ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾಗೆ ಹರಿಯಾಣ ಸರ್ಕಾರ 6 ಕೋಟಿ ರೂ. ಹಾಗೂ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬ್ರ್ಯಾಂಡ್ ನ್ಯೂ ಎಕ್ಸ್ ಯುವಿ 700 ಕಾರ್ ನ್ನು ಉಡುಗೊರೆಯಾಗಿ ನೀಡುವುದಾಗಿ ಘೊಷಿಸಿದ್ದಾರೆ.
Yes indeed. It will be my personal privilege & honour to gift our Golden Athlete an XUV 7OO @rajesh664 @vijaynakra Keep one ready for him please. https://t.co/O544iM1KDf
— anand mahindra (@anandmahindra) August 7, 2021
ನೀರಜ್ ಚೋಪ್ರಾ ಶನಿವಾರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಅಥ್ಲೆಟಿಕ್ ಲೋಕ ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಲ್ಲದೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಹೀಗಾಗಿ ಸರ್ಕಾರಗಳು ಸೇರಿದಂತೆ ಹಲವರು ಅವರಿಗೆ ಉಡುಗೊರೆಗಳನ್ನು ಘೊಷಿಸುತ್ತಿದ್ದಾರೆ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ
The Javelin throw is arguably the most frequently used image for commemorative coins. We need to have one officially released depicting #NeerajChopra @narendramodi @ianuragthakur pic.twitter.com/034m0ISTis
— anand mahindra (@anandmahindra) August 7, 2021
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೊಷಿಸಿದ್ದಾರೆ. ಇದರ ಬೆನ್ನಲ್ಲೇ ಆನಂದ್ ಮಹೀದ್ರಾ ಸಹ ಟ್ವೀಟ್ ಮಾಡುವ ಮೂಲಕ ನೀರಜ್ಗೆ ಹೊಸ ಎಸ್ಯುವಿ ಕಾರ್ ಗಿಫ್ಟ್ ಕೊಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್
धन्य हैं वो माता पिता जिन्होंने भारत को ऐसा सपूत दिया!
टोक्यो में तिरंगा झंडा फहरा कर हरियाणा के बेटे नीरज चोपड़ा ने आज इतिहास रच दिया है। नीरज चोपड़ा के स्वर्ण पदक जीतने पर उनके पिता श्री सतीश चोपड़ा जी से फ़ोन पर बात कर उन्हें बधाई दी। pic.twitter.com/QXMrvqJ9d7
— Manohar Lal (@mlkhattar) August 7, 2021
ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಉನ್ನತ ಮಟ್ಟದ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್ಗೆ ಗೌರವ ಸಲ್ಲಿಸಿದ್ದಾರೆ.