Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

Districts

ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

Public TV
Last updated: June 4, 2021 1:30 pm
Public TV
Share
2 Min Read
ST SOMESHAKR 1
SHARE

ಮೈಸೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲವನ್ನು ಚಾಮುಂಡಿ ತಾಯಿ ನೋಡುತ್ತಿದ್ದಾಳೆ. ನ್ಯಾಯದ ತೀರ್ಮಾನ ಚಾಮುಂಡಿ ತಾಯಿಗೆ ಬಿಟ್ಟ ವಿಚಾರ ಎಂದು ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

rohini sindhuri shilpa nag medium

ಮೈಸೂರಿನಲ್ಲಿ ನಿನ್ನೆಯಿಂದ ನಡೆಯುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಘಟನೆಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಇಂದು ಮುಖ್ಯ ಕಾರ್ಯದರ್ಶಿ ಅವರು ಕೂಡ ಮೈಸೂರಿಗೆ ಬರುತ್ತಿದ್ದಾರೆ. ಮೈಸೂರಿನಲ್ಲಿ ಅಧಿಕಾರಿಗಳು ಅಹಂ ಬಿಟ್ಟು ಅವರವರ ಕೆಲಸ ಮಾಡಬೇಕು. ಮೈಸೂರಿನ ಚಾಮುಂಡಿ ದೇವಿ ಎಲ್ಲವನ್ನೂ ನೋಡುತ್ತಿದ್ದಾಳೆ. ಯಾವುದು ಕೆಟ್ಟದ್ದು, ಯಾವುದು ಒಳ್ಳೆಯದು ಎನ್ನುವುದು ಅವಳಿಗೆ ಗೊತ್ತು. ಯಾರು ಯಾರ ಮೇಲೆ ದ್ವೇಷ ಕಾರುತ್ತಿದ್ದಾರೆ ಎಂಬುದು ಅವಳಿಗೆ ಗೊತ್ತಿದೆ ಎಂದರು. ಇದನ್ನೂ ಓದಿ:12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

Shilpa Nag Rohini Sindhuri 6 medium

ನಾನು ದೇವರಿಗೆ ಒಂದು ನಮಸ್ಕಾರ ಹಾಕುತ್ತೇನೆ ಯಾರು ಸರಿಯಾಗಿ ಕೆಲಸ ಮಾಡುತ್ತಾರೆ ಪ್ರಾಮಾಣಿಕರಾಗಿದ್ದಾರೋ ಅವರನ್ನು ರಕ್ಷಿಸು ಎಂದು ಕೇಳಿಕೊಳ್ಳುವುದು ಬಿಟ್ಟು ಬೇರೆ ಬೇರೆ ಏನೂ ಇಲ್ಲ ಎಂದು ಅಭಿಪ್ರಾಯಪಟ್ಟರು.

ಸಂಘರ್ಷ ಏನು ?

ನಿನ್ನೆತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

mys shilpa nag 5 medium

ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು. ಇದನ್ನೂ ಓದಿ:ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆ ಬಿಟ್ಟು ತೊಲಗಿ, ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ ಅವರು. ಒಳ್ಳೆಯ ಜನರು ಇರೋ ಮೈಸೂರು ನಗರದಲ್ಲಿ ಜಿಲ್ಲಾಧಿಕಾರಿಗಳು ಈ ರೀತಿ ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ. ನಾನು 2014ನೇ ಬ್ಯಾಚ್ ಅಧಿಕಾರಿ, ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲಿನ ಅವರ ದ್ವೇಷ ಮೈಸೂರು ಜನರ ಮೇಲೆ ಪರಿಣಾಮ ಆಗೋದು ಬೇಡ. ನಾನೇ ಸುಪ್ರೀಂ ಅಂತಾ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಗೌರವ ಕೊಡದೆ ಅಧಿಕಾರಿಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

TAGGED:ChamundicmmysuruPublic TVRohini Sindhuris.t.somashekarShilpanagಎಸ್ ಟಿ ಸೋಮಶೇಖರ್ಚಾಮುಂಡಿ ತಾಯಿಪಬ್ಲಿಕ್ ಟಿವಿಮುಖ್ಯಮಂತ್ರಿಮೈಸೂರುರೋಹಿಣಿ ಸಿಂಧೂರಿಶಿಲ್ಪಾನಾಗ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
24 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
1 hour ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
3 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
3 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?