ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

Public TV
2 Min Read
ST SOMESHAKR 1

ಮೈಸೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲವನ್ನು ಚಾಮುಂಡಿ ತಾಯಿ ನೋಡುತ್ತಿದ್ದಾಳೆ. ನ್ಯಾಯದ ತೀರ್ಮಾನ ಚಾಮುಂಡಿ ತಾಯಿಗೆ ಬಿಟ್ಟ ವಿಚಾರ ಎಂದು ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

rohini sindhuri shilpa nag medium

ಮೈಸೂರಿನಲ್ಲಿ ನಿನ್ನೆಯಿಂದ ನಡೆಯುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಘಟನೆಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಇಂದು ಮುಖ್ಯ ಕಾರ್ಯದರ್ಶಿ ಅವರು ಕೂಡ ಮೈಸೂರಿಗೆ ಬರುತ್ತಿದ್ದಾರೆ. ಮೈಸೂರಿನಲ್ಲಿ ಅಧಿಕಾರಿಗಳು ಅಹಂ ಬಿಟ್ಟು ಅವರವರ ಕೆಲಸ ಮಾಡಬೇಕು. ಮೈಸೂರಿನ ಚಾಮುಂಡಿ ದೇವಿ ಎಲ್ಲವನ್ನೂ ನೋಡುತ್ತಿದ್ದಾಳೆ. ಯಾವುದು ಕೆಟ್ಟದ್ದು, ಯಾವುದು ಒಳ್ಳೆಯದು ಎನ್ನುವುದು ಅವಳಿಗೆ ಗೊತ್ತು. ಯಾರು ಯಾರ ಮೇಲೆ ದ್ವೇಷ ಕಾರುತ್ತಿದ್ದಾರೆ ಎಂಬುದು ಅವಳಿಗೆ ಗೊತ್ತಿದೆ ಎಂದರು. ಇದನ್ನೂ ಓದಿ:12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

Shilpa Nag Rohini Sindhuri 6 medium

ನಾನು ದೇವರಿಗೆ ಒಂದು ನಮಸ್ಕಾರ ಹಾಕುತ್ತೇನೆ ಯಾರು ಸರಿಯಾಗಿ ಕೆಲಸ ಮಾಡುತ್ತಾರೆ ಪ್ರಾಮಾಣಿಕರಾಗಿದ್ದಾರೋ ಅವರನ್ನು ರಕ್ಷಿಸು ಎಂದು ಕೇಳಿಕೊಳ್ಳುವುದು ಬಿಟ್ಟು ಬೇರೆ ಬೇರೆ ಏನೂ ಇಲ್ಲ ಎಂದು ಅಭಿಪ್ರಾಯಪಟ್ಟರು.

ಸಂಘರ್ಷ ಏನು ?

ನಿನ್ನೆತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

mys shilpa nag 5 medium

ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು. ಇದನ್ನೂ ಓದಿ:ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆ ಬಿಟ್ಟು ತೊಲಗಿ, ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ ಅವರು. ಒಳ್ಳೆಯ ಜನರು ಇರೋ ಮೈಸೂರು ನಗರದಲ್ಲಿ ಜಿಲ್ಲಾಧಿಕಾರಿಗಳು ಈ ರೀತಿ ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ. ನಾನು 2014ನೇ ಬ್ಯಾಚ್ ಅಧಿಕಾರಿ, ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲಿನ ಅವರ ದ್ವೇಷ ಮೈಸೂರು ಜನರ ಮೇಲೆ ಪರಿಣಾಮ ಆಗೋದು ಬೇಡ. ನಾನೇ ಸುಪ್ರೀಂ ಅಂತಾ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಗೌರವ ಕೊಡದೆ ಅಧಿಕಾರಿಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *