Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭ್ಯರ್ಥಿಗಳ ಪಕ್ಷ ಬದಲು – ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಭ್ಯರ್ಥಿಗಳ ಪಕ್ಷ ಬದಲು – ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

Districts

ಅಭ್ಯರ್ಥಿಗಳ ಪಕ್ಷ ಬದಲು – ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

Public TV
Last updated: November 25, 2020 9:52 pm
Public TV
Share
3 Min Read
Maski by election
SHARE

ರಾಯಚೂರು: ಮಸ್ಕಿ ಉಪಚುನಾವಣೆ ದಿನಾಂಕ ಇನ್ನೂ ಪ್ರಕಟವಾಗಿಲ್ಲ, ಆದರೆ ಕ್ಷೇತ್ರದಲ್ಲಿ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ತುಂಬು ಉತ್ಸಾಹದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಉಪಚುನಾವಣೆ ಜಿದ್ದಾಜಿದ್ದಿನ ಕಣವಾಗಿದ್ದು ಜೆಡಿಎಸ್ ಸದ್ಯಕ್ಕೆ ತಟಸ್ಥವಾಗಿದೆ. ಸಮಾವೇಶಗಳ ಮೂಲಕ ಕಾರ್ಯಕರ್ತರ ಸಂಘಟನೆಯ ಜೊತೆ ತಳಮಟ್ಟದಿಂದಲೂ ಪಕ್ಷ ಬಲಪಡಿಸಿಕೊಳ್ಳಲು ಕಾಂಗ್ರೆಸ್ ಬಿಜೆಪಿ ಮುಂದಾಗಿವೆ. ಕಳೆದ ಬಾರಿಯ ಚುನಾವಣೆಯಲ್ಲಿದ್ದ ಪ್ರಬಲ ಅಭ್ಯರ್ಥಿಗಳೇ ಈ ಬಾರಿಯೂ ಮುಖಾಮುಖಿಯಾಗುತ್ತಿದ್ದಾರೆ. ಆದರೆ ಪಕ್ಷಗಳು ಮಾತ್ರ ಅದಲು ಬದಲು ಆಗಿರುವುದರಿಂದ ಕಾರ್ಯಕರ್ತರು ಸಹ ಪಕ್ಷಗಳನ್ನು ಬದಲಿಸಿದ್ದಾರೆ.

ನವೆಂಬರ್ 7ರಂದು ಬೆಂಗಳೂರಲ್ಲಿ ಅನೌಪಚಾರಿಕವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಆರ್.ಬಸನಗೌಡ ತುರುವಿಹಾಳ ನವೆಂಬರ್ 23ರಂದು ಸುಮಾರು ಐದು ಸಾವಿರ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಪ್ರತಾಪ್ ಗೌಡರನ್ನು ಸೋಲಿಸಲು ಕಾಂಗ್ರೆಸ್‍ಗೆ ಬಂದಿರುವುದಾಗಿ ಹೇಳಿರುವ ಬಸನಗೌಡ ಬಿಜೆಪಿಯಲ್ಲಿ ನಮ್ಮ ಕಾರ್ಯಕರ್ತರಿಗೆ ಬೆಲೆಯಿಲ್ಲದ ಕಾರಣ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ ಅಂತ ತಿಳಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕಾಲಿಗೆ ನಮಸ್ಕರಿಸಿ, ಸಮಾವೇಶದಲ್ಲಿ ನೆರೆದಿದ್ದ ಸಾವಿರಾರು ಜನರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

by election 6

ಸಮಾವೇಶದಲ್ಲಿ ಸುಮಾರು 20 ಸಾವಿರ ಜನರನ್ನು ಸೇರಿಸುವ ಮೂಲಕ ಬಲಪ್ರದರ್ಶನವನ್ನೂ ಕಾಂಗ್ರೆಸ್ ಮಾಡಿದೆ. ಸಮಾವೇಶದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ಪ್ರತಾಪಗೌಡ ಪಾಟೀಲ್ ಕಾಂಗ್ರೆಸ್ ಪಕ್ಷ ಹಾಗೂ ಮತದಾರರಿಗೆ ಮೋಸ ಮಾಡಿದ್ದಾರೆ. ಪ್ರತಾಪ್ ಗೌಡರನ್ನು ಗೆಲ್ಲುವ ಕುದುರೆ ಅಂತ ಪಕ್ಷಕ್ಕೆ ಸೇರಿಸಿಕೊಂಡೆವು ಆದರೆ ಪ್ರತಾಪ್ ಗೌಡ ಚೆಂಗೂಲಿ ಕುದುರೆ ಅಂತ ಜರಿದಿದ್ದಾರೆ. ಯಾವ ಪಕ್ಷ ಎಂಎಲ್‍ಎ ಮಾಡಿತ್ತೋ ಅದೇ ಪಕ್ಷಕ್ಕೆ ಚೂರಿ ಹಾಕಿ ಬಿಜೆಪಿಗೆ ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನ ಕೊಟ್ಟಿಲ್ಲ ಅದಕ್ಕೆ ಹೋಗುತ್ತೇನೆ ಅಂತ ಬಿಜೆಪಿ ಹೋಗಿದ್ದಾರೆ. ಕೇಳಿದಾಗೆಲ್ಲ ಅನುದಾನ ಕೊಟ್ಟಿದ್ದರು ದ್ರೋಹ ಮಾಡಿದ್ದಾರೆ. ಅವರಿಗೆ ಜನ ಪಾಠ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

by election 2

ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಪ್ರತಾಪ್ ಗೌಡ ಅಭಿವೃದ್ಧಿ ವಿಚಾರದಲ್ಲಿ ಇಚ್ಚಾಶಕ್ತಿಯಿಲ್ಲದ ವ್ಯಕ್ತಿ, 5 ಎ ಕಾಲುವೆ ಬಗ್ಗೆ ಕೇಳಿದಾಗಲೆಲ್ಲಾ ಸುಮ್ಮನಾಗುತ್ತಿದ್ದರು. ಈಗ ಕಾಲುವೆ ಬಗ್ಗೆ ಮಾತನಾಡುತ್ತಿದ್ದಾರೆ. ನಮ್ಮ ಅವಧಿಯಲ್ಲೇ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳು ಜಾರಿಗೆ ಬಂದಿವೆ. ನಂದವಾಡಗಿ ಯೋಜನೆ ಕಾಂಗ್ರೆಸ್ ಕೊಡುಗೆ. ಮುಂದೆ ನಮ್ಮ ಸರ್ಕಾರವೇ ಬರುತ್ತೆ ಬಸನಗೌಡ ತುರವಿಹಾಳ ಶಾಸಕರಾಗಿ ಇರುತ್ತಾರೆ. 5 ಎ ಕಾಲುವೆ ಯೋಜನೆ ಜಾರಿಯಾಗುತ್ತೆ ಎಂದು ತಮ್ಮ ಭಾಷಣದಲ್ಲಿ ಜಲಾಸ್ತ್ರ ಪ್ರಯೋಗಿಸಿ ಮತದಾರರನ್ನ ಸೆಳೆಯುವ ಪ್ರಯತ್ನ ಮಾಡಿದರು.

by election 5

ಬಿಜೆಪಿ ಸಹ ಕ್ಷೇತ್ರದಲ್ಲಿ ನಿರಂತರವಾಗಿ ಮೆರವಣಿಗೆ, ಸಮಾವೇಶಗಳ ಮೂಲಕ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿದೆ. ಪ್ರತಾಪ್ ಗೌಡ ಪಾಟೀಲ್ ಚುನಾವಣೆಯಲ್ಲಿ ಗೆದ್ದರೆ ಕೇವಲ ಶಾಸಕರಲ್ಲ ಸಚಿವರಾಗುತ್ತಾರೆ ಅಂತಲೇ ಕ್ಷೇತ್ರದ ಉಸ್ತುವಾರಿ ಹೊತ್ತಿರುವ ವಸತಿ ಸಚಿವ ವಿ.ಸೋಮಣ್ಣ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಪ್ರಚಾರ ನಡೆಸಿದ್ದಾರೆ.

by election 3

ಇತ್ತೀಚಿಗೆ ಸಿಂಧನೂರಿನಲ್ಲಿ ಆಯೋಜಿದ್ದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಮುಖಂಡರ ದಂಡೆ ಭಾಗವಹಿಸಿತ್ತು. ಮಸ್ಕಿ ಉಪಚುನಾವಣೆಗೆ ಪಕ್ಷ ಬಲಪಡಿಸಲು ರಾಜ್ಯಾಧ್ಯಕ್ಷರ ನಳಿನ್‍ಕುಮಾರ್ ಕಟೀಲ್, ಉಪಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು. ಕ್ಷೇತ್ರದ ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ ಪ್ರತಾಪ್ ಗೌಡ ಪಾಟೀಲ್‍ರನ್ನು ಸಚಿವರನ್ನಾಗಿ ಮಾಡುವ ಭರವಸೆ ನೀಡುತ್ತಾ ಮತದಾರರನ್ನು ಸೆಳೆಯಲು ಬಿಜೆಪಿ ಮುಖಂಡರು ಮುಂದಾಗಿದ್ದಾರೆ.

by election 4

ಕಳೆದ ಬಾರಿ ಕೇವಲ 213 ಮತಗಳ ಕಡಿಮೆ ಅಂತರದಲ್ಲಿ ಸೋತಿರುವ ಬಸನಗೌಡ ತುರವಿಹಾಳಗೆ ಅನುಕಂಪದ ಅಲೆಯಿದ್ದರೆ. ಮೂರು ಬಾರಿ ಶಾಸಕರಾಗಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪಚುನಾವಣೆಗೆ ಕಾರಣರಾಗಿರುವ ಪ್ರತಾಪ್ ಗೌಡ ಪಾಟೀಲ್ ವಿರೋಧ ಅಲೆಯೂ ಜೋರಾಗಿದೆ. ಆದರೆ ಈ ಇಬ್ಬರ ಪಕ್ಷಗಳೂ ಸಹ ಈಗ ಬದಲಾಗಿರುವುದರಿಂದ ಜನ ಯಾರ ಮೇಲೆ ಒಲವು ತೋರುತ್ತಾರೋ ಗೊತ್ತಿಲ್ಲ.

TAGGED:bjpby electioncongressMaskiPublic TVraichuruಉಪಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮಸ್ಕಿರಾಯಚೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
5 minutes ago
Male Mahadeshwara Temple DK Shivakumar Wife
Chamarajanagar

ಮಹಾಶಿವರಾತ್ರಿ – ಮಾದಪ್ಪನ ದರ್ಶನ ಪಡೆದ ಡಿಕೆಶಿ ಪತ್ನಿ

Public TV
By Public TV
7 minutes ago
Shiva and Nandi idols vandalized on Maha Shivaratri In Mundaragi
Districts

ಮುಂಡರಗಿ| ಮಹಾ ಶಿವರಾತ್ರಿ ದಿನವೇ ಶಿವ, ನಂದಿ ವಿಗ್ರಹ ಭಗ್ನ

Public TV
By Public TV
13 minutes ago
G Parameshwar
Districts

ನ್ಯಾಯ ಒದಗಿಸೋದ್ರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 – ಪರಮೇಶ್ವರ್‌ ಮೆಚ್ಚುಗೆ

Public TV
By Public TV
42 minutes ago
Priyank Kharge
Bengaluru City

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ

Public TV
By Public TV
49 minutes ago
asim munir id card
Latest

ಐಡಿ ಕಾರ್ಡ್‌ ತೋರಿಸಿ – ಜರ್ಮನಿಯಲ್ಲಿ ಅಸಿಮ್‌ ಮುನೀರ್‌ಗೆ ಮುಜುಗರ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?