Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ

Latest

ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ

Public TV
Last updated: October 29, 2020 4:23 pm
Public TV
Share
4 Min Read
dhanoa abhinandan 2
SHARE

– ಅಭಿನಂದನ್ ತಂದೆಗೆ ಧೈರ್ಯ ತುಂಬಿದ್ದ ಮಾಜಿ ವಾಯು ಸೇನಾ ಮುಖ್ಯಸ್ಥ
– ನಮ್ಮ ಶಕ್ತಿಯ ಅರಿವು ಪಾಕಿಗೆ ತಿಳಿದಿತ್ತು

ನವದೆಹಲಿ: ಭಾರತೀಯ ವಾಯು ಸೇನೆಯ ಪೈಲಟ್ ಅಭಿನಂದನ್ ವಿಚಾರದಲ್ಲಿ ಪಾಕಿಸ್ತಾನಕ್ಕೆ ಢವ ಢವ ಶುರುವಾಗಿತ್ತು. ಸೇನಾ ಮುಖ್ಯಸ್ಥರ ಕೈ, ಕಾಲು ನಡುಗುತ್ತಿತ್ತು ಎಂಬ ವಿಚಾರವನ್ನು ಸ್ವತಃ ಪಾಕ್ ಸಂಸದ ಸಂಸತ್‍ನಲ್ಲಿ ಬಿಚ್ಚಿಟಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ವಾಯು ಸೇನೆಯ ನಿವೃತ್ತ ಮುಖ್ಯಸ್ಥ ಬಿ.ಎಸ್.ಧನೋವಾ ಈ ಕುರಿತು ಮಾತನಾಡಿದ್ದು, ಒಂದು ವೇಳೆ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದಲ್ಲಿ ಪಾಕಿಸ್ತಾನದ ಬ್ರಿಗೇಡ್‍ಗಳನ್ನೇ ಧ್ವಂಸ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ.

abhinand varthaman bs dhanoa

ಪಾಕಿಸ್ತಾನ ಸಂಸದರ ಹೇಳಿಕೆ ಬೆನ್ನಲ್ಲೇ ಮಾತನಾಡಿರುವ ಧನೋವಾ, ಅಭಿನಂದನ್ ಪಾಕಿಸ್ತಾನದಲ್ಲಿ ಸೆರೆಯಾದಾಗ ನಾನು ಅವರ ತಂದೆಗೆ ಧೈರ್ಯ ತುಂಬಿದ್ದೆ. ಖಂಡಿತವಾಗಿಯೂ ನಾವು ಅಭಿನಂದನ್ ಅವರನ್ನು ಮರಳಿ ಕರೆ ತರುತ್ತೇವೆ ಎಂದು ಹೇಳಿದ್ದೆ ಎಂದು ಅವರು ತಿಳಿಸಿದ್ದಾರೆ.

ಇದೀಗ ಪಾಕಿಸ್ತಾನ ಸಂಸದರ ಹೇಳಿಕೆಯನ್ನು ಗಮನಿಸಿದರೆ ನಮ್ಮ ಸೇನೆ ಎಷ್ಟು ಆಕ್ರಮಣಕಾರಿಯಾಗಿದೆ ಎಂಬುದನ್ನು ತಿಳಿಯಬಹುದು. ಪಾಕಿಸ್ತಾನದ ಫಾರ್ವರ್ಡ್ ಬ್ರಿಗೇಡ್‍ಗಳನ್ನು ಧ್ವಂಸ ಮಾಡಲು ನಾವು ಆಗಲೇ ಸಿದ್ಧತೆ ನಡೆಸಿದ್ದೆವು. ನಮ್ಮ ಸಾಮರ್ಥ್ಯ ಏನೆಂದು ಅವರಿಗೆ ತಿಳಿದಿದೆ ಎಂದು ಧನೋವಾ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಆರ್ 73 ಸೆಲೆಕ್ಟ್ ಮಾಡಿದ್ದೇನೆ : ಅಭಿನಂದನ್ ಕೊನೆಯ ರೇಡಿಯೋ ಸಂದೇಶ – ಡಾಗ್ ಫೈಟ್ ಹೇಗೆ ನಡೆಯಿತು?

bs dhanoa

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಮ್ಮ ಭಾರತೀಯ ಸೇನೆ ಶಕ್ತಿ ಕುರಿತು ವಿರೋಧ ಪಕ್ಷಗಳಿಗೆ ಅರಿವಿಲ್ಲ. ಕಾಂಗ್ರೆಸ್ ಪಕ್ಷ ನಮ್ಮ ಸಶಸ್ತ್ರ ಪಡೆಗಳನ್ನು ದುರ್ಬಲವಾಗಿಸುವ ಅಭಿಯಾನ ನಡೆಸಿದೆ. ನಮ್ಮ ಸಶಸ್ತ್ರ ಪಡೆಗಳ ಕುರಿತು ಅಪಹಾಸ್ಯ ಮಾಡಿದ್ದಾರೆ. ಅವರ ಶೌರ್ಯವನ್ನು ಪ್ರಶ್ನಿಸಿದ್ದಾರೆ. ಇತ್ತೀಚೆಗೆ ರಫೇಲ್ ಯುದ್ಧ ವಿಮಾನ ಖರೀದಿಯನ್ನು ತಡೆಯಲು ಸಹ ಪ್ರತಿಯೊಂದು ತಂತ್ರವನ್ನು ಮಾಡಿದರು. ಆದರೆ ಜನ ಅಂತಹ ರಾಜಕೀಯವನ್ನು ತಿರಸ್ಕರಿಸಿ ಕಾಂಗ್ರೆಸ್‍ನ್ನು ಶಿಕ್ಷಿಸಿದರು ಎಂದು ಹರಿಹಯ್ದಿದ್ದಾರೆ.

Congress Party premised it’s entire campaign around keeping our armed forces weak. They mocked our armed forces, questioned their valour and tried every trick to ensure India doesn’t get latest Rafale Planes. The people India rejected such politics and punished Congress.

— Jagat Prakash Nadda (@JPNadda) October 29, 2020

ಕಾಂಗ್ರೆಸ್ ಭಾರತದ ರಾಜತಾಂತ್ರಿಕತೆಯನ್ನು ನಂಬುವುದಿಲ್ಲ. ಅದು ಸೈನ್ಯವಾಗಲಿ, ನಮ್ಮ ಸರ್ಕಾರವನ್ನಾಗಲೀ, ನಮ್ಮ ಜನರನ್ನೇ ಆಗಲಿ ಯಾವುದನ್ನೂ ನಂಬುವುದಿಲ್ಲ. ಪಾಕಿಸ್ತಾನ ಅವರ ‘ಅತ್ಯಂತ ವಿಶ್ವಾಸಾರ್ಹ ರಾಷ್ಟ್ರವಾಗಿದೆ’. ಆಶಾದಾಯಕ ಬೆಳವಣಿಗೆ ಎಂಬಂತೆ ಅವರು ಈಗ ಬೆಳಕು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿಗೆ ಟಾಂಗ್ ನೀಡಿದರು. ಇದನ್ನೂ ಓದಿ: ಅಭಿನಂದನ್‍ಗೆ ಮಾರ್ಗದರ್ಶನ ನೀಡಿದ್ದ ಐಎಎಫ್ ಮಹಿಳಾ ನಿಯಂತ್ರಕಿಗೆ ಯುಧ್ ಸೇವಾ ಪದಕ

Congress’ princeling does not believe anything Indian, be it our Army, our Government, our Citizens. So, here is something from his ‘Most Trusted Nation’, Pakistan. Hopefully now he sees some light… pic.twitter.com/shwdbkQWai

— Jagat Prakash Nadda (@JPNadda) October 29, 2020

ಪಾಕ್ ಸಂಸದ ಹೇಳಿದ್ದೇನು?
ಬುಧವಾರ ಸಂಸತ್ತಿನಲ್ಲಿ ಮಾತನಾಡಿರುವ ಪಾಕಿಸ್ತಾನ ಮುಸ್ಲಿಂ ಲೀಗ್ ಎನ್ ಪಕ್ಷದ ಮುಖ್ಯಸ್ಥ, ಸಂಸದ ಅಯಾಜ್ ಸಾದಿಕ್, ಪಾಕಿಸ್ತಾನ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಆ ರಾತ್ರಿ 9 ಗಂಟೆ ವೇಳೆಗೆ ಭಾರತ ಪಾಕಿಸ್ತಾನ ಮೇಲೆ ದಾಳಿ ಮಾಡುತ್ತದೆ ಎಂದು ವಿದೇಶಾಂಗ ಸಚಿವ ಖುರೇಷಿ ಬಂದು ಬೇಡಿಕೊಂಡಿದ್ದರು ಎಂದು ಮಾತನಾಡಿರುವ ಬಗ್ಗೆ ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.

ಅಭಿನಂದನ್ ರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ರಾತ್ರಿ ೯ ಗಂಟೆಯಷ್ಟರಲ್ಲಿ ಭಾರತ ಪಾಕ್ ಮೇಲೆ ಆಕ್ರಮಣ ಮಾಡಲಿದೆ ಎಂದಿದ್ದರು ಪಾಕ್ ವಿದೇಶಾಂಗ ಸಚಿವ ಖುರೇಷಿ pic.twitter.com/7qsZ5RoBQn

— Pratap Simha (@mepratap) October 29, 2020


ಪ್ರಮುಖ ಸಭೆಯಲ್ಲಿದ್ದ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ, ವಿರೋಧ ಪಕ್ಷ ನಾಯಕರು, ಸಂಸತ್ ಸದಸ್ಯರು ಸೇರಿದಂತೆ ಎಲ್ಲರೂ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ಹೇಳಿದ್ದರು. ಸಭೆಯಲ್ಲಿ ಭಾಗಿಯಾಗಲು ಇಮ್ರಾನ್ ಖಾನ್ ನಿರಾಕರಿಸಿದ್ದರು. ಈ ವೇಳೆ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ ಕೋಣೆಗೆ ಬಂದರು. ಅವರ ಕಾಲುಗಳು ನಡುಗುತ್ತಿದ್ದವು, ಅವರು ಬೆವರುತ್ತಿದ್ದರು. ವಿದೇಶಾಂಗ ಸಚಿವರು ದೇವರ ಸಲುವಾಗಿ ಅವರನ್ನು ಬಿಡಲಿ, ಭಾರತ ರಾತ್ರಿ 9 ಗಂಟೆಗೆ ದಾಳಿ ಮಾಡಲಿದೆ ಎಂದಿದ್ದರು ಎಂದು ಸಾದಿಕ್ ಅಂದಿನ ಘಟನೆಯ ಬಗ್ಗೆ ಬಿಚ್ಚಿಟ್ಟಿದ್ದಾರೆ. ಅಲ್ಲದೆ ಮೊದಲು ಅಭಿನಂದನ್ ಸೇರಿದಂತೆ ಎಲ್ಲ ವಿಷಯಗಳಲ್ಲಿ ಸರ್ಕಾರದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದಿದ್ದ ಪ್ರತಿಪಕ್ಷಗಳು ಮತ್ತೆ ಬೆಂಬಲಿಸಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

abhinandan

ಅಭಿನಂದನ್ ಸೆರೆಯಾಗಿದ್ದು ಹೇಗೆ?
2019ರ ಫೆ. 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‍ಪಿಎಫ್ ಯೋಧರಿದ್ದ ಬಸ್ಸಿನ ಮೇಲೆ ಜೈಷ್ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿದ್ದ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ವಾಯು ಪಡೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಜೈಷ್ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ಸದೆಬಡೆದಿತ್ತು.

Abhinandan PTI 2

ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ಫೆ.27 ರಂದು ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪತನಗೊಂಡಿತ್ತು. ಆಗ ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

TAGGED:Abhinandan VarthamanAyaz Sadiqbs dhanoaindiaindian air forcepakistanPublic TVಅಭಿನಂದನ್ ವರ್ಧಮಾನ್ಅಯಾಜ್ ಸಾದಿಕ್ಪಬ್ಲಿಕ್ ಟಿವಿಪಾಕಿಸ್ತಾನಬಿ. ಎಸ್ ಧನೋವಾಭಾರತಭಾರತೀಯ ವಾಯು ಪಡೆ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
5 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
41 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
52 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
1 hour ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?