Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರಸ, ವಿರಸ, ಸಾಮರಸ್ಯ ಇದ್ದರೆ ಸಂಸಾರ – ಘಟನೆಯ ಬಗ್ಗೆ ಕಲ್ಯಾಣ್ ಸ್ಪಷ್ಟನೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಸರಸ, ವಿರಸ, ಸಾಮರಸ್ಯ ಇದ್ದರೆ ಸಂಸಾರ – ಘಟನೆಯ ಬಗ್ಗೆ ಕಲ್ಯಾಣ್ ಸ್ಪಷ್ಟನೆ

Public TV
Last updated: October 4, 2020 12:39 pm
Public TV
Share
3 Min Read
KALYAN
SHARE

– ನಾನು, ನನ್ನ ಹೆಂಡ್ತಿ ಚೆನ್ನಾಗಿದ್ದೀವಿ

ಬೆಳಗಾವಿ: ಪ್ರತಿಯೊಂದು ಸಂಸಾರದಲ್ಲೂ ಜಗಳ ನಡೆಯುತ್ತದೆ. ಸರಸ, ವಿರಸ, ಸಾಮರಸ್ಯ ಇದ್ದರೆ ಅದು ಸಂಸಾರ. ನಮ್ಮ ಸಂಸಾರ ಚೆನ್ನಾಗಿದೆ ಎಂದು ಪ್ರೇಮಕವಿ ಕೆ.ಕಲ್ಯಾಣ್ ತಮ್ಮ ದಾಂಪತ್ಯ ಜೀವನದ ಬಗ್ಗೆ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಕಲ್ಯಾಣ್, ನಮ್ಮ ತಂದೆ ತೀರಿಕೊಂಡು 14 ವರ್ಷ ಆಗಿದೆ. ನಮ್ಮ ತಾಯಿ ಎರಡೂವರೆ ವರ್ಷದ ಹಿಂದೆ ಸಾವನ್ನಪ್ಪಿದ್ದಾರೆ. ಅಲ್ಲಿಯತನಕ ನಾವೆಲ್ಲರೂ ಒಟ್ಟಿಗೆ ಇದ್ವಿ, ಆಮೇಲೆ ನಾನು, ನನ್ನ ಹೆಂಡತಿ ಒಟ್ಟಿಗೆ ಬೇರೆ ಮನೆಯಲ್ಲಿ ವಾಸಮಾಡುತ್ತಿದ್ವಿ. ನಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿ ಪತ್ನಿಯ ಪೋಷಕರು ವಾಸಮಾಡುತ್ತಿದ್ದರು. ವಯಸ್ಸಾದರೂ ಯಾಕೆ ಬೇರೆ ಇರಬೇಕು ಎಂದು ನಮ್ಮ ಮನೆಗೆ ಕರೆದುಕೊಂಡು ಬಂದು ಒಟ್ಟಿಗೆ ವಾಸ ಮಾಡುತ್ತಿದ್ದೆವು ಎಂದರು.

kalyan 2 e1601782507451

ಮೊದಲಿಗೆ ನಾನು ನನ್ನ ಹೆಂಡತಿ ಚೆನ್ನಾಗಿದ್ದೀವಿ. ನಮ್ಮಿಬ್ಬರಲ್ಲಿ ಯಾವುದೇ ಪರಸ್ಪರ ಗೊಂದಲಗಳಿಲ್ಲ. ನನ್ನ ಪತ್ನಿ ಬೆಳಗಾವಿಯವರು ನಾವಿಬ್ಬರು ಮದುವೆಯಾಗಿ 15 ವರ್ಷ ಆಗಿದೆ. ಪ್ರತಿಯೊಬ್ಬರ ಸಂಸಾರದಲ್ಲೂ ಸಣ್ಣಪುಟ್ಟ ಏಳು ಬೀಳುಗಳು ಆರೋಪಗಳಿರುತ್ತವೆ. ಸರಸ, ವಿರಸ, ಸಾಮರಸ್ಯ ಇದ್ದರೇನೆ ಅದು ಸಂಸಾರ. ನಮ್ಮ ಸಂಸಾರನೂ ಚೆನ್ನಾಗಿದೆ ಎಂದು ಸ್ಪಷ್ಟಪಡಿಸಿದರು.

kalyan 6 e1601793419875

ಅತ್ತ, ಮಾವ ಬಂದ ಒಂದು ವಾರಕ್ಕೆ ಗಂಗಾ ಕುಲಕರ್ಣಿಯನ್ನು ಅಡಿಗೆ ಕೆಲಸಕ್ಕಾಗಿ ನೇಮಿಸಿಕೊಳ್ಳಲಾಗಿತ್ತು. ಆದರೆ ಆಕೆಯ ನಡವಳಿಕೆ ನನಗೂ ನನ್ನ ಪತ್ನಿಗೂ ಇಷ್ಟವಾಗಿರಲಿಲ್ಲ. ಅಲ್ಲದೇ ಆಕೆಯ ಬಂದ 4-5 ದಿನಗಳಲ್ಲಿ ಪತ್ನಿ, ಅತ್ತೆ, ಮಾವ ಯಾಕೋ ಸೈಲೆಂಟ್ ಆದರು. ನನಗೆ ಏನೋ ನಿಗೂಢತೆ ರೀತಿ ಕಾಣಿಸುತ್ತಿತ್ತು. ಒಂದು ದಿನ ಮಧ್ಯರಾತ್ರಿ ಅತ್ತೆ ದೇವರ ಮನೆಯಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ದೀಪ ಹಚ್ಚಿಕೊಂಡು ಬೆಳಗ್ಗೆ ಸುಮಾರು 3 ಗಂಟೆಯವರೆಗೂ ಪೂಜೆ ಮಾಡಲು ಶುರು ಮಾಡಿದರು. ಆಗ ಗಂಗಾ ಕುಲಕರ್ಣಿಯ ಸಲಹೆಯಂತೆ ಪೂಜೆ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಾಯಿತು.

kalyan 8

ಪದೇ ಪದೇ ನನಗೆ ಗೊತ್ತಿರುವ ಗುರೂಜಿ ಇದ್ದಾರೆ. ಅವರ ಆಶೀರ್ವಾದ ಪಡೆದುಕೊಂಡರೆ ಒಳ್ಳೆದಾಗುತ್ತದೆ ಎಂದು ಗಂಗಾ ಕುಲಕರ್ಣಿ ಹೇಳುತ್ತಿದ್ದರು. ಒಮ್ಮೆ ಆ ವ್ಯಕ್ತಿಗೆ ಫೋನ್ ಮಾಡಿ ಕೊಟ್ಟಿದ್ದರು. ಆತನ ಹೆಸರು ಶಿವನಂದ ವಾಲಿ. ಪೂಜೆ ಮಾಡಿಸಲು ಹೇಳಿದ್ರು, ನಾನು ಒಪ್ಪಲಿಲ್ಲ. ಆದರೆ ನಮ್ಮ ಅತ್ತೆಯವರು ಗುರೂಜಿ ಜೊತೆ ಗಂಟೆಗಟ್ಟಲೇ ಫೋನಿನಲ್ಲಿ ಮಾತನಾಡುತ್ತಿದ್ದರು. ಜನವರಿ 9 ರಂದು ರಾತ್ರಿ ಬೆಳಗಾವಿಗೆ ಹೋಗಿ ಬರುತ್ತೇವೆ ಎಂದು ಪತ್ನಿ, ಅತ್ತೆ, ಮಾವ ಮೂವರು ಹೋದರು. ಆದರೆ ಜನವರಿ 10ರಂದು ಪತ್ನಿಯ ಫೋನ್ ಸ್ವಿಚ್ ಆಫ್ ಆಗಿತ್ತು. ಕೊನೆಗೆ ಜನವರಿ 17 ರಂದು ಬೆಳಗಾವಿಗೆ ಬಂದು ನೋಡಿದೆ. ಆಗ ಅತ್ತೆ ನನ್ನ ಪತ್ನಿಯನ್ನು ಭೇಟಿ ಮಾಡಲು ಬಿಡಲಿಲ್ಲ. ಅಲ್ಲಿಯೂ ಗಂಗಾ ಕುಲಕರ್ಣಿ ಹೇಳಿದಂತೆ ಪೂಜೆ ಮಾಡುತ್ತಿದ್ದರು ಎಂದು ಕಲ್ಯಾಣ್ ತಿಳಿಸಿದರು.

kalyan 11

ಒಂದು ದಿನ ಮೂವರು ಮನೆ ಖಾಲಿ ಮಾಡಿಕೊಂಡು ಬೇರೆ ಕಡೆ ಹೋಗಿದ್ದರು. ಆ ಮನೆಯಲ್ಲಿ ಗಂಗಾ ಕುಲಕರ್ಣಿ, ಶಿವನಂದ ವಾಲಿ ಪೂಜೆ ಮಾಡಲು ಶುರು ಮಾಡಿದ್ದರು. ಈ ವಿಚಾರ ಗೊತ್ತಾಗಿ ಬರುವಷ್ಟರಲ್ಲಿ ಆ ಮನೆಯನ್ನು ಖಾಲಿ ಮಾಡಿ ಬೇರೆ ಕಡೆ ಹೋಗಿದ್ದಾರೆ ಎಂದು ನನಗೆ ಗೊತ್ತಾಯಿತು. ಬೆಂಗಳೂರಿನ ಬಂದು ಎಲ್ಲ ಕಡೆ ಹುಡುಕಿದೆ. ಆಗ ಮೂವರು ಪತ್ತೆಯಾದರು. ಆದರೆ ಈ ವೇಳೆ ನನ್ನ ಪತ್ನಿಯನ್ನು ಮಾತನಾಡಲು ಬಿಡದೆ ರೂಮಿಗೆ ಕರೆದುಕೊಂಡು ಹೋದರು. ಆಕೆಯ ಕತ್ತಲ್ಲಿ ನಾನು ಕಟ್ಟಿದ್ದ ತಾಳಿಯೂ ಇರಲಿಲ್ಲ. ನನ್ನ ಪತ್ನಿ ಬೇರೆ ಅಪರಿಚಿತರ ಜೊತೆ ಮಾತನಾಡುವ ರೀತಿ ಮಾತಾಡಿದರು.

kalyan 10 e1601793477569

ಅಲ್ಲದೇ ನನ್ನ ಪತ್ನಿಯ ತಾಯಿ ಸಂಬಂಧಿಕರಿಗೆ ಫೋನ್ ಮಾಡಿ ಲಕ್ಷಾಂತರ ಹಣಬೇಕು ಎಂದು ಕೇಳಿದ್ದಾರೆ. ಪೂಜೆ ಮಾಡಿಸಬೇಕು, ಇಲ್ಲವಾದರೆ ನಮ್ಮ ಪ್ರಾಣಕ್ಕೆ ಅಪಾಯ ಇದೆ. ಹಣವನ್ನು ಗುರೂಜಿಗೆ ಕೊಡಬೇಕು ಎಂದು ಹಣ ಕೇಳಿದ್ದಾರೆ. ಒಂದು ದಿನ ನನ್ನ ಪತ್ನಿಯ ಅಕೌಂಟ್‍ನಿಂದ ಏಕಾಏಕಿ 1.20 ಲಕ್ಷ ಹಣ ಶಿವಾನಂದ ವಾಲಿಗೆ ಅಕೌಂಟ್‍ಗೆ ವರ್ಗಾವಣೆಯಾಗಿದೆ. ಸಂಬಂಧಿಕರ ಬಳಿ ಪಡೆದಿದ್ದ ಹಣವನ್ನ ಶಿವಾನಂದ ವಾಲಿಗೆ ಕೊಟ್ಟಿದ್ದಾರೆ. ಅಲ್ಲದೇ ಬೆಳಗಾವಿಯಲ್ಲಿ ಅತ್ತೆ, ಮಾವ ಹೆಸರಿನಲ್ಲಿದ್ದ ಆಸ್ತಿಯೂ ಕೂಡ ಶಿವಾನಂದ ವಾಲಿಗೆ ವರ್ಗಾವಣೆ ಆಗಿದೆ ಎಂದರು.

kalyan 16

ಇದ್ದಕ್ಕಿದ್ದಂತೆ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಮೂರು ತಿಂಗಳಿನಿಂದ ಸಂಬಂಧಿಕರ ಸಂಪರ್ಕದಲ್ಲೂ ಇರಲಿಲ್ಲ. ನನ್ನ ಪತ್ನಿಯ ಕುಟುಂಬಸ್ಥರ ಜೊತೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ನಾನು ದೂರು ದಾಖಲಿಸಿರುವೆ. ದೂರಿನಲ್ಲಿ ನನ್ನ ಅತ್ತೆ, ಮಾವ ಕಾಣಿಸಿಕೊಳ್ಳುತ್ತಿಲ್ಲ. ನಮ್ಮ ಕುಟುಂಬಕ್ಕೆ ಸಂಬಂಧ ಇಲ್ಲದ ವ್ಯಕ್ತಿಗೆ ಆಸ್ತಿ, ಹಣ ಎಲ್ಲವನ್ನೂ ಬರೆದುಕೊಟ್ಟಿರುವ ಬಗ್ಗೆ ಹೇಳಿದ್ದೇನೆ. ದೂರು ನೀಡಿದ 48 ಗಂಟೆಯ ಒಳಗೆ ಅತ್ತೆ, ಮಾವ, ಪತ್ನಿ ಪತ್ತೆಯಾಗಿದ್ದಾರೆ. ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಒಂದೇ ದಿನ ಫೋನ್ ಸ್ವಿಚ್ ಆಪ್ ಮಾಡಿದ್ದಾರೆ. ಅತ್ತೆ ಮಾವನಿಗೆ ವಯಸ್ಸಾಗಿದೆ. ಹೀಗಾಗಿ ಅವರು ಕಾಣಿಸಿಕೊಳ್ಳದ ಕಾರಣ ದೂರು ನೀಡಿದ್ದೆ. ಶಿವಾನಂದ ವಾಲಿ ಬಂಧನ ಆಗುತ್ತಿದ್ದಂತೆ ನನ್ಮ ಪತ್ನಿ ನನ್ನ ವಿರುದ್ಧ ಆರೋಪಗಳನ್ನ ಮಾಡಿದ್ದಾರೆ ಎಂದು ನಡೆದ ಘಟನೆಯ ಬಗ್ಗೆ ಕೆ.ಕಲ್ಯಾಣ್ ವಿವರವಾಗಿ ತಿಳಿಸಿದರು.

Share This Article
Facebook Whatsapp Whatsapp Telegram
Previous Article modi nitish small ಬಿಹಾರ ಚುನಾವಣೆ – ಆರ್‌ಜೆಡಿ, ಬಿಜೆಪಿ ಸೀಟ್‌ ಹಂಚಿಕೆ ಬಹುತೇಕ ಪೂರ್ಣ
Next Article yuvi padikal ನಿಮ್ಮ ಜೊತೆ ಸ್ಪರ್ಧೆ ಮಾಡಲ್ಲ ಪಾಜಿ: ಯುವಿಗೆ ಪಡಿಕಲ್ ಉತ್ತರ

Latest Cinema News

Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories
Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized
Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National

You Might Also Like

HD Devegowda
Districts

ಹಾಸನ ದುರಂತ – ಮೃತ ಎಂಜಿನಿಯರಿಂಗ್‌ ವಿದ್ಯಾರ್ಥಿ ಕುಟುಂಬಕ್ಕೆ ನೆರವಾದ ಹೆಚ್‌ಡಿಡಿ

9 minutes ago
hassan accident 1
Districts

Hassan Tragedy | ಬಿಜಿಎಸ್ ಆಸ್ಪತ್ರೆಯಿಂದ ಟ್ರಕ್ ಚಾಲಕ ಡಿಸ್ಚಾರ್ಜ್‌ – ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕಾಣಿಸಿಕೊಂಡ ಎದೆನೋವು!

1 hour ago
Anekal 1
Bengaluru City

ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

2 hours ago
Bengaluru 1
Latest

ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ ಆರೋಪ

2 hours ago
Shubman Gill 1
Cricket

ಭಾರತ-ಪಾಕ್‌ ಕದನಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಗಿಲ್‌ಗೆ ಗಾಯ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?