ಬೆಂಗಳೂರು: ಸೋಮವಾರದಿಂದ ಕೆಲ ಜಿಲ್ಲೆಗಳು ಹಾಗೂ ಕೆಲ ವಲಯಗಳಿಗೆ ಅನ್ ಲಾಕ್ ಘೋಷಣೆ ಮಾಡಿರುವ ಸರ್ಕಾರ ಒಂದು ವೇಳೆ ಅನ್ ಲಾಕ್ ನಿಂದ ಸೋಂಕು ಹೆಚ್ಚಳ ಆದ್ರೆ ಮತ್ತೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತೆ ಅಂತ ಎಚ್ಚರಿಕೆ ಕೊಟ್ಟಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ರಾಜ್ಯದಲ್ಲಿ ಅನ್ ಲಾಕ್ ನಿಂದ ಸೋಂಕು ಹೆಚ್ಚಾದರೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳೋದು ಅನಿವಾರ್ಯ ಅಂತ ಎಚ್ಚರಿಕೆ ನೀಡಿದ್ದಾರೆ.
ಅನ್ ಲಾಕ್ ಮಾಡಿದರು ಜನರು ಎಚ್ಚರಿಕೆಯಿಂದ ಇರಬೇಕು. ಎರಡು ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು. ರಾಜ್ಯದಲ್ಲಿ ಕನಿಷ್ಟ ಶೇ.70 ಜನರಿಗೆ ಲಸಿಕೆ ಕಂಪ್ಲೀಟ್ ಆದ ಮೇಲೆ ನಾವು ಮೊದಲಿನಂತೆ ಆರಾಮಾಗಿ ಇರಬಹುದು. ಲಸಿಕೆ ಹಾಕಿಸಿಕೊಳ್ಳೋವರೆಗೂ ಯಾರೂ ಮೈ ಮರೆಯಬೇಡಿ ಅಂತ ಮನವಿ ಮಾಡಿದ್ರು.
ರಾಜ್ಯದಲ್ಲಿ ಆರ್ಥಿಕ ನಷ್ಟ ಆಗಿದೆ. ಹೀಗಾಗಿ ಕೆಲ ವಿನಾಯ್ತಿ ಕೊಡಲಾಗಿದೆ. ಅಳೆದು ತೂಗಿ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ರಿಯಾಯ್ತಿಯಿಂದ ಸೋಂಕು ಹೆಚ್ಚಳ ಆದ್ರೆ ಮತ್ತೆ ಕಠಿಣ ಕ್ರಮ ಗ್ಯಾರಂಟಿ ತೆಗೆದುಕೊಳ್ತೀವಿ ಅಂತ ಎಚ್ಚರಿಕೆ ಕೊಟ್ರು. ಶೇ.10ಕ್ಕಿಂತ ಹೆಚ್ಚು ಸೋಂಕು ಇರೋ ಜಿಲ್ಲೆಗಳು ಗಂಭೀರವಾಗಿ ಪರಿಗಣಿಸಬೇಕು. ಶೇ.5 ಒಳಗೆ ಸೋಂಕು ಇರೋ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು. ಅಂತರ್ ರಾಜ್ಯ, ಹೊರ ದೇಶದಿಂದ ಬರೋರಿಗೆ ಚೆಕ್ ಪಾಯಿಂಟ್ ಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಆಗಬೇಕು ಅಂತ ತಿಳಿಸಿದ್ರು.
ಗ್ರಾಮೀಣ ಭಾಗದಲ್ಲಿ ಎಚ್ಚರವಹಿಸಬೇಕು. ಒಂದು ಗ್ರಾಮದಲ್ಲಿ 5 ಸೋಂಕಿತರು ಕಂಡು ಬಂದರೇ ಅ ಗ್ರಾಮವನ್ನೆ ಸೀಲ್ ಡೌನ್ ಮಾಡಬೇಕು. ಗ್ರಾಮ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನ ಕೂಡಲೇ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕು ಅಂತ ಮನವಿ ಮಾಡಿದ್ರು. ಇದನ್ನೂ ಓದಿ: ಕೋವಿನ್ ಪೋರ್ಟಲ್ ಹ್ಯಾಕ್ ಆಗಿಲ್ಲ, ಸುಳ್ಳು ಸುದ್ದಿ- ಕೇಂದ್ರ ಸರ್ಕಾರ ಸ್ಪಷ್ಟನೆ
ನಗರ ಭಾಗದಲ್ಲಿ ಜನ ಅನಗತ್ಯವಾಗಿ ಓಡಾಡಬಾರದು. ಬೆಂಗಳೂರು ನೋಡಿದ್ರೆ ನನಗೂ ಭಯ ಆಗುತ್ತೆ. ಸ್ವಲ್ಪ ಎಚ್ಚರ ತಪ್ಪಿದ್ರು ಆಪಾಯ ಗ್ಯಾರಂಟಿ. ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ನಿಯಮ ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಅಂತ ಮನವಿ ಮಾಡಿದ್ರು. 3-4 ತಿಂಗಳಲ್ಲಿ ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ಸಿಗುತ್ತೆ. ಅಲ್ಲಿಯವರೆಗೂ ಎಲ್ಲರೂ ಎಚ್ಚರವಾಗಿ ನಿಯಮ ಪಾಲನೆ ಮಾಡಬೇಕು ಅಂತ ಮನವಿ ಮಾಡಿದ್ರು.
ಸರ್ಕಾರ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ:
ರಾಜ್ಯದಲ್ಲಿ ಸಾವಿನ ಸಂಖ್ಯೆಯನ್ನ ಸರ್ಕಾರ ಮುಚ್ಚಿಟ್ಟಿಲ್ಲ ಅಂತ ಆರೋಗ್ಯ ಸಚಿವ ಸುಧಾಕರ್ ಇದೇ ವೇಳೆ ಸ್ಪಷ್ಟಪಡಿಸಿದರು. ಸರ್ಕಾರ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ. ಇದನ್ನ ಪದೇ ಪದೇ ಹೇಳುತ್ತಿದ್ದೇನೆ. ನಮ್ಮ ರಾಜ್ಯವನ್ನ ಬಿಹಾರಕ್ಕೆ ಹೋಲಿಸಬೇಡಿ. ಕರ್ನಾಟಕಕ್ಕೂ ಬಿಹಾರಕ್ಕೂ ಹೋಲಿಕೆ ಮಾಡೋದು ಸರಿಯಲ್ಲ. ಯಾವುದೇ ಮಾಹಿತಿ ನಾವು ಮುಚ್ಚಿಟ್ಟಿಲ್ಲ. ಅಂತಹ ಅವಕಾಶವೇ ಇಲ್ಲ ಅಂತ ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.