ಉಡುಪಿ: ಸೆಪ್ಟೆಂಬರ್ ಒಂದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭ ಆಗಲಿದೆ. ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದೇಗುಲದಲ್ಲಿ ಎಲ್ಲಾ ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ. ಸೆಪ್ಟೆಂಬರ್ 1ರಿಂದ ಸೇವೆ ಆರಂಭ ಮಾಡಬೇಕು ಎಂಬುದು ನಮ್ಮ ಗುರಿ. ರಾಜ್ಯ ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೇವೆ. ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ. ಸರ್ಕಾರದಿಂದ ಅಧಿಕೃತ ಮಾಹಿತಿ ಮತ್ತು ಅನುಮತಿ ಬರಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
- Advertisement 2
- Advertisement 3
ಸಾಮಾಜಿಕ ಅಂತರ ಕಾಪಾಡುವ ಸೇವೆಗೆ ಮುಕ್ತ ಅವಕಾಶ ಇದೆ. ಕೊಲ್ಲೂರಿನ ಚಿನ್ನದ ರಥ ಸೇವೆ, ಬೆಳ್ಳಿರಥ ಸೇವೆ ಹೇಗೆ ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ. ಕೋವಿಡ್-19 ಗೈಡ್ ಲೈನ್ ಮೇಲೆ ಎಲ್ಲಾ ಸೇವೆ ಆರಂಭವಾಗುತ್ತದೆ ಎಂದು ಹೇಳಿದರು.
- Advertisement 4
ನೂರಾರು, ಸಾವಿರಾರು ಜನ ಸೇರಿ ಕೊಡುವ ಸೇವೆ ಸದ್ಯಕ್ಕೆ ಸಾಧ್ಯವಿಲ್ಲ. ಅಂತಹ ಸೇವೆಯನ್ನು ಹತ್ತು-ಹದಿನೈದು ಜನರು ಮಾಡಲು ಸಾಧ್ಯವೇ ಎಂಬ ಚಿಂತನೆ ನಡೆಸುತ್ತೇವೆ. ಕೋವಿಡ್ ನಿಯಮದ ಮಿತಿಯ ಒಳಗೆ ಎಲ್ಲಾ ಸೇವೆಗಳು ಇರುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.