Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭ್ಯರ್ಥಿಗಳ ಪಕ್ಷ ಬದಲು – ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಭ್ಯರ್ಥಿಗಳ ಪಕ್ಷ ಬದಲು – ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

Districts

ಅಭ್ಯರ್ಥಿಗಳ ಪಕ್ಷ ಬದಲು – ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

Public TV
Last updated: November 25, 2020 9:52 pm
Public TV
Share
3 Min Read
Maski by election
SHARE

ರಾಯಚೂರು: ಮಸ್ಕಿ ಉಪಚುನಾವಣೆ ದಿನಾಂಕ ಇನ್ನೂ ಪ್ರಕಟವಾಗಿಲ್ಲ, ಆದರೆ ಕ್ಷೇತ್ರದಲ್ಲಿ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ತುಂಬು ಉತ್ಸಾಹದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಉಪಚುನಾವಣೆ ಜಿದ್ದಾಜಿದ್ದಿನ ಕಣವಾಗಿದ್ದು ಜೆಡಿಎಸ್ ಸದ್ಯಕ್ಕೆ ತಟಸ್ಥವಾಗಿದೆ. ಸಮಾವೇಶಗಳ ಮೂಲಕ ಕಾರ್ಯಕರ್ತರ ಸಂಘಟನೆಯ ಜೊತೆ ತಳಮಟ್ಟದಿಂದಲೂ ಪಕ್ಷ ಬಲಪಡಿಸಿಕೊಳ್ಳಲು ಕಾಂಗ್ರೆಸ್ ಬಿಜೆಪಿ ಮುಂದಾಗಿವೆ. ಕಳೆದ ಬಾರಿಯ ಚುನಾವಣೆಯಲ್ಲಿದ್ದ ಪ್ರಬಲ ಅಭ್ಯರ್ಥಿಗಳೇ ಈ ಬಾರಿಯೂ ಮುಖಾಮುಖಿಯಾಗುತ್ತಿದ್ದಾರೆ. ಆದರೆ ಪಕ್ಷಗಳು ಮಾತ್ರ ಅದಲು ಬದಲು ಆಗಿರುವುದರಿಂದ ಕಾರ್ಯಕರ್ತರು ಸಹ ಪಕ್ಷಗಳನ್ನು ಬದಲಿಸಿದ್ದಾರೆ.

ನವೆಂಬರ್ 7ರಂದು ಬೆಂಗಳೂರಲ್ಲಿ ಅನೌಪಚಾರಿಕವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಆರ್.ಬಸನಗೌಡ ತುರುವಿಹಾಳ ನವೆಂಬರ್ 23ರಂದು ಸುಮಾರು ಐದು ಸಾವಿರ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಪ್ರತಾಪ್ ಗೌಡರನ್ನು ಸೋಲಿಸಲು ಕಾಂಗ್ರೆಸ್‍ಗೆ ಬಂದಿರುವುದಾಗಿ ಹೇಳಿರುವ ಬಸನಗೌಡ ಬಿಜೆಪಿಯಲ್ಲಿ ನಮ್ಮ ಕಾರ್ಯಕರ್ತರಿಗೆ ಬೆಲೆಯಿಲ್ಲದ ಕಾರಣ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ ಅಂತ ತಿಳಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕಾಲಿಗೆ ನಮಸ್ಕರಿಸಿ, ಸಮಾವೇಶದಲ್ಲಿ ನೆರೆದಿದ್ದ ಸಾವಿರಾರು ಜನರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

by election 6

ಸಮಾವೇಶದಲ್ಲಿ ಸುಮಾರು 20 ಸಾವಿರ ಜನರನ್ನು ಸೇರಿಸುವ ಮೂಲಕ ಬಲಪ್ರದರ್ಶನವನ್ನೂ ಕಾಂಗ್ರೆಸ್ ಮಾಡಿದೆ. ಸಮಾವೇಶದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ಪ್ರತಾಪಗೌಡ ಪಾಟೀಲ್ ಕಾಂಗ್ರೆಸ್ ಪಕ್ಷ ಹಾಗೂ ಮತದಾರರಿಗೆ ಮೋಸ ಮಾಡಿದ್ದಾರೆ. ಪ್ರತಾಪ್ ಗೌಡರನ್ನು ಗೆಲ್ಲುವ ಕುದುರೆ ಅಂತ ಪಕ್ಷಕ್ಕೆ ಸೇರಿಸಿಕೊಂಡೆವು ಆದರೆ ಪ್ರತಾಪ್ ಗೌಡ ಚೆಂಗೂಲಿ ಕುದುರೆ ಅಂತ ಜರಿದಿದ್ದಾರೆ. ಯಾವ ಪಕ್ಷ ಎಂಎಲ್‍ಎ ಮಾಡಿತ್ತೋ ಅದೇ ಪಕ್ಷಕ್ಕೆ ಚೂರಿ ಹಾಕಿ ಬಿಜೆಪಿಗೆ ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನ ಕೊಟ್ಟಿಲ್ಲ ಅದಕ್ಕೆ ಹೋಗುತ್ತೇನೆ ಅಂತ ಬಿಜೆಪಿ ಹೋಗಿದ್ದಾರೆ. ಕೇಳಿದಾಗೆಲ್ಲ ಅನುದಾನ ಕೊಟ್ಟಿದ್ದರು ದ್ರೋಹ ಮಾಡಿದ್ದಾರೆ. ಅವರಿಗೆ ಜನ ಪಾಠ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

by election 2

ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಪ್ರತಾಪ್ ಗೌಡ ಅಭಿವೃದ್ಧಿ ವಿಚಾರದಲ್ಲಿ ಇಚ್ಚಾಶಕ್ತಿಯಿಲ್ಲದ ವ್ಯಕ್ತಿ, 5 ಎ ಕಾಲುವೆ ಬಗ್ಗೆ ಕೇಳಿದಾಗಲೆಲ್ಲಾ ಸುಮ್ಮನಾಗುತ್ತಿದ್ದರು. ಈಗ ಕಾಲುವೆ ಬಗ್ಗೆ ಮಾತನಾಡುತ್ತಿದ್ದಾರೆ. ನಮ್ಮ ಅವಧಿಯಲ್ಲೇ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳು ಜಾರಿಗೆ ಬಂದಿವೆ. ನಂದವಾಡಗಿ ಯೋಜನೆ ಕಾಂಗ್ರೆಸ್ ಕೊಡುಗೆ. ಮುಂದೆ ನಮ್ಮ ಸರ್ಕಾರವೇ ಬರುತ್ತೆ ಬಸನಗೌಡ ತುರವಿಹಾಳ ಶಾಸಕರಾಗಿ ಇರುತ್ತಾರೆ. 5 ಎ ಕಾಲುವೆ ಯೋಜನೆ ಜಾರಿಯಾಗುತ್ತೆ ಎಂದು ತಮ್ಮ ಭಾಷಣದಲ್ಲಿ ಜಲಾಸ್ತ್ರ ಪ್ರಯೋಗಿಸಿ ಮತದಾರರನ್ನ ಸೆಳೆಯುವ ಪ್ರಯತ್ನ ಮಾಡಿದರು.

by election 5

ಬಿಜೆಪಿ ಸಹ ಕ್ಷೇತ್ರದಲ್ಲಿ ನಿರಂತರವಾಗಿ ಮೆರವಣಿಗೆ, ಸಮಾವೇಶಗಳ ಮೂಲಕ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿದೆ. ಪ್ರತಾಪ್ ಗೌಡ ಪಾಟೀಲ್ ಚುನಾವಣೆಯಲ್ಲಿ ಗೆದ್ದರೆ ಕೇವಲ ಶಾಸಕರಲ್ಲ ಸಚಿವರಾಗುತ್ತಾರೆ ಅಂತಲೇ ಕ್ಷೇತ್ರದ ಉಸ್ತುವಾರಿ ಹೊತ್ತಿರುವ ವಸತಿ ಸಚಿವ ವಿ.ಸೋಮಣ್ಣ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಪ್ರಚಾರ ನಡೆಸಿದ್ದಾರೆ.

by election 3

ಇತ್ತೀಚಿಗೆ ಸಿಂಧನೂರಿನಲ್ಲಿ ಆಯೋಜಿದ್ದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಮುಖಂಡರ ದಂಡೆ ಭಾಗವಹಿಸಿತ್ತು. ಮಸ್ಕಿ ಉಪಚುನಾವಣೆಗೆ ಪಕ್ಷ ಬಲಪಡಿಸಲು ರಾಜ್ಯಾಧ್ಯಕ್ಷರ ನಳಿನ್‍ಕುಮಾರ್ ಕಟೀಲ್, ಉಪಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು. ಕ್ಷೇತ್ರದ ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ ಪ್ರತಾಪ್ ಗೌಡ ಪಾಟೀಲ್‍ರನ್ನು ಸಚಿವರನ್ನಾಗಿ ಮಾಡುವ ಭರವಸೆ ನೀಡುತ್ತಾ ಮತದಾರರನ್ನು ಸೆಳೆಯಲು ಬಿಜೆಪಿ ಮುಖಂಡರು ಮುಂದಾಗಿದ್ದಾರೆ.

by election 4

ಕಳೆದ ಬಾರಿ ಕೇವಲ 213 ಮತಗಳ ಕಡಿಮೆ ಅಂತರದಲ್ಲಿ ಸೋತಿರುವ ಬಸನಗೌಡ ತುರವಿಹಾಳಗೆ ಅನುಕಂಪದ ಅಲೆಯಿದ್ದರೆ. ಮೂರು ಬಾರಿ ಶಾಸಕರಾಗಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪಚುನಾವಣೆಗೆ ಕಾರಣರಾಗಿರುವ ಪ್ರತಾಪ್ ಗೌಡ ಪಾಟೀಲ್ ವಿರೋಧ ಅಲೆಯೂ ಜೋರಾಗಿದೆ. ಆದರೆ ಈ ಇಬ್ಬರ ಪಕ್ಷಗಳೂ ಸಹ ಈಗ ಬದಲಾಗಿರುವುದರಿಂದ ಜನ ಯಾರ ಮೇಲೆ ಒಲವು ತೋರುತ್ತಾರೋ ಗೊತ್ತಿಲ್ಲ.

TAGGED:bjpby electioncongressMaskiPublic TVraichuruಉಪಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮಸ್ಕಿರಾಯಚೂರು
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
40 minutes ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
1 hour ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
2 hours ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
2 hours ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
2 hours ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?