ಚಿಕ್ಕಬಳ್ಳಾಪುರ: ದಕ್ಷಿಣ ಕಾಶಿ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇವಾಲಯದ ಅರ್ಚಕರಿಗೆ ಕೊರೊನಾ ಸೋಂಕು ದೃಢವಾಗಿದ್ದು, ದೇವಾಲಯವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ.
ದೇವಾಲಯದಲ್ಲಿನ ಇಬ್ಬರು ಅರ್ಚಕರಿಗೆ ಕೊರೊನಾ ಸೋಂಕು ದೃಢವಾಗಿದ್ದು, ದೇವಾಲಯವನ್ನು ಇಂದಿನಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅರ್ಚಕರಿಗೆ ಕೊರೊನಾ ಸೋಂಕು ಹಿನ್ನೆಲೆ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ದೇವಾಲಯದ ಪ್ರಮಖ ಗೇಟ್ನ್ನು ಸಂಪೂರ್ಣ ಮುಚ್ಚಿ ಟೇಪ್ ಮಾಡಲಾಗಿದೆ. ಇಂದು ಸಹ ಜಿಲ್ಲೆಯಲ್ಲಿ 102 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,526 ಕ್ಕೆ ಏರಿಕೆಯಾಗಿದೆ. ಇದುವರೆಗೂ 3624 ಮಂದಿ ಗುಣಮುಖರಾಗಿದ್ದು, ಸದ್ಯ 836 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೊರೊನಾದಿಂದ ಇದುವರೆಗೂ 65 ಮಂದಿ ಸಾವನ್ನಪ್ಪಿದ್ದಾರೆ.