವ ಮೂಲಕ ಸಹಾಯ ಮಾಡಿದ್ದಾರೆ.
ಪಬ್ಲಿಕ್ ಟಿವಿ ಕಚೇರಿಗೆ ಕರೆ ಮಾಡಿ ಮಾಹಿತಿ ಪಡೆದು. ಬೆಂಗಳೂರಿನಿಂದ ಸುಮಾರು 70 ಕಿ.ಮೀ.ದೂರದಲ್ಲಿರುವ ಕುಂಬಳೆ ಗ್ರಾಮದ ಹಿರಿಯ ಕಲಾವಿದರಿಗೆ ದಿನಸಿ ಕಿಟ್ಗಳನ್ನು ವಿತರಿಸಿದ್ದಾರೆ. ಸುಮಾರು ಎರಡು ತಿಂಗಳಿಂದ ಈ ಬಡ ಕಲಾವಿದರಿಗೆ ಯಾವುದೇ ಕೆಲಸವಿಲ್ಲದೆ ಊಟಕ್ಕೆ ಪರದಾಡುತ್ತಿದ್ದರು. ವಿಷಯ ತಿಳಿದ ಕರ್ನಾಟಕ ರಾಜ್ಯ ರಜನಿಕಾಂತ್ ಸಂಘಟನೆಯ ರಜನಿ ಸಂತೋಷ್ ಮತ್ತು ತಂಡ ಬೆಂಗಳೂರಿನಿಂದ ಸುಮಾರು 70 ಕಿ.ಮೀ.ದೂರ ತೆರಳಿ ಕಲಾವಿದರಿಗೆ ಸಹಾಯ ಮಾಡಿದೆ.
ಸಂಘಟನೆಯ ಸದಸ್ಯರು ಸುಮಾರು 40 ಹಿರಿಯ ಕಲಾವಿದರಿಗೆ ಒಂದು ತಿಂಗಳಿಗಾಗುವಷ್ಟು ದಿನಸಿ ಕಿಟ್ ನೀಡಿ ಮಾನವೀಯತೆ ಮೆರೆದಿದ್ದಾರೆ. ದಿನಸಿ ಪಡೆದ ಕಲಾವಿದರು ಸಂತಸ ವ್ಯಕ್ತಪಡಿಸಿದ್ದು, ದಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
