ಬೆಂಗಳೂರು: ಕಲ್ಯಾಣ ಮಂಟಪಕ್ಕೆ ನೀಡಲಾಗಿದ್ದ ಹಣವನ್ನು ವಾಪಸ್ ಹಿಂದಿರುಗಿಸುವಂತೆ ಮಾಲೀಕರಿಗೆ ಸಚಿವ ಆರ್ ಅಶೋಕ್ ಸೂಚನೆ ನೀಡಿದ್ದಾರೆ.
ಹೌದು. ಲಾಕ್ಡೌನ್ ಹೊತ್ತಲ್ಲಿ ಮದುವೆ ಸೇರಿ ಅನೇಕ ಶುಭ ಕಾರ್ಯಗಳು ರದ್ದಾಗಿದ್ದವು. ಆದರೆ ಕಲ್ಯಾಣ ಮಂಟಪಗಳಿಗೆ ನೀಡಿದ್ದ ಅಡ್ವಾನ್ಸ್ ಹಣ ವಾಪಸ್ ಆಗಿರಲಿಲ್ಲ. ಈ ಬಗ್ಗೆ ಅನೇಕ ಮಂದಿ, ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆಮಾಡಿ ಸಮಸ್ಯೆ ಹೇಳಿಕೊಂಡಿದ್ದರು.



