– ಮೈ ಮೇಲೆ ಒಂಚೂರು ಗಾಯಗಳಿಲ್ಲ
– ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಬೈಕ್ಗಳು
ವಿಜಯಪುರ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿದ್ದರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೂವಿನಹಿಪ್ಪರಗಿ ಗ್ರಾಮದ ಬಳಿ ನಡೆದಿದೆ.
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಳಿಯ ದಿಂಡವಾರ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಕುಮಾರ್ (22) ಮೃತ ಬೈಕ್ ಸವಾರನಾಗಿದ್ದು, ಇನ್ನಿಬ್ಬರ ಹೆಸರು ಪತ್ತೆಯಾಗಿಲ್ಲ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವಕರು ಕಲಬುರ್ಗಿ ಜಿಲ್ಲೆಯ ಅಪ್ಜಲಪುರದಿಂದ ಅಂಜನಾದ್ರಿ ಬೆಟ್ಟಕ್ಕೆ ಬೈಕ್ ಸವಾರಿ ಹೊರಟಿದ್ದರು ಎನ್ನಲಾಗಿದೆ. ಆದರೆ ವೇಗವಾಗಿ ಬಂದು ಬೈಕ್ಗಳು ಡಿಕ್ಕಿ ಹೊಡೆದಿದ್ದರೂ ಮೃತಪಟ್ಟವರಿಗೆ ಕೇವಲ ತಲೆಗೆ ಮಾತ್ರ ಗಾಯಗಾಗಿದೆ. ಆದರೆ ಮೈ ಮೇಲೆ ಒಂಚೂರು ಗಾಯಗಳಿಲ್ಲ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನಿಗೂ ಕೇವಲ ತಲೆ ಮೇಲೆ ಗಾಯವಾಗಿದೆ. ಇದರಿಂದ ಅಪಘಾತದ ಬಗ್ಗೆ ಅನುಮಾನ ಹುಟ್ಟಿಸುವಂತಾಗಿದೆ.
ಡಿಕ್ಕಿಯ ರಭಸಕ್ಕೆ ಎರಡು ಬೈಕ್ಗಳು ಹೊತ್ತಿ ಉರಿದಿವೆ. ಈ ಕುರಿತು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.