Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

Bengaluru City

ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

Public TV
Last updated: July 10, 2020 3:02 pm
Public TV
Share
3 Min Read
Ashwath Narayan
SHARE

– ಡಿಪ್ಲೊಮಾ, ಪಿಜಿ ಸಿಇಟಿ ನಿಗದಿಯಂತೆ ನಡೆಯಲಿದೆ
– ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಆರಂಭ

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಎಂಜಿನಿಯರಿಂಗ್, ಪದವಿ, ಸ್ನಾತ್ತಕೋತ್ತರ ಪದವಿಗೆ ಪರೀಕ್ಷೆ ನಡೆಸಬೇಕಾಗಿತ್ತು. ಆದರೆ ಕೊರೊನಾದಿಂದ ತಡವಾಗಿತ್ತು. ಹೀಗಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಕ್ರಮವಹಿಸಿದ್ದೇವೆ. ಆನ್‍ಲೈನ್ ಶಿಕ್ಷಣ, ಡಿಜಿಟಲ್ ಮೂಲಕ ಶಿಕ್ಷಣ ನೀಡಲಾಗಿದೆ. ಅನೇಕ ಮಾರ್ಗದಲ್ಲಿ ಶಿಕ್ಷಣ ನೀಡಲಾಗಿದೆ. ವಿವಿಗಳಲ್ಲಿ ಅಗತ್ಯ ಪಾಠ ಮಾಡಲಾಗಿದೆ. ಕೆಲವರಿಗೆ ನೆಟ್ ಸಮಸ್ಯೆ ಅಂತ ಹೇಳಲಾಗುತ್ತಿದೆ ಎಂದರು.

maharani college 4

ಎಂಜಿನಿಯರಿಂಗ್ 1, 2, 3 ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ. ಪದವಿ 1, 2 ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲ. ಅದೇ ರೀತಿ ಡಿಪ್ಲೋಮಾ 1, 2, ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲ. ಮೊದಲ ವರ್ಷದ ಸ್ನಾತಕೋತ್ತರ ಪದವಿ ಪರೀಕ್ಷೆ ಇಲ್ಲ. ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಯಾರಿಗೂ ಪರೀಕ್ಷೆ ಇಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ವಿವಿಗಳು ಪರೀಕ್ಷೆ ಮಾಡಬೇಕು.
ಬ್ಯಾಕ್ ಸಬ್ಜೆಕ್ಟ್ ಇದ್ದರೆ ಫೈನಲ್ ಪರೀಕ್ಷೆಯಲ್ಲಿ ಬರೆಯಬೇಕು. ಸೆಪ್ಟೆಂಬರ್‍ನಲ್ಲಿ ಅಂತಿಮ ವರ್ಷದ ಪರೀಕ್ಷೆ ಮಾಡಬೇಕು ಎಂದು ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

CET 2

ಸೆಪ್ಟೆಂಬರ್ ನಲ್ಲಿ ಪರೀಕ್ಷೆ ಬರೆಯಲು ಇಷ್ಟ ಇಲ್ಲದೆ ಇರೋರಿಗೆ ಮುಂದಿನ ಪರೀಕ್ಷೆ ಬರೆಯಲು ಅವಕಾಶ. ಫ್ರೆಶ್ ಅಭ್ಯರ್ಥಿಗಳಾಗಿ ಬರೆಯಬಹುದು. ಇಂಟರನಲ್ ಅಸೆಸ್ಮೆಟ್, ಹಿಂದಿನ ವರ್ಷದ ಪರೀಕ್ಷೆ ಆಧಾರದಲ್ಲಿ ಪಾಸ್ ಮಾಡುತ್ತೇವೆ. ಇಂಟರನಲ್ ಅಸೆಸ್ಮೆಟ್ 50% ಹಿಂದಿನ ಪರೀಕ್ಷೆ 50% ಆಧಾರದಲ್ಲಿ ಪಾಸ್ ಮಾಡುತ್ತೀವಿ. ಆರೋಗ್ಯ, ಸುರಕ್ಷಿತೆ ದೃಷ್ಟಿಯಿಂದ ಪರೀಕ್ಷೆ ರದ್ದು ಮಾಡಿದ್ದೇವೆ. ಕೇಂದ್ರ ಸರ್ಕಾರ ನಮಗೆ ಅವಕಾಶ ಕೊಟ್ಟಿತ್ತು. ಹೀಗಾಗಿ ನಾವು ಈ ನಿರ್ಧಾರ ಮಾಡಿದ್ದೇವೆ ಎಂದರು.

CET

ಇಂಟರನಲ್ ಅಸೆಸ್ಮೆಟ್ ಮಾಡಲು ಅವಕಾಶ ಮಾಡಲು ಅವಕಾಶ ಇದೆ. ಆನ್‍ಲೈನ್, ಆಫ್‍ಲೈನ್ ಮೂಲಕ ಮಾಡಬಹುದು. ಪರೀಕ್ಷೆ ಕೂಡ ಆನ್‍ಲೈನ್, ಆಫ್‍ಲೈನ್ ಮಾಡಬಹುದು ಎಂದು ತಿಳಿಸಿದರು.

2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್‍ಗೆ ಸೆಪ್ಟೆಂಬರ್ 1 ರಿಂದಲೇ ಆನ್‍ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ. ಪ್ರತಿ ವಿವಿಯಲ್ಲಿ ಹೆಲ್ತ್‍ಲೈನ್ ಪ್ರಾರಂಭ ಮಾಡಲಾಗಿದೆ. ಅಗತ್ಯ ಮಾಹಿತಿ ಸಂಗ್ರಹ ಮಾಡಲು ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಲು ಹೆಲ್ಪ್‍ಲೈನ್‍ಗೆ ಫೋನ್ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Ashwath Narayan 1

ಸಿಇಟಿ ಪರೀಕ್ಷೆ ಜುಲೈ 30, 31ಕ್ಕೆ ನಡೆಯುತ್ತೆ. ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಇಟಿ ಪರೀಕ್ಷೆಗೂ ಹೆಲ್ತ್ ಲೈನ್ ಮಾಡುತ್ತೇವೆ. ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಬಹುದು. ಪಿಜಿಸಿಇಟಿ ಆಗಸ್ಟ್ 8, 9 ನಡೆಯುತ್ತೆ. ಡಿಪ್ಲೋಮಾ ಸಿಇಟಿ ಆಗಸ್ಟ್ 9ಕ್ಕೆ ನಡೆಯುತ್ತೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಕುಲಪತಿಗಳು, ಶಿಕ್ಷಣ ತಜ್ಞರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ. ರಾಜ್ಯಪಾಲರ ಅನುಮತಿ ಪಡೆದು, ಯುಜಿಸಿ ಸಲಹೆ ಪಡೆದು ಈ ನಿರ್ಧಾರ ಮಾಡಲಾಗಿದೆ ಎಂದು ಡಿಸಿಎಂ ತಿಳಿಸಿದರು.

TAGGED:Ashwath NarayanbengaluruExaminationPublic TVState Governmentstudentsಅಶ್ವಥ್ ನಾರಾಯಣಪಬ್ಲಿಕ್ ಟಿವಿಪರೀಕ್ಷೆಬೆಂಗಳೂರುರಾಜ್ಯ ಸರ್ಕಾರವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
26 seconds ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
2 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago
IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?