ಆಂಜನೇಯ ದೇಗುಲಕ್ಕೆ ಬೆಂಕಿ ಹಚ್ಚಿ ವಿಗ್ರಹ ಜಖಂ ಮಾಡಿದ ಕಿಡಿಗೇಡಿಗಳು!

Public TV
1 Min Read
NML copy

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿಶ್ವೇಶ್ವರಪುರ ಬಳಿ ಆಂಜನೇಯ ದೇಗುಲಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡ ರಾತ್ರಿ ನಡೆದಿದೆ.

NML 1

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಾಸ್ ಟೋಲ್ ಬಳಿ ಇರುವ ಸರ್ಕಲ್ ಆಂಜನೇಯ ದೇವಾಲಯಕ್ಕೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ ಕಿಡಿಗೇಡಿಗಳು ವಿಗ್ರಹವನ್ನು ಜಖಂ ಮಾಡಿ ಹೀನ ಕೃತ್ಯ ವೆಸಗಿದ್ದಾರೆ. ದೇವರ ವಿಗ್ರಹ ಹಾಗೂ ಸಂಪೂರ್ಣ ದೇವಾಲಯ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.

NML 2

ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯವನ್ನು ಖಂಡಿಸಿದ ಹಲವಾರು ಮುಖಂಡರು ಮತ್ತು ಸಂಘಟನೆಗಳು, ಈ ಘಟನೆಯನ್ನು ಪೊಲಿಸರು ಮತ್ತು ತಾಲೂಕು ಆಡಳಿತ ಗಂಭೀರವಾಗಿ ತೆಗೆದುಕೊಂಡು ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕು. ಕೋಮು ಸೌರ್ಹಾದತೆಯನ್ನು ಯಾರು ಕದಡಬಾರದು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *