ಅಭಿಪ್ರಾಯ ಭೇದವಿದ್ದರೆ ಮುಕ್ತವಾಗಿ ಚರ್ಚೆಗೆ ಅವಕಾಶ ಇದೆ: ಕೋಟ

Public TV
1 Min Read
kota srinivas

– ಪುಂಡಾಟಕ್ಕೆ ಕಠಿಣ ಶಿಕ್ಷೆಯಾಗಲಿ

ಉಡುಪಿ: ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಿಂಸಾಚಾರವನ್ನು ಮುಜರಾಯಿ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಖಂಡಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತಮಾಡಿದ ಅವರು, ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಅಕ್ಷರಕ್ಷರ ಅಪರಾಧ. ಸಾರ್ವಜನಿಕ ಆಸ್ತಿ ನಷ್ಟಕ್ಕೆ ಕಠಿಣ ಶಿಕ್ಷೆ ಆಗಬೇಕಿದೆ. ಪೊಲೀಸ್ ಠಾಣೆಯ ಪೀಠೋಪಕರಣ ಧ್ವಂಸ ಮಾಡಿದ್ದು ಶಿಕ್ಷಾರ್ಹ ಅಪರಾಧ ಎಂದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರ್ದಾಕ್ಷಿಣ್ಯ ಕ್ರಮಕ್ಕೆ ಆದೇಶಿಸಿದ್ದಾರೆ. ಸಿಎಂ ಅವರ ಆದೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಕೋಟ ಹೇಳಿದರು.

ಅಭಿಪ್ರಾಯ ಭೇದ ಇದ್ದರೆ ಮುಕ್ತವಾಗಿ ಚರ್ಚೆಗೆ ಅವಕಾಶ ಇದೆ. ಪುಂಡಾಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇಂತಹ ಪುಂಡಾಟಿಕೆ ರಾಜ್ಯದಲ್ಲಿ ನಡೆಯಬಾರದು. ಸಿಎಂ ಗೃಹ ಸಚಿವರ ಕ್ರಮವನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಪೂಜಾರಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *