ಅಕ್ರಮ ಸಂಬಂಧ, ಭಿನ್ನಾಭಿಪ್ರಾಯ- ಪ್ರಿಯತಮೆ ಮಗನನ್ನೇ ಕೊಂದ ಪಾಪಿ

Public TV
1 Min Read
klr boy

– 6 ವರ್ಷದ ಬಾಲಕನ ಅಸ್ಥಿಪಂಜರ ಪತ್ತೆ

ಚಿಕ್ಕಬಳ್ಳಾಪುರ: ಪ್ರಿಯಕರನಿಂದಲೇ ಪ್ರಿಯತಮೆಯ ಮಗನನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದ್ದು, ಕಾಣೆಯಾಗಿದ್ದ 06 ವರ್ಷದ ಬಾಲಕನ ಅಸ್ಥಿಪಂಜರ ಪತ್ತೆಯಾಗಿದೆ.

CKB MURDER AV 4

ವಾಟದಹೊಸಹಳ್ಳಿಯ 6 ವರ್ಷದ ಬಾಲಕ ವಿಷ್ಣುವರ್ಧನ್‍ನನ್ನು ಕೊಲೆ ಮಾಡಲಾಗಿದೆ. ವಾಟದಹೊಸಹಳ್ಳಿ ಗ್ರಾಮದ ರಾಮಾಂಜಿ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ್ದಾನೆ. ಗೌರಿಬಿದನೂರು ತಾಲೂಕಿನ ಸಾದರ್ಲಹಳ್ಳಿ ಬಳಿ ಅಸ್ಥಿಪಂಜರ ಪತ್ತೆಯಾಗಿದೆ.

ಬಾಲಕ ವಿಷ್ಣುವರ್ಧನ್ ಪ್ರಭಾವತಿ ಹಾಗೂ ನಾರಾಯಣಸ್ವಾಮಿ ದಂಪತಿಯ ಮಗನಾಗಿದ್ದು, ಮಾರ್ಚ್ 16 ರಂದು ನಿಗೂಢವಾಗಿ ಕಾಣೆಯಾಗಿದ್ದ. ವಿಷ್ಣುವರ್ಧನ್ ನಾಪತ್ತೆ ಪ್ರಕರಣ ಭೇದಿಸಿದ ಗೌರಿಬಿದನೂರು ಪೊಲೀಸರು, ರಾಮಾಂಜಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಪಹರಣ ಹಾಗೂ ಕೊಲೆ ಸತ್ಯ ಬಯಲಾಗಿದೆ.

CKB MURDER AV 1

ಪ್ರಭಾವತಿ ಹಾಗೂ ರಾಮಾಂಜಿ ನಡುವೆ ಅನೈತಿಕ ಸಂಬಂಧ ಇತ್ತು. ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ ಬೇರೆಯಾಗಿದ್ದರು. ಅದೇ ದ್ವೇಷ ಹಾಗೂ ಮತ್ತೆ ಪ್ರಭಾವತಿ ಒಲಿಸಿಕೊಳ್ಳಲು ವಿಷ್ಣುವರ್ಧನ್‍ನನ್ನು ರಾಮಾಂಜಿ ಅಪಹರಿಸಿದ್ದಾನೆ. ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಪ್ರಕರಣ ದಾಖಲಾಗಿದ್ದಕ್ಕೆ ಆರೋಪಿ ರಾಮಾಂಜಿ ಬಾಲಕ ವಿಷ್ಣುವರ್ಧನ್‍ನ ಕತ್ತು ಹಿಸುಕಿ ಕೊಲೆ ಮಾಡಿ, ಮೂಟೆಯಲ್ಲಿ ಹಾಕಿ ಬಿಸಾಡಿದ್ದ. ಗೌರಿಬಿದನೂರು ಪೊಲೀಸರು ಇದೀಗ ಆರೋಪಿ ರಾಮಾಂಜಿಯನ್ನು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *