ಅಭಿಮಾನಿಗಳು ಯಾವತ್ತೂ ನಮ್ಮ ಮನಸ್ಸಲ್ಲೇ ಇರುತ್ತಾರೆ: ಸುಮಲತಾ

Public TV
2 Min Read
sumalatha

– ಮಗನ 2ನೇ ಚಿತ್ರದ ಪೋಸ್ಟರ್ ಲಾಂಚ್

ಬೆಂಗಳೂರು: ಪ್ರತಿವರ್ಷನೂ ನಮ್ಮ ಮನೆ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿ ಜೈಕಾರ ಹಾಕುತ್ತಿದ್ದರು. ಕೇಕ್, ಹೂವಿನ ಹಾರ ತಂದು ಸಂಭ್ರಮಿಸುತ್ತಿದ್ದರು. ಆದರೆ ಈಗ ಅದೆಲ್ಲಾ ಮನಸ್ಸಿನಲ್ಲಿದೆ. ಈ ವರ್ಷ ಅಭಿಮಾನಿಗಳು ಬರಲು ಸಾಧ್ಯವಾಗಿಲ್ಲ. ಆದರೆ ಅಭಿಮಾನಿಗಳು ಯಾವತ್ತೂ ನಮ್ಮ ಮನಸ್ಸಿನಲ್ಲಿಯೇ ಇರುತ್ತಾರೆ ಎಂದು ದಿವಂಗತ ಅಂಬರೀಶ್ ಪತ್ನಿ ಸುಮಲತಾ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ, ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಅಭಿಮಾನಿಗಳು ಇಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಆದರೆ ನಿನ್ನೆಯಿಂದಲೇ ಸಾವಿರಾರು ಜನರು ಸೋಶಿಯಲ್ ಮೀಡಿಯಾ, ಫೋನ್ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಆದ್ದರಿಂದ ಅಭಿಮಾನ ಅನ್ನೋದು ಎಲ್ಲೂ ಹೋಗಿಲ್ಲ. ಈ ವರ್ಷ ಅಭಿಮಾನಿಗಳು ಇಂತಹ ಪರಿಸ್ಥಿತಿಯಲ್ಲಿ ಬರಲು ಸಾಧ್ಯವಾಗಿಲ್ಲ. ಪ್ರತಿವರ್ಷನೂ ನಮ್ಮ ಮನೆ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿ ಜೈಕಾರ ಹಾಕುತ್ತಿದ್ದರು. ಕೇಕ್, ಹೂವಿನ ಹಾರ ತಂದು ಸಂಭ್ರಮಿಸುತ್ತಿದ್ದರು. ಆದರೆ ಈಗ ಅದೆಲ್ಲಾ ಮನಸ್ಸಿನಲ್ಲಿದೆ. ಅದು ಮರೆಯಲಾಗದ ಕ್ಷಣ, ಆ ನೆನಪು ಎಲ್ಲೂ ಹೋಗಿಲ್ಲ ಎಂದರು.

sumalatha 12

ಅಂಬಿ ಹುಟ್ಟುಹಬ್ಬದ ದಿನವೇ ಅಭಿಷೇಕ್ 2ನೇ ಸಿನಿಮಾ ಫಸ್ಟ್ ಲುಕ್ ಲಾಂಚ್ ಆಗಿದ್ದು ಸಂತೋಷವಾಗುತ್ತಿದೆ. ಒಂದು ವರ್ಷದಿಂದ ಅವರ ಸಿನಿಮಾದ ಬಗ್ಗೆ ಅಭಿಮಾನಿಗಳು ಕಾಯುತ್ತಿದ್ದರು. ಮೊದಲ ಸಿನಿಮಾ ಲವ್ ಸ್ಟೋರಿ ಆಗಿತ್ತು. ಹೀಗಾಗಿ ಬೇರೆ ರೀತಿಯ ಪಾತ್ರ ಮಾಡುವಂತಹ ಕಥೆಯನ್ನ ಹುಡುಕುತ್ತಿದ್ದೆವು. ಈ ಬಾರಿ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಸೂರಿ ಅವರು ತುಂಬಾ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಹೀಗಾಗಿ ಎರಡನೇ ಸಿನಿಮಾ ಸೂರಿ ಜೊತೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ ಎಂದು ಮಗನ ಸಿನಿಮಾ ಬಗ್ಗೆ ಮಾತನಾಡಿದರು.

sumalatha 3

ಸುಮಲತಾ ಅವರು ಮಗ ಅಭಿಷೇಕ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಪೋಸ್ಟರ್ ಲಾಂಚ್ ಮಾಡಿದ್ದಾರೆ. ರೆಬೆಲ್‍ಸ್ಟಾರ್ ಅಂಬರೀಷ್ ಅವರ ಜನ್ಮ ಜಯಂತಿಯ ಪ್ರಯುಕ್ತ ಯಂಗ್ ಅಭಿಷೇಕ್ ಅಂಬರೀಷ್ ಅಭಿನಯದ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಬಿಡುಗಡೆಯಾಗಿರುವ ಪೋಸ್ಟರಿನಲ್ಲಿ ಅಭಿಷೇಕ್ ಗನ್ ಹಿಡಿದುಕೊಂಡು ಸ್ಟೈಲಿಶ್ ಆಗಿ ಖದರ್ ಪೋಸ್ ಕೊಟ್ಟಿದ್ದಾರೆ.

ಈ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದು, ಸುಧೀರ್ ಕೆ.ಎಂ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್‍ನಲ್ಲಿ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಅಧಿಕೃತ ಫಸ್ಟ್ ಲುಕ್ ವಿಡಿಯೋ ರಿಲೀಸ್ ಆಗಿದೆ.

ನಟ ದಿವಂಗತ ಅಂಬರೀಶ್ ಹುಟ್ಟುಹಬ್ಬ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸಮಾಧಿ ಬಳಿ ಹೂವಿನ ಅಲಂಕಾರ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಪತ್ನಿ ಸುಮಾಲತಾ, ಮಗ ಅಭಿಷೇಕ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಸಚಿವ ಗೋಪಾಲಯ್ಯ, ನಟ ದೊಡ್ಡಣ್ಣ ಸೇರಿ ಕುಟುಂಬದ ಅಪ್ತರು ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *