ಚಿಕ್ಕಮಗಳೂರು: ದಾನಿಗಳು ನೀಡಿದ ದಿನಸಿ ಕಿಟ್ ಸಂಗ್ರಹಿಸಿಟ್ಟುಕೊಂಡು ಬಡವರಿಗೂ ಸಿಗದಹಾಗೆ ಮಾಡುವ ಜನರಿದ್ದಾರೆ. ಆದರೆ ಈ ವಿಚಾರದಲ್ಲಿ ಮಂಗಳಮುಖಿಯರು ಮಾದರಿಯಾಗಿದ್ದು, ದಾನಿಗಳು ತಮಗೆ ನೀಡಿದ ಕಿಟ್ನ್ನು ಕಷ್ಟದಲ್ಲಿರುವವರಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
- Advertisement 2
ಲಾಕ್ಡೌನ್ ಹಿನ್ನೆಲೆ ಹಲವು ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಧನವಂತರು ಬಡವರಿಗೆ ಸಹಾಯ ಮಾಡುತ್ತಿದ್ದಾರೆ, ಅದೇ ರೀತಿ ಮಂಗಳಮುಖಿಯರಿಗೂ ನೀಡಿದ್ದಾರೆ. ಆದರೆ ಮಂಗಳಮುಖಿಯರು ಸಾಮಾನ್ಯ ಜನರಂತೆ ಸಂಗ್ರಹಿಸಿಟ್ಟುಕೊಳ್ಳದೆ, ಬೇಕಾದಷ್ಟು ಇಟ್ಟುಕೊಂಡು ಉಳಿದಿದ್ದನ್ನು ಮತ್ತೊಬ್ಬರಿಗೆ ನೀಡುತ್ತಿದ್ದಾರೆ. ಸ್ವತಃ ಮಂಗಳಮುಖಿಯರೇ ಕಿಟ್ಗಳನ್ನು ಬಡವರಿಗೆ ಹಂಚುತ್ತಿದ್ದಾರೆ.
- Advertisement 3
ಇಂತಹ ಕೆಲಸ ಸೇವೆಯಾಗಿರಬೇಕು, ಪ್ರಚಾರವಾಗಬಾರದು ಎಂದು ವಿಡಿಯೋ ಕೂಡ ಮಾಡಿಕೊಂಡಿಲ್ಲ. ತಮ್ಮ ನೆನಪು ಹಾಗೂ ಸಮಾಧಾನಕ್ಕಾಗಿ ಫೋಟೋ ಮಾತ್ರ ಕ್ಲಿಕ್ಕಿಸಿಕೊಂಡು ಯಾರಿಗೂ ಹೇಳದೆ ಏನೂ ಗೊತ್ತಿಲ್ಲದಂತೆ ಇದ್ದಾರೆ. ಜಿಲ್ಲೆಯ ಬಹುತೇಕ ಭಾಗಗಳಿಗೆ ತೆರಳಿ ಬಡವರಿಗೆ ಕಿಟ್ ಕೊಡುತ್ತಿದ್ದಾರೆ.
- Advertisement 4
ಜಿಲ್ಲೆಯ ಮಂಗಳಮುಖಿಯರ ಮಡಿಲು ಸಂಘದಿಂದ ಕಿಟ್ ವಿತರಿಸುತ್ತಿದ್ದಾರೆ. ಕೊರೊನಾ ಆರಂಭವಾದಾಗಿನಿಂದ ಇವರು ಕಿಟ್ ವಿತರಿಸುತ್ತಿದ್ದು, ಇದು ಯಾರಿಗೂ ತಿಳಿದಿಲ್ಲ. ತಮಗೆ ಬೇಕಾದಷ್ಟು ದಿನಸಿ ಇಟ್ಟಿಕೊಂಡು ಇಳಿದದ್ದೆಲ್ಲವನ್ನೂ ದಾನ ಮಾಡಿದ್ದಾರೆ.