ಹುಬ್ಬಳ್ಳಿ: ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಂಡು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ಯೋಗ ದುನಾಚರಣೆ ಅಂಗವಾಗಿ ಯೋಗ ಶಿಕ್ಷಕ ಸಂಗಮೇಶ್ ನಿಂಬರಗಿ ಯೋಗಾಸನಗಳ ಕ್ರಮಗಳ ಕುರಿತು ನಿರ್ದೇಶನ ನೀಡಿ ಅವುಗಳ ಉಪಯೋಗ ತಿಳಿಸಿದರು. ಶೆಟ್ಟರ್ ಸಹಿತ ಕಾರ್ಯಕ್ರಮದಲ್ಲಿದ್ದ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಯೋಗಾಭ್ಯಾಸ ಮಾಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ: ಶೆಟ್ಟರ್
ಕಾರ್ಯಕ್ರಮದಲ್ಲಿ ಜಿ.ಪಂ. ಸಿ.ಇ.ಓ ಡಾ.ಬಿ.ಸುಶೀಲ, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಯಶವಂತ ಮದೀನಕರ್, ಜಿಲ್ಲಾ ಆಯುಷ್ಯಾಧಿಕಾರಿ ಡಾ.ಮೀನಾಕ್ಷಿ, ತಹಶೀಲ್ದಾರ್ ಶಶಿಧರ ಮಾಡ್ಯಾಳ ಭಾಗವಹಸಿದ್ದರು.