Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವಳು ಇನ್ನು ರಿಟರ್ನ್ ಬರಲ್ಲ – ಗಳಗಳನೇ ಕಣ್ಣೀರಿಟ್ಟ ಅರವಿಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅವಳು ಇನ್ನು ರಿಟರ್ನ್ ಬರಲ್ಲ – ಗಳಗಳನೇ ಕಣ್ಣೀರಿಟ್ಟ ಅರವಿಂದ್

Cinema

ಅವಳು ಇನ್ನು ರಿಟರ್ನ್ ಬರಲ್ಲ – ಗಳಗಳನೇ ಕಣ್ಣೀರಿಟ್ಟ ಅರವಿಂದ್

Public TV
Last updated: May 6, 2021 10:54 am
Public TV
Share
2 Min Read
divya aravind main
SHARE

ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಜೊತೆ ಚೆನ್ನಾಗಿ ಮಾತನಾಡುತ್ತಾ, ಪ್ರತಿ ದಿನ ಲವಲವಿಕೆಯಿಂದ ಇರುತ್ತಿದ್ದ ದಿವ್ಯಾ ಉರುಡುಗ ಈಗ ಮನೆಯನ್ನು ತೊರೆದಿದ್ದು ವಿಷಯ ಕೇಳಿ ಅರವಿಂದ್ ಗಳಗಳನೇ ಅತ್ತಿದ್ದಾರೆ.

67ನೇ ದಿನ ದಿವ್ಯಾ ಉರುಡುಗ ಬಟ್ಟೆಗಳನ್ನು ತಂದು ಸ್ಟೋರ್ ರೂಮಿಗೆ ಇರಿಸಿ ಈ ಕೂಡಲೇ ಎಂದು ಬಿಗ್ ಬಾಸ್ ಆದೇಶಿಸುತ್ತಾರೆ. ಕ್ಯಾಪ್ಟನ್ ಚಕ್ರವರ್ತಿ ಚಂದ್ರಚೂಡ್ ಆದೇಶವನ್ನು ಓದುತ್ತಿದ್ದಂತೆ ಗದ್ಗದಿತರಾದರು.

divya aravind

ಈ ಆದೇಶವನ್ನು ಕೇಳಿದ ಅರವಿಂದ್,”ಹೋದ್ರೆ ಅವಳು ಇನ್ನೂ ಬರಲ್ಲ ರಿಟರ್ನ್” ಎಂದು ಹೇಳಿ ಕಣ್ಣೀರು ಹಾಕಿದರು.”ದಿನ ಬೆಳಗ್ಗೆ ಎದ್ದು ರಾತ್ರಿ ತನಕ ನನ್ನ ಜೊತೆ ಅವಳು ಇರುತ್ತಿದ್ದಳು. ನಿಮ್ ಜೊತೆ ಗಲಾಟೆಯಾದ್ರೂ ಖುಷಿಯಾದ್ರೂ ನನ್ ಜೊತೇನೆ ಇರ್ತಿದ್ದಳು. ಎಲ್ಲ ಹೋಯ್ತು” ಎಂದು ಹೇಳಿ ಭಾವುಕರಾದರು.

ಪ್ರಶಾಂತ್ ಸಂಬರಗಿ ನಿನ್ನೆಯಿಂದ ಅರವಿಂದ್ ಡಲ್ ಆಗಿದ್ದಾನೆ ಎಂದರೆ ಮಂಜು ಅರವಿಂದನನ್ನು ನೋಡಲು ನನ್ನಿಂದ ಆಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Divya Manju Arvind 2

ದಿವ್ಯಾ ಉರುಡುಗ ಮತ್ತೆ ಬಿಗ್ ಬಾಸ್ ಮನೆಗೆ ಬರುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ. ಎಲ್ಲ ಬಟ್ಟೆಗಳನ್ನು ಪ್ಯಾಕ್ ಮಾಡಿ ಕಳುಹಿಸಲಾಗಿದೆ. ಒಂದು ಬಾರಿ ಮನೆಯಿಂದ ಹೊರಗಡೆ ಹೋದರೆ ಮತ್ತೆ ಬಿಗ್ ಬಾಸ್ ಮನೆಗೆ ಪ್ರವೇಶ ಇಲ್ಲ. ಅಷ್ಟೇ ಅಲ್ಲದೇ ಈಗ ಕೋವಿಡ್ ಇರುವ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಮತ್ತೆ ಕ್ವಾರಂಟೈನ್ ಆಗಬೇಕಾಗುತ್ತದೆ. ಕೊನೆಯ ಮೂರು ವಾರಗಳ ಕಾಲ ಇರುವ ಕಾರಣ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಮತ್ತೆ ದಿವ್ಯಾ ಬರುವುದಿಲ್ಲ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

divya 10

ಜೋಡಿ ಟಾಸ್ಕ್ ನಿಂದ ಅರವಿಂದ್ ಮತ್ತು ದಿವ್ಯಾ ಬಾಂಡ್ ಗಟ್ಟಿಯಾಗಿತ್ತು. ಇಬ್ಬರ ಚಿಂತನೆಗಗಳು ಮ್ಯಾಚ್ ಆಗಿದ್ದ ಕಾರಣ ಕೆಮಿಸ್ಟ್ರಿ ವರ್ಕ್ ಆಗಿ ವೀಕ್ಷಕರ ಗಮನ ಸೆಳೆದಿತ್ತು. ಮನೆಯ ಸದಸ್ಯರ ಜೊತೆ ಸುದೀಪ್ ಸಹ ಇಬ್ಬರನ್ನು ಕಾಲೆಳೆಯುತ್ತಿದ್ದರು. ನೀವಿಬ್ಬರು ಲವ್ ಮಾಡ್ತಿದ್ದೀರಾ ಎಂಬ ಮನೆಯವರ ಪ್ರಶ್ನೆಗೆ, ಇಬ್ಬರೂ ನಾವಿಬ್ಬರು ಉತ್ತಮ ಫ್ರೆಂಡ್ಸ್, ಇನ್ನೂ ಆ ಹಂತಕ್ಕೆ ಹೋಗಿಲ್ಲ ಎಂದು ಉತ್ತರ ನೀಡಿದ್ದರೂ ಜೋಡಿಗಳ ರೀತಿ ಮನೆಯಲ್ಲಿ ಇರುತ್ತಿದ್ದರು. ಅಷ್ಟೇ ಅಲ್ಲದೇ ದಿವ್ಯಾ ತನ್ನ ತಂದೆ ನೀಡಿದ್ದ ಡೈಮಂಡ್ ಉಂಗುರವನ್ನು ಅರವಿಂದ್‍ಗೆ ನೀಡಿ ಕೊನೆಯವರೆಗೂ ನನ್ನ ಜೊತೆ ಇರಬೇಕು ಎಂದು ತನ್ನ ಮನಸ್ಸಿನ ಮಾತನ್ನು ಹೇಳಿದ್ದರು.

ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದಿವ್ಯಾ ಈಗ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರೂ ಮನೆಯಲ್ಲಿದ್ದಾಗ ಅರವಿಂದ್ ಬಹಳಷ್ಟು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ತನ್ನ ಪಾಲಿನ ಆಹಾರವನ್ನು ನೀಡಿದ್ದು ಅಲ್ಲದೇ ದಿವ್ಯಾ ಅವರ ಬಟ್ಟೆಯನ್ನು ಒಗೆದು ಕೊಡುವ ಮೂಲಕ ಪ್ರೀತಿ ತೋರಿಸಿದ್ದರು. ಹಳೆಯ ಸುಮಧರ ಕ್ಷಣಗಳನ್ನು ನೆನೆದು ಅರವಿಂದ್ ಈಗ ಕಣ್ಣೀರು ಹಾಕಿದ್ದು 67ನೇ ದಿನದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಈ ದೃಶ್ಯಗಳು ಪ್ರಸಾರವಾಗಲಿದೆ.

Divya Arvind 2 1

ದಿವ್ಯಾಗೆ ಆಗಿದ್ದು ಏನು?
66ನೇ ದಿನ ಲಿವಿಂಗ್ ಏರಿಯಾದಲ್ಲಿ ಸದಸ್ಯರು ಕುಳಿತ್ತಿದ್ದಾಗ, ದಿವ್ಯಾ ಅವರಿಗೆ ಸ್ಕ್ಯಾನಿಂಗ್ ಮಾಡಿಸಬೇಕೆಂದು ವೈದ್ಯರು ಸೂಚಿಸಿದ್ದರಿಂದ ಅವರನ್ನು ತಪಾಸಣೆಗೆ ಕರೆದೊಯ್ಯಲಾಗಿದೆ. ಅವರು ಕ್ಷೇಮವಾಗಿದ್ದಾರೆ ಎಂದು ಆರಂಭದಲ್ಲಿ ಬಿಗ್ ಬಾಸ್ ಮನೆ ಮಂದಿಗೆ ತಿಳಿಸುತ್ತಾರೆ. ಇದನ್ನು ಹೇಳುತ್ತಿದ್ದಂತೆ ಅರವಿಂದ್ ಸ್ವಲ್ಪ ಭಾವುಕರಾಗಿದ್ದರು. ಬಳಿಕ ಬಿಗ್ ಬಾಸ್ ವಾಯ್ಸ್ ಕೇಳಿಸಿದ್ದು, ಸ್ಕ್ಯಾನಿಂಗ್ ಬಳಿಕ ಯೂರಿನರಿ  ಇನ್‍ಫೆಕ್ಷನ್ ಕಂಡು ಬಂದಿರುವುದರಿಂದ ದಿವ್ಯಾ ಉರುಡುಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳುತ್ತಾರೆ. ಆಗ ಅರವಿಂದ್ ಭಾವುಕರಾಗಿಯೇ ಯಾ ಯಾ ಎಂದು ಹೇಳುತ್ತಾರೆ. ಅಲ್ಲದೆ ಇಲ್ಲಿಗಿಂತ ಅಲ್ಲಿ ಚೆನ್ನಾಗಿರುತ್ತಾಳೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

TAGGED:Bigg bossBigg boss-8Divya Urudugakannada newsಅರವಿಂದ್ ಕೆಪಿಕನ್ನಡದಿವ್ಯಾ ಉರುಡುಗಬಿಗ್ ಬಾಸ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
22 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
33 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
53 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?