ಚಿಕ್ಕೋಡಿ: ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರ ಕೊಡುಗೆ ಅಪಾರವಾಗಿದೆ. ನೀರಾವರಿ ಇಲಾಖೆಯಡಿ ಅವರು ಅನೇಕ ಅಭಿವೃದ್ದಿ ಕಾರ್ಯಗಳಿಗೆ ಅನುದಾನ ನೀಡಿಲು ಸಹಕಾರ ನೀಡಿದ್ದಾರೆ. ಅವರ ಬೆಳವಣಿಗೆ ಸಹಿಸದೇ ರಾಜಕೀಯ ಷಡ್ಯಂತ್ರದಿಂದ ಈ ಎಲ್ಲ ಬೆಳವಣಿಗೆಗಳು ನಡೆದಿವೆ. ಆದಷ್ಟು ಬೇಗನೆ ಅವರು ಆರೋಪ ಮುಕ್ತರಾಗಲಿದ್ದಾರೆಂದು ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ ಅಭಿಪ್ರಾಯಾಪಟ್ಟಿದ್ದಾರೆ.
ನಂದೇಶ್ವರ-ಜನವಾಡ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೆರಿಸಿ ಮಾತನಾಡಿದ ಮಹೇಶ್ ಕುಮಟಳ್ಳಿ ಅವರು, ಅಥಣಿ ಮತಕ್ಷೇತ್ರದಲ್ಲಿ ಶಿಕ್ಷಣ, ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸುಧಾರಣೆ ಕೈಗೊಳ್ಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ನದಿ ದಂಡೆಯ ಗ್ರಾಮಗಳಿಗೆ ಶಾಪವಾಗಿರುವ ಸವಳು, ಜವಳು ಸಮಸ್ಯೆ ಹೋಗಲಾಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ಆದ್ಯತೆ ನೀಡಿ ಅಭಿವೃದ್ಧಿ ಪಡಿಸಲಾಗುವುದೆಂದು ಹೇಳಿದರು. ಇದನ್ನೂ ಓದಿ: ಹತ್ತು ದಿನಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಣಯ: ರಮೇಶ್ ಜಾರಕಿಹೊಳಿ
ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ಯಾರು ನಿರ್ಲಕ್ಷ್ಯ ಮಾಡಬೇಡಿ, ಯಾವ ರೂಪದಲ್ಲಿ ಬರುತ್ತದೆ ಎಂಬುದು ಗೊತ್ತಾಗುವುದಿಲ್ಲ, ಕುಟುಂಬದ ಮುಖ್ಯಸ್ಥರು, ಮನೆಯಲ್ಲಿರುವ ಹಿರಿಯರು ಮತ್ತು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡ ರಮೇಶ್ ಗೌಡ ಪಾಟೀಲ್, ವಿರುಪಾಕ್ಷ ಹಿರೇಮಠ, ರಾಮಣ್ಣ ದೇವಣ್ಣವರ, ಬಾಳಾಸಾಹೇಬ ಪಾಟೀಲ್, ಪಿ.ಕೆ.ಪಿ.ಎಸ್ ಅಧ್ಯಕ್ಷ ಬಸಪ್ಪ ಮುಧೋಳ, ಶಿವಾನಂದ ಪಾಟೀಲ್, ಬಸಪ್ಪ ಚಂಡಕಿ, ಮಹೇಶಗೌಡ ಪಾಟೀಲ್, ಶ್ರೀಧರ, ಷಣ್ಮುಖ ಲಾಲಸಿಂಗಿ, ಕೆಂಚಪ್ಪ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.