ನವದೆಹಲಿ: ಕೇಂದ್ರ ಸರ್ಕಾರ ಲಾಕ್ಡೌನ್ 5.0ನ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡಿದೆ.
ಜೂನ್ 1ರಿಂದ ಯಾವುದೇ ಪಾಸ್ ಇಲ್ಲದೇ ಪ್ರಯಾಣಿಕರು ಸಂಚರಿಸಬಹುದಾಗಿದೆ. ಈಗಾಗಲೇ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಶ್ರಮಿಕ್ ಮತ್ತು ವಿಶೇಷ ರೈಲುಗಳು ಸಂಚರಿಸುತ್ತಿವೆ. ಹೊರ ರಾಜ್ಯಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಇದನ್ನೂ ಓದಿ: ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರದಿಂದ 10 ನಿರ್ದೇಶನಗಳು
ಕರ್ನಾಟಕದಲ್ಲಿ ಹೊರ ರಾಜ್ಯಗಳಿಂದ ಬಂದವರಲ್ಲಿಯೇ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಸಹ 141 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಕರ್ನಾಟಕ ಸೋಂಕಿತರ ಸಂಖ್ಯೆಯಲ್ಲಿ ಮೂರು ಸಾವಿರದ ಗಡಿಯ ಸಮೀಪದಲ್ಲಿದೆ. ಜನರು ಪಾಸ್ ಪಡೆದು ಬರುತ್ತಿರೋದರಿಂದ ಎಲ್ಲರ ಮಾಹಿತಿ ಸಿಗುತ್ತಿತ್ತು. ಪಾಸ್ ಇಲ್ಲದೇ ಜನರ ಸಂಚರಿಸಬಹುದು ಎಂದು ಕೇಂದ್ರ ತನ್ನ ಮಾರ್ಗಸೂಚಿಯಲ್ಲಿ ಸೂಚಿಸಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಜೂ.30ರವರೆಗೆ ಲಾಕ್ಡೌನ್ ವಿಸ್ತರಣೆ- ಜೂನ್ 8ರಿಂದ ಮಾಲ್, ದೇವಸ್ಥಾನ ಓಪನ್
ಕೇಂದ್ರ ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡಿದ್ದರೂ, ರಾಜ್ಯ ಸರ್ಕಾರಗಳಿಗೆ ಸಂಚಾರಕ್ಕೆ ನಿರ್ಬಂಧ ವಿಧಿಸಿಕೊಳ್ಳುವ ಅಧಿಕಾರವನ್ನು ನೀಡಿದೆ. ನಿರ್ಬಂಧಕ್ಕೂ ಮುನ್ನ ಆಯಾ ರಾಜ್ಯಗಳಿಗೆ ಮಾಹಿತಿ ನೀಡಬೇಕು.