– ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ
ಬೆಂಗಳೂರು: ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ನಲ್ಲಿ ಈದ್ಗಾ ಮೈದಾನ ಕಾಂಪೌಂಡ್ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ, ಈ ಕಾಂಪೌಂಡ್ ಅನ್ನು ಆರು ತಿಂಗಳಿನಲ್ಲಿ ಕಟ್ಟಿಕೊಡುತ್ತೇನೆ. ಎಲ್ಲ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದರೆ ಅಲ್ಲಿ ದೆವ್ವ-ಸೈತಾನ್ಗಳು ಇದ್ದೇ ಇರುತ್ತವೆ ಎಂದು ತಿಳಿಸಿದ್ದಾರೆ.
- Advertisement 2
- Advertisement 3
ಇದೇ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಹಾಡಿಹೊಗಳಿದ ಸೋಮಣ್ಣ, ಈ ಕಾರ್ಯಕ್ರಮಕ್ಕೆ ನಾನು ಜಮೀರ್ ನನ್ನು ಕರೆದುಕೊಂಡು ಬರಬೇಕು ಎಂದುಕೊಂಡಿದ್ದೆ. ಆದರೆ ಅವನು ಬರಲಿಲ್ಲ. ಅವನು ನನ್ನ ಆತ್ಮೀಯ, ಅವನು ದಡ್ಡ ಅಲ್ಲ, ಕಿಲಾಡಿ ಎಂದು ಹಾಡಿ ಹೊಗಳಿದರು. ಜಮೀರ್ ಕೇವಲ ಮುಸಲ್ಮಾರ ಎಂಎಲ್ಎ ಅಲ್ಲ, ಎಲ್ಲಾ ವರ್ಗದವರ ಎಂಎಲ್ಎ ಎಂದು ಹೇಳಿದರು.
- Advertisement 4
ನನಗೆ ಜಮೀರ್ ಸಿಗಲಿಲ್ಲ. ಅವನನ್ನು ಹಿಡಿದುಕೊಂಡು ಬರೋಣ ಅಂದುಕೊಂಡೆ. ಇಲ್ಲಿ ಬಂದು ನಮ್ಮ ಕೆಲಸದ ಬಗ್ಗೆ ಮಾತಾಡು, ಏನೇನೋ ಹೇಳಿಬಿಟ್ಟು ಬೆಂಕಿ ಇಟ್ಟು ಓಡಿ ಹೋಗಬೇಡ ಎಂದು ಅವನಿಗೆ ಹೇಳೋಣ ಅಂದುಕೊಂಡಿದ್ದೆ ಎಂದು ಸೋಮಣ್ಣ ಹಾಸ್ಯ ಚಟಾಕಿ ಹಾಕಿದರು.