Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅನುದಾನ ರಹಿತ ಶಿಕ್ಷಕರಿಗೆ ಆರ್ಥಿಕ ಸಹಾಯ ನೀಡಿ

Public TV
Last updated: May 27, 2021 8:44 pm
Public TV
Share
2 Min Read
school class college
SHARE

– ಪೋಷಕರು ಶುಲ್ಕವನ್ನು ಕಟ್ಟಿಲ್ಲ
– ಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆಯಿಂದ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಕೊರೊನಾ ಸಂಕಷ್ಟದ ಕಾಲದಲ್ಲಿ ಅನುದಾನ ರಹಿತ ಶಾಲೆಗಳು ಹಲವಾರು ತೊಂದರೆಗಳನ್ನು ಅನುಭವಿಸುತ್ತಿದೆ. ಹೀಗಾಗಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಲ್ಯಾಣ ನಿಧಿಯಿಂದ ಸಂಕಷ್ಟಕ್ಕೊಳಗಾಗಿರುವ ರಾಜ್ಯ ಅನುದಾನ ರಹಿತ ರಾಜ್ಯ ಪಠ್ಯಕ್ರಮದ ಶಾಲೆಗಳ ಶಿಕ್ಷಕರಿಗೆ 2020-21 ನೇ ಸಾಲಿಗೆ ಆರ್ಥಿಕ ಸಹಾಯ ಮಾಡುವಂತೆ ಈಜಿಪುರದ ಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

ಈ ಕುರಿತಂತೆ ಸುದೀರ್ಘ ಮನವಿ ಪತ್ರವನ್ನು ನೀಡಿರುವ ಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆಯ ಕಾರ್ಯದರ್ಶಿ ಡಾ.ವಿ.ರಾಘವೇಂದ್ರರಾವ್ ಅವರು, ಅನುದಾನರಹಿತ ಶಾಲೆಗಳು ರಾಜ್ಯದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸುತ್ತಿವೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಈ ಶಾಲೆಗಳ ಶಿಕ್ಷಕರಿಗೆ ಈಗ ಆರ್ಥಿಕ ಸಹಾಯದ ಅಗತ್ಯವಿದೆ. ಸರ್ಕಾರವು ಕೂಡ ಇಂತ ಶಿಕ್ಷಕರಿಗೆ ಯಾವುದೇ ಸಹಾಯಧನ ನೀಡುತ್ತಿಲ್ಲ. ಹೀಗಾಗಿ ಶಿಕ್ಷಕರ ಹಾಗೂ ವಿದ್ಯಾರ್ಥಿ ಕಲ್ಯಾಣ ನಿಧಿಯಲ್ಲಿ ಕೋಟ್ಯಾಂತರ ರೂ. ಇದೆ. ಇಂತಹ ಕಷ್ಟದ ಕಾಲದಲ್ಲಿ ಈ ಹಣವನ್ನು ಶಿಕ್ಷಕರಿಗೆ ನೀಡಿದರೆ ಅವರ ಬದುಕು ಹಸನಾಗುತ್ತದೆ ಎಂದು ವಿವರಿಸಿದ್ದಾರೆ.

Vajubhai Rudabha Vala

ಅನುದಾನ ರಹಿತ ರಾಜ್ಯ ಶಾಲೆಗಳು ಕಳೆದ ವರ್ಷದಿಂದಲೂ ಶಿಕ್ಷಣ ಇಲಾಖೆಯ ಗೊಂದಲಗಳ ಆದೇಶಗಳು, ಸುತ್ತೋಲೆಗಳು ಮತ್ತು ಸೂಚನೆಗಳಿಂದ ಪೋಷಕರು ಕೂಡ ಗೊಂದಲದಲ್ಲಿದ್ದು, ಶಾಲೆಗಳಿಗೆ ಕಟ್ಟಬೇಕಾದ ಶುಲ್ಕವನ್ನು ಕಟ್ಟುತ್ತಿಲ್ಲ. ಇದರಿಂದ ಸಾವಿರಾರು ಸಂಸ್ಥೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಇದರಿಂದ ಶಿಕ್ಷಕರಿಗೆ ವೇತನ ಕೊಡಲಾಗದಂತಹ ಅಸಹಾಕತೆಯಲ್ಲಿದ್ದೇವೆ ಎಂದು ತಮ್ಮ ನೋವನ್ನು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

2019-20ರ ಕೊರೊನಾ ಸಂಕಷ್ಟದಲ್ಲಿ ಶಾಲೆಗಳನ್ನು ಬಂದ್ ಮಾಡಿದ ವೇಳೆ ವಿದ್ಯಾರ್ಥಿಗಳು ಕಟ್ಟಬೇಕಾದ ಶಾಲಾ ಶುಲ್ಕವನ್ನು ಕಟ್ಟಿರಲಿಲ್ಲ. ಹಲವಾರು ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿದ್ದರು. ಸರ್ಕಾರದ ಗೊಂದಲದ ಹೇಳಿಕೆಗಳಿಂದ ಪೋಷಕರು ಕಟ್ಟಬೇಕಾದ ಶುಲ್ಕಗಳನ್ನು ಕಟ್ಟಲಿಲ್ಲ. ಇದು ಪೋಷಕರ ತಪ್ಪೂ ಅಲ್ಲ. ಸರ್ಕಾರ ನೀಡಿದ ಗೊಂದಲದ ಹೇಳಿಕೆಗಳೂ ಹಾಗೂ ಸುತ್ತೋಲೆಗಳಿಂದ ಅನಿವಾರ್ಯ ಪರಿಸ್ಥಿತಿಯಲ್ಲಿ ಶುಲ್ಕವನ್ನು ಪೋಷಕರು ತುಂಬದೆ ಮೌನ ವಹಿಸಿದ್ದರು. ಇದರಿಂದ ಶಾಲೆಗಳು ತೀವ್ರ ಸಂಕಷ್ಟಕ್ಕೊಳಗಾಗಿದ್ದವು.

SURESH KUMAR

ಅದಾದ ನಂತರ ಶಾಲೆಗಳು ಆರಂಭವಾದವು, ಇನ್ನೇನು ಸಲೀಸಾಗಿ ನಡೆಯುತ್ತವೆ ಎನ್ನುವ ಹೊತ್ತಿಗೆ ಬಂದ ಎರಡನೇ ಅಲೆ ಇಡೀ ಬದುಕನ್ನೇ ನುಂಗಿದೆ. ಈ ವೇಳೆ ಶಿಕ್ಷಣ ಸಚಿವರು ಹೊರಡಿಸಿದ ಸುತ್ತೋಲೆಯಿಂದ ನಿಜಕ್ಕೂ ಖಾಸಗಿ ಅನುದಾನಿತ ಶಾಲೆಗಳ ಪರಿಸ್ಥಿತಿ ಶೋಚನೀಯವಾಗಿದೆ. ವಿದ್ಯಾಗಮ ಶುರುವಾಗುತ್ತಿದ್ದಂತೆ ಬಂದ ಎರಡನೇ ಅಲೆಯಿಂದ ಅದು ಕೂಡ ಸ್ಥಗಿತಗೊಂಡಿತು. ವಿದ್ಯಾರ್ಥಿಗಳು ಇಂತ ಹೊತ್ತಿನಲ್ಲಿ ಗೊಂದಲಕ್ಕೀಡಾದರು. ಈ ಸಮಯದಲ್ಲೇ ಶಿಕ್ಷಣ ಸಚಿವರು ಹೊರಡಿಸಿದ ಇನ್ನೊಂದು ಸುತ್ತೋಲೆ ಕೂಡ ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಶಾಲೆಗೆ ದಾಖಲಾಗದಿದ್ದರೂ ಕೂಡ ಮಕ್ಕಳನ್ನು ಉತ್ತೀರ್ಣ ಮಾಡಿ ಮುಂದಿನ ತರಗತಿಗೆ ಅವಕಾಶ ನೀಡಬೇಕು ಎನ್ನುವುದು, ಆದರೆ ಶಿಕ್ಷಣ ನೀತಿಯ ಪ್ರಕಾರ ಯಾವುದೇ ಕಾರಣಕ್ಕೂ ವಿದ್ಯಾರ್ಥಿ ದಾಖಲಾಗದೆ ಮುಂದಿನ ತರಗತಿಗೆ ಉತ್ತೀರ್ಣ ಮಾಡುವಂತಿಲ್ಲ. ಆದರೂ ಶಿಕ್ಷಣ ಸಚಿವರ ಈ ಸುತ್ತೋಲೆ ಈಗ ಒಂದು ರೀತಿ ಗೊಂದಲಕ್ಕೆ ಕಾರಣವಾಗಿದೆ.

ಇದರಿಂದ ಆಡಳಿತ ಮಂಡಳಿಗಳು ಹಾಗೂ ಶಿಕ್ಷಕರ ಪಾಡು ನಿಜಕ್ಕೂ ಶೋಚನೀಯವಾಗಿದೆ ಇಂತಹ ಅನುದಾನ ರಹಿತ ಶಾಲೆಗಳು ಶಿಕ್ಷಕರಿಗೆ ವೇತನವೂ ನೀಡಲಾಗದೆ ತೀವ್ರ ತೊಂದರೆಗಳನ್ನು ಅನುಭವಿಸುತ್ತಿವೆ. ಈ ಎಲ್ಲಾ ತಂತ್ರಗಳಿಂದ ಹೊರಬರಲು 2021-22ನೇ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಕಡ್ಡಾಯವಾಗಿ ಮಾಡುವಂತೆ ಪೋಷಕರಿಗೆ ತಿಳಿಸುವ ಸ್ಪಷ್ಟವಾದ ಸುತ್ತೋಲೆ ಹೊರಡಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿ ಶಾಲೆಗಳಿಗೆ ಸಹಾಯ ಮಾಡಬೇಕು ಎನ್ನುವುದು ನಮ್ಮ ಮನವಿ. ಈ ಎಲ್ಲಾ ವಿಷಯಗಳನ್ನು ತಾವು ಮನಗಂಡು ತಾವು ಶಿಕ್ಷಕರ ಸಹಾಯಕ್ಕೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

TAGGED:BangaloreChinmaya Education Center High SchoolgovernorPublic TVteacherಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆಪಬ್ಲಿಕ್ ಟಿವಿ Schoolಬೆಂಗಳೂರುರಾಜ್ಯಪಾಲಶಾಲೆಶಿಕ್ಷಕ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

BBMP
Districts

ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

Public TV
By Public TV
3 minutes ago
mahadevappa
Bengaluru City

ಕಾನೂನು, ಕಾಯ್ದೆ ಪ್ರಕಾರವೇ ಗ್ಯಾರಂಟಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ: ಮಹದೇವಪ್ಪ

Public TV
By Public TV
4 minutes ago
Indian Army
Latest

Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

Public TV
By Public TV
22 minutes ago
Dharmasthala SIT 1 1
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ನೇತ್ರಾವತಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

Public TV
By Public TV
1 hour ago
chidambaram
Latest

ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಅನ್ಕೋತೀರಿ, ಉಗ್ರರು ದೇಶದೊಳಗೇ ಬೆಳೆದಿರಬಹುದು – ʻಕೈʼ ನಾಯಕ ಚಿದಂಬರಂ ಹೇಳಿಕೆ ವಿವಾದ

Public TV
By Public TV
2 hours ago
jnanabharathi police 2
Bengaluru City

ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?