Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಕೋಲದಲ್ಲಿ ಹತ್ತನೇ ಶತಮಾನದ ತಾಮ್ರ ಶಾಸನ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂಕೋಲದಲ್ಲಿ ಹತ್ತನೇ ಶತಮಾನದ ತಾಮ್ರ ಶಾಸನ ಪತ್ತೆ

Districts

ಅಂಕೋಲದಲ್ಲಿ ಹತ್ತನೇ ಶತಮಾನದ ತಾಮ್ರ ಶಾಸನ ಪತ್ತೆ

Public TV
Last updated: January 16, 2021 4:14 pm
Public TV
Share
2 Min Read
web dsb
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕುಂಬಾರಕೇರಿಯಲ್ಲಿ ಕದಂಬೇಶ್ವರ ದೇವಾಲಯದ ಮರುನಿರ್ಮಾಣ ಕಾರ್ಯಕ್ಕಾಗಿ ಭೂಮಿ ಅಗೆಯುವ ವೇಳೆ 5 ಸೆಂ.ಮೀ ಹಾಗೂ 20 ಸೆಂ.ಮೀ ಉದ್ದಳತೆಯ ಜೊತೆಗೆ 15 ಸೆಂ.ಮೀ ಮತ್ತು 10 ಸೆಂ.ಮೀ ಉದ್ದಳತೆಯ ಎರಡು ತಾಮ್ರ ಶಾಸನಗಳು ಪತ್ತೆಯಾಗಿದೆ.

ಈ ಸಂಬಂಧ ದೇವಸ್ಥಾನದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ವಿಠ್ಠಲರಾವ್ ವರ್ಣೇಕರ್ ಮಾಹಿತಿ ನೀಡಿದ್ದು, ಹೆಚ್ಚಿನ ಸಂಶೋಧನೆ ನಡೆಸಲು ಜಿಲ್ಲೆಯ ಇತಿಹಾಸ ತಜ್ಞ ಶ್ಯಾಮಸುಂದರ್ ಮುಂದಾಗಿದ್ದಾರೆ. ಈ ಶಾಸನವು ಕಲ್ಯಾಣ ಚಾಲುಕ್ಯರ ತ್ರೈಳೋಕ್ಯಮಲ್ಲನ ಆಡಳಿತ ಕಾಲದ್ದಾಗಿದ್ದು ಹತ್ತನೇ ಶತಮಾನದ್ದಾಗಿದೆ.

ಶಾಸನದಲ್ಲೇನಿದೆ?
ಸ್ವಸ್ತಿ ಸಮಸ್ತ ಭುವನಾಶ್ರಯ ಪ್ರತೂವೀವಲ್ಲಭ ಮಹಾರಾಜಾಧಿರಾಜ ಸತ್ಯಾಶ್ರಯ
ಕುಳತಿಳಕ ಪರಮಭಟ್ಟಾರಕ ಚಾಳುಕ್ಯಾಭರಣ

ಶ್ರೀಮತ್ರೈಲೋಕ್ಯಮಲ್ಲ ದೇವರ ರಾಜ್ಯದಲ್ಲಿ ಶಕವರ್ಷ 897ನೇಯ ಯುವ ಸಂವತ್ಸರದ ಭಾದ್ರಪದ ಮಾಸದ ಅಮವಾಸ್ಯೆ ಆದಿತ್ಯವಾರದಂದು ಸಂಭವಿಸಿದ ಸೂರ್ಯ ಗ್ರಹಣದ ಸಂದರ್ಭದಲ್ಲಿ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನು ಕದಂಬೇಶ್ವರ ದೇವಾಲಯ ನಿರ್ಮಾಣ ಮಾಡಿ, ಸಿವರಾಸಿ ಜೀಯರ ಪಾದಗಳಿಗೆ ನಮಿಸಿ, ಕಣ್ನಸೆ, ಬಡ್ಡಗಿವಾಳ್ಯ, ಸತ್ಯಾವಾಳು, ನಂದಾದೀವಿಗೆ, ಸೋಡಗ್ರ್ಗೆ ಇತ್ಯಾದಿ ನಿತ್ಯ ದೇವಸ್ವಂ ಕಾರ್ಯಗಳಿಗಾಗಿ ಹರದರಕೇರಿಯಿಂದ ಹತ್ತು ಗದ್ಯಾಣ ಮತ್ತು ತೆಂಕಣ ಕೇರಿಯಿಂದ ಐದು ಗದ್ಯಾಣ(ಹಣ)ವನ್ನು ದಾನವಾಗಿ ನೀಡಲಾಯಿತು.

ಈ ಧರ್ಮವನ್ನು ಹಾಳು ಮಾಡಿದವರು ಕುರುಕ್ಷೇತ್ರದಲ್ಲಿ, ವಾರಣಾಸಿಯಲ್ಲಿ ಸಾವಿರ ಗೋವುಗಳನ್ನು ಕೊಂದಂತಹ ಪಾಪಕ್ಕೆ ಗುರಿಯಾಗುತ್ತಾರೆ ಎಂಬ ಶಾಪಾಶಯದ ನುಡಿಗಳಿವೆ.

ಶಾಸನದ ಪ್ರಾಮುಖ್ಯತೆ:
ಪ್ರಸ್ತುತ ಶಾಸನಗಳು 10ನೇ ಶತಮಾನದ ಕೊನೆಯಲ್ಲಿ ಅಂಕೋಲೆಯು ನೇರವಾಗಿ ಕಲ್ಯಾಣ ಚಾಲುಕ್ಯರ ಆಡಳಿತಕ್ಕೆ ಒಳಪಟ್ಟಿತ್ತು ಎಂಬ ವಿಷಯವನ್ನು ತಿಳಿಸುತ್ತದೆ. ಶಾಸನದಲ್ಲಿ ಯಾವುದೇ ಮಾಂಡಳೀಕ ಅರಸನ ಉಲ್ಲೇಖವಿಲ್ಲ. ದೇವಾಲಯವನ್ನು ಕಟ್ಟಿಸಿದ ಭೂತಯ್ಯಗಡಂಬ ತ್ರೈಲೋಕ್ಯಮಲ್ಲನ ಯಾವುದೋ ಒಬ್ಬ ಅಧಿಕಾರಿಯಾಗಿರಬೇಕು. ಈ ಶಾಸನವು ಶಕವರ್ಷ 897 ಅಂದರೆ ಕ್ರಿ.ಶ. 975ನೇ ಇಸವಿಯಲ್ಲಿ ನಿರ್ಮಾಣವಾಗಿರುವುದು ತಿಳಿಸುವುದರಿಂದ ಇಂದಿಗೆ ಸರಿಯಾಗಿ 1046 ವರ್ಷಗಳ ಹಿಂದೆ ಕದಂಬೇಶ್ವರ ದೇವಾಲಯ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನಿಂದ ನಿರ್ಮಾಣವಾಯಿತೆಂದು ಸ್ಪಷ್ಟವಾಗಿ ಹೇಳುತ್ತದೆ.

ಅಂತೆಯೇ ತೆಂಕಣಕೇರಿಯನ್ನು ಉಲ್ಲೇಖಿಸಿರುವುದರಿಂದ ಅದರ ಪ್ರಾಚೀನತೆಯೂ 1046 ವರ್ಷಗಳಷ್ಟು ಹಿಂದಕ್ಕೆ ಒಯ್ಯುತ್ತದೆ. ಶಾಸನದಲ್ಲಿ ಉಲ್ಲೇಖಿತ ತ್ರೈಲೋಕ್ಯಮಲ್ಲನು ಕಲ್ಯಾಣ ಚಾಳುಕ್ಯರ ಎರಡನೇ ತೈಲಪನಾಗಿದ್ದು ಈತನು ಕ್ರಿ.ಶ.973 ರಿಂದ 979ರ ವರೆಗೆ ಆಳ್ವಿಕೆ ನಡೆಸಿದ್ದಾನೆ. ಈತನ ಅವಧಿಯಲ್ಲಿ ಅಧಿಕಾರಿಯಾಗಿದ್ದ ಭೂತಯ್ಯ ಗಡಂಬ ಕದಂಬ ವಂಶಸ್ಥನಾಗಿರಬೇಕು ಎಂದು ಊಹಿಸಲಾಗಿದೆ.

ಭೂತಯ್ಯ+ಕದಂಬ=ಭೂತಯ್ಯಗಡಂಬ. ಆದ್ದರಿಂದಲೇ ಆತ ಕಟ್ಟಿಸಿದ ದೇವಾಲಯ ಕದಂಬೇಶ್ವರ ದೇವಾಲಯವೆಂದು ಖ್ಯಾತಿಯಾಗಿದೆ. ಅಲ್ಲದೆ ಶಾಸನವು ಸಿವರಾಸಿ ಜೀಯನನ್ನು ಉಲ್ಲೇಖಿಸುವುದರಿಂದ ಆ ಸಮಯದಲ್ಲಿ ಈ ಪ್ರದೇಶದಲ್ಲಿ ಕಾಳಾಮುಖ ಯತಿಗಳ ಪ್ರಾಬಲ್ಯವಿರುವುದರ ಕುರಿತು ಬೆಳಕು ಚೆಲ್ಲುತ್ತದೆ. ಶಾಸನದಲ್ಲಿ ಬರುವ ತೆಂಕಣಕೇರಿಯು ಇಂದಿನ ತೆಂಕಣ ಕೇರಿಯೆಂದು ಗುರುತಿಸಿದರೆ ಶಾಸನ ಹೇಳುವ ‘ತಳವಟ್ಟೆ ಧಮ್ಮಗೇರಿ ಹರದರಕೇರಿ’ಯನ್ನು ತಳವೃತ್ತಿಯಾ ಧಾರಿತ ವ್ಯಾಪಾರಿಗಳ ಕೇರಿ ಎಂದು ಭಾವಿಸಿದಾಗ ಅದನ್ನು ಇಂದಿನ ಕುಂಬಾರಕೇರಿ ಎಂದು ಗುರುತಿಸಬಹುದು ಎಂದು ಶ್ಯಾಮಸುಂದರ ಗೌಡ ವಿವರಿಸಿದ್ದಾರೆ.

TAGGED:AngolaCopperInscriptionPublic TVಅಂಕೋಲಉತ್ತರ ಕನ್ನಡತಾಮ್ರಪಬ್ಲಿಕ್ ಟಿವಿ Uttara Kannadaಶಾಸನ
Share This Article
Facebook Whatsapp Whatsapp Telegram

Cinema news

NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories

You Might Also Like

Vantamuri Woman Assault Case 12 people sentenced to 5 years in rigorous imprisonment
Belgaum

ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ – 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

Public TV
By Public TV
11 minutes ago
HD Kumaraswamy
Latest

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Public TV
By Public TV
55 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
1 hour ago
BY Vijayendra
Bengaluru City

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ ಕಿಡಿ

Public TV
By Public TV
1 hour ago
Piyush Goyal
Latest

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Public TV
By Public TV
2 hours ago
Syed Naseer Hussain
Latest

ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?