Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಂಕೋಲದಲ್ಲಿ ಹತ್ತನೇ ಶತಮಾನದ ತಾಮ್ರ ಶಾಸನ ಪತ್ತೆ

Public TV
Last updated: January 16, 2021 4:14 pm
Public TV
Share
2 Min Read
web dsb
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕುಂಬಾರಕೇರಿಯಲ್ಲಿ ಕದಂಬೇಶ್ವರ ದೇವಾಲಯದ ಮರುನಿರ್ಮಾಣ ಕಾರ್ಯಕ್ಕಾಗಿ ಭೂಮಿ ಅಗೆಯುವ ವೇಳೆ 5 ಸೆಂ.ಮೀ ಹಾಗೂ 20 ಸೆಂ.ಮೀ ಉದ್ದಳತೆಯ ಜೊತೆಗೆ 15 ಸೆಂ.ಮೀ ಮತ್ತು 10 ಸೆಂ.ಮೀ ಉದ್ದಳತೆಯ ಎರಡು ತಾಮ್ರ ಶಾಸನಗಳು ಪತ್ತೆಯಾಗಿದೆ.

ಈ ಸಂಬಂಧ ದೇವಸ್ಥಾನದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ವಿಠ್ಠಲರಾವ್ ವರ್ಣೇಕರ್ ಮಾಹಿತಿ ನೀಡಿದ್ದು, ಹೆಚ್ಚಿನ ಸಂಶೋಧನೆ ನಡೆಸಲು ಜಿಲ್ಲೆಯ ಇತಿಹಾಸ ತಜ್ಞ ಶ್ಯಾಮಸುಂದರ್ ಮುಂದಾಗಿದ್ದಾರೆ. ಈ ಶಾಸನವು ಕಲ್ಯಾಣ ಚಾಲುಕ್ಯರ ತ್ರೈಳೋಕ್ಯಮಲ್ಲನ ಆಡಳಿತ ಕಾಲದ್ದಾಗಿದ್ದು ಹತ್ತನೇ ಶತಮಾನದ್ದಾಗಿದೆ.

ಶಾಸನದಲ್ಲೇನಿದೆ?
ಸ್ವಸ್ತಿ ಸಮಸ್ತ ಭುವನಾಶ್ರಯ ಪ್ರತೂವೀವಲ್ಲಭ ಮಹಾರಾಜಾಧಿರಾಜ ಸತ್ಯಾಶ್ರಯ
ಕುಳತಿಳಕ ಪರಮಭಟ್ಟಾರಕ ಚಾಳುಕ್ಯಾಭರಣ

ಶ್ರೀಮತ್ರೈಲೋಕ್ಯಮಲ್ಲ ದೇವರ ರಾಜ್ಯದಲ್ಲಿ ಶಕವರ್ಷ 897ನೇಯ ಯುವ ಸಂವತ್ಸರದ ಭಾದ್ರಪದ ಮಾಸದ ಅಮವಾಸ್ಯೆ ಆದಿತ್ಯವಾರದಂದು ಸಂಭವಿಸಿದ ಸೂರ್ಯ ಗ್ರಹಣದ ಸಂದರ್ಭದಲ್ಲಿ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನು ಕದಂಬೇಶ್ವರ ದೇವಾಲಯ ನಿರ್ಮಾಣ ಮಾಡಿ, ಸಿವರಾಸಿ ಜೀಯರ ಪಾದಗಳಿಗೆ ನಮಿಸಿ, ಕಣ್ನಸೆ, ಬಡ್ಡಗಿವಾಳ್ಯ, ಸತ್ಯಾವಾಳು, ನಂದಾದೀವಿಗೆ, ಸೋಡಗ್ರ್ಗೆ ಇತ್ಯಾದಿ ನಿತ್ಯ ದೇವಸ್ವಂ ಕಾರ್ಯಗಳಿಗಾಗಿ ಹರದರಕೇರಿಯಿಂದ ಹತ್ತು ಗದ್ಯಾಣ ಮತ್ತು ತೆಂಕಣ ಕೇರಿಯಿಂದ ಐದು ಗದ್ಯಾಣ(ಹಣ)ವನ್ನು ದಾನವಾಗಿ ನೀಡಲಾಯಿತು.

ಈ ಧರ್ಮವನ್ನು ಹಾಳು ಮಾಡಿದವರು ಕುರುಕ್ಷೇತ್ರದಲ್ಲಿ, ವಾರಣಾಸಿಯಲ್ಲಿ ಸಾವಿರ ಗೋವುಗಳನ್ನು ಕೊಂದಂತಹ ಪಾಪಕ್ಕೆ ಗುರಿಯಾಗುತ್ತಾರೆ ಎಂಬ ಶಾಪಾಶಯದ ನುಡಿಗಳಿವೆ.

ಶಾಸನದ ಪ್ರಾಮುಖ್ಯತೆ:
ಪ್ರಸ್ತುತ ಶಾಸನಗಳು 10ನೇ ಶತಮಾನದ ಕೊನೆಯಲ್ಲಿ ಅಂಕೋಲೆಯು ನೇರವಾಗಿ ಕಲ್ಯಾಣ ಚಾಲುಕ್ಯರ ಆಡಳಿತಕ್ಕೆ ಒಳಪಟ್ಟಿತ್ತು ಎಂಬ ವಿಷಯವನ್ನು ತಿಳಿಸುತ್ತದೆ. ಶಾಸನದಲ್ಲಿ ಯಾವುದೇ ಮಾಂಡಳೀಕ ಅರಸನ ಉಲ್ಲೇಖವಿಲ್ಲ. ದೇವಾಲಯವನ್ನು ಕಟ್ಟಿಸಿದ ಭೂತಯ್ಯಗಡಂಬ ತ್ರೈಲೋಕ್ಯಮಲ್ಲನ ಯಾವುದೋ ಒಬ್ಬ ಅಧಿಕಾರಿಯಾಗಿರಬೇಕು. ಈ ಶಾಸನವು ಶಕವರ್ಷ 897 ಅಂದರೆ ಕ್ರಿ.ಶ. 975ನೇ ಇಸವಿಯಲ್ಲಿ ನಿರ್ಮಾಣವಾಗಿರುವುದು ತಿಳಿಸುವುದರಿಂದ ಇಂದಿಗೆ ಸರಿಯಾಗಿ 1046 ವರ್ಷಗಳ ಹಿಂದೆ ಕದಂಬೇಶ್ವರ ದೇವಾಲಯ ಶ್ರೀಮದ್ ಕಲಿಯರಸ ಪ್ಪಿರಿಯ ಭೂತಯ್ಯಗಡಂಬನಿಂದ ನಿರ್ಮಾಣವಾಯಿತೆಂದು ಸ್ಪಷ್ಟವಾಗಿ ಹೇಳುತ್ತದೆ.

ಅಂತೆಯೇ ತೆಂಕಣಕೇರಿಯನ್ನು ಉಲ್ಲೇಖಿಸಿರುವುದರಿಂದ ಅದರ ಪ್ರಾಚೀನತೆಯೂ 1046 ವರ್ಷಗಳಷ್ಟು ಹಿಂದಕ್ಕೆ ಒಯ್ಯುತ್ತದೆ. ಶಾಸನದಲ್ಲಿ ಉಲ್ಲೇಖಿತ ತ್ರೈಲೋಕ್ಯಮಲ್ಲನು ಕಲ್ಯಾಣ ಚಾಳುಕ್ಯರ ಎರಡನೇ ತೈಲಪನಾಗಿದ್ದು ಈತನು ಕ್ರಿ.ಶ.973 ರಿಂದ 979ರ ವರೆಗೆ ಆಳ್ವಿಕೆ ನಡೆಸಿದ್ದಾನೆ. ಈತನ ಅವಧಿಯಲ್ಲಿ ಅಧಿಕಾರಿಯಾಗಿದ್ದ ಭೂತಯ್ಯ ಗಡಂಬ ಕದಂಬ ವಂಶಸ್ಥನಾಗಿರಬೇಕು ಎಂದು ಊಹಿಸಲಾಗಿದೆ.

ಭೂತಯ್ಯ+ಕದಂಬ=ಭೂತಯ್ಯಗಡಂಬ. ಆದ್ದರಿಂದಲೇ ಆತ ಕಟ್ಟಿಸಿದ ದೇವಾಲಯ ಕದಂಬೇಶ್ವರ ದೇವಾಲಯವೆಂದು ಖ್ಯಾತಿಯಾಗಿದೆ. ಅಲ್ಲದೆ ಶಾಸನವು ಸಿವರಾಸಿ ಜೀಯನನ್ನು ಉಲ್ಲೇಖಿಸುವುದರಿಂದ ಆ ಸಮಯದಲ್ಲಿ ಈ ಪ್ರದೇಶದಲ್ಲಿ ಕಾಳಾಮುಖ ಯತಿಗಳ ಪ್ರಾಬಲ್ಯವಿರುವುದರ ಕುರಿತು ಬೆಳಕು ಚೆಲ್ಲುತ್ತದೆ. ಶಾಸನದಲ್ಲಿ ಬರುವ ತೆಂಕಣಕೇರಿಯು ಇಂದಿನ ತೆಂಕಣ ಕೇರಿಯೆಂದು ಗುರುತಿಸಿದರೆ ಶಾಸನ ಹೇಳುವ ‘ತಳವಟ್ಟೆ ಧಮ್ಮಗೇರಿ ಹರದರಕೇರಿ’ಯನ್ನು ತಳವೃತ್ತಿಯಾ ಧಾರಿತ ವ್ಯಾಪಾರಿಗಳ ಕೇರಿ ಎಂದು ಭಾವಿಸಿದಾಗ ಅದನ್ನು ಇಂದಿನ ಕುಂಬಾರಕೇರಿ ಎಂದು ಗುರುತಿಸಬಹುದು ಎಂದು ಶ್ಯಾಮಸುಂದರ ಗೌಡ ವಿವರಿಸಿದ್ದಾರೆ.

TAGGED:AngolaCopperInscriptionPublic TVಅಂಕೋಲಉತ್ತರ ಕನ್ನಡತಾಮ್ರಪಬ್ಲಿಕ್ ಟಿವಿ Uttara Kannadaಶಾಸನ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories
Rashmika Mandanna Thama Movie
ಹಾರರ್ ಅವತಾರದಲ್ಲಿ ಜನರನ್ನ ಬೆಚ್ಚಿಸಿದ ಶ್ರೀವಲ್ಲಿ
Bollywood Cinema Latest Top Stories

You Might Also Like

AI Image
Latest

ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ಪಾಲಿಸಿ

Public TV
By Public TV
9 minutes ago
Rajasthan Murder Case
Crime

ಲವ್ವರ್‌ ಜೊತೆ ಸೇರಿಕೊಂಡು ಪತಿ ಕೊಂದ ಮಹಿಳೆ; ಹತ್ಯೆ ಬಗ್ಗೆ ಸಾಕ್ಷಿ ನುಡಿದ 8 ವರ್ಷದ ಪುತ್ರ

Public TV
By Public TV
24 minutes ago
BBMP
Bengaluru City

ಬಿಬಿಎಂಪಿಯ ಪಂಚ ಪಾಲಿಕೆಗೆ ಆಯುಕ್ತರ ನೇಮಕ – ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಅಂಗೀಕಾರ

Public TV
By Public TV
39 minutes ago
Sujatha Bhat
Bengaluru City

ಫೋಟೋದಲ್ಲಿರುವವಳೇ ನನ್ನ ಮಗಳು: ಸುಜಾತ ಭಟ್ ಪ್ರತಿಕ್ರಿಯೆ

Public TV
By Public TV
1 hour ago
Jog Falls 1
Districts

ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

Public TV
By Public TV
2 hours ago
sujatha bhat dharmasthala case
Latest

ಸುಜಾತಾ ಭಟ್‌ಗೆ ಮಗಳೇ ಇರಲಿಲ್ಲ ಎಂದ ನೆರೆಹೊರೆಯವರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?