ಕೋಲಾರ: ಯಾವುದೇ ಬಿಲ್, ಸೂಕ್ತ ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದ 2 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕು ರೋಜೇನಹಳ್ಳಿ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದು, ಹಣ ಕೊಂಡೊಯ್ಯುತ್ತಿದ್ದ ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬರೋಬ್ಬರಿ 2,94,50,000 ರೂ.ಗಳನ್ನು ವಶಕ್ಕೆ ಪಡೆದಿದಿದ್ದಾರೆ. ಅಲ್ಲದೆ ಇಬ್ಬರನ್ನೂ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಇಷ್ಟು ಹಣ ಹೇಗೆ ಬಂತು, ಯಾರಿಗೆ ಸೇರಿದ್ದು, ಉದ್ದೇಶ ಏನು ಎಂಬ ಹತ್ತು ಹಲವು ಅನುಮಾನಗಳು ಪೊಲೀಸರಿಗೆ ಮೂಡಿದ್ದು, ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಎಂಬ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.