ಧಾರವಾಡ: ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ ಕಾರ್ಯಕರ್ತೆಯರು, ತಕ್ಷಣ ಅಡುಗೆ ಅನಿಲ ಹಾಗೂ ಪೆಟ್ರೋಲ್ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ಪೆಟ್ರೋಲ್ ದರ ನೂರರ ಗಡಿ ದಾಟಿದೆ, ಅದೇ ರೀತಿ ಅಡುಗೆ ಅನಿಲ ದರ ಸಹ 800 ಗಡಿ ದಾಟಿದೆ. ಸರ್ಕಾರ ರಚನೆಯಾಗುವ ಮೊದಲು ಇದೇ ಬಿಜೆಪಿ ಸರ್ಕಾರಗಳು ಜನರಿಗೆ ಸುಳ್ಳು ಬರವಸೆ ನೀಡಿ, ಈಗ ಬೆಲೆ ಹೆಚ್ಚಳ ಮಾಡಿವೆ ಎಂದು ಕಾಂಗ್ರೆಸ್ ಮಹಿಳಾ ಮುಖಂಡೆ ಶಾಂತಮ್ಮ ಗುಜ್ಜಳ ಆರೋಪಿಸಿದರು.