ಕಾರವಾರ: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವುದನ್ನು ತಡೆಯಲು ಹೋದ ಅರಣ್ಯ ಪಾಲಕನ ಮೇಲೆ ನಾಲ್ಕೈದು ಜನ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ವಿರ್ನೋಲಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಂದೀಪ್ ಗೌಡ ಹಲ್ಲೆಗೊಳಗಾದ ಅರಣ್ಯ ಸಿಬ್ಬಂದಿ. ಅಕ್ರಮ ಮರಳುಗಾರಿಗೆ ಕುರಿತು ಮಾಹಿತಿ ಹಿನ್ನೆಲೆ ತಡೆಯಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ನಾಲ್ಕೈದು ಜನರ ತಂಡ ಮಾರಣಾಂತಿಕ ಹಲ್ಲೆ ನಡೆಸಿದೆ. ಅರಣ್ಯ ಪಾಲಕನಿಗೆ ತಲೆಗೆ ಬಲವಾದ ಏಟು ಬಿದ್ದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ತಲೆಗೆ ಹೆಚ್ಚಿನ ಹೊಡೆತ ಬಿದ್ದಿದ್ದು, ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ದಾಂಡೇಲಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ಭಾಗದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಎಷ್ಟೇ ಕ್ರಮ ಕೈಗೊಂಡರೂ ನಿಲ್ಲುತ್ತಿಲ್ಲ. ಇದೀಗ ಅರೋಪಿಗಳು ಅರಣ್ಯ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸುತ್ತಿದ್ದಾರೆ.