ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಲೋಡ್ ಹುಲ್ಲಿನ ರಾಶಿ ಭಸ್ಮ

Public TV
1 Min Read
CKB FIRE 1

ಚಿಕ್ಕಬಳ್ಳಾಪುರ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ನಾಲ್ಕು ಲೋಡ್ ರಾಗಿ ಹುಲ್ಲಿನ ರಾಶಿ ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

CKB FIRE 2

ಗ್ರಾಮದ ಚೌಡಣ್ಣ ಎಂಬವರಿಗೆ ಸೇರಿದ ರಾಗಿ ಹುಲ್ಲಿನ ರಾಶಿಗೆ ಬೆಂಕಿ ತಗುಲಿದ್ದು, ಘಟನೆಯಲ್ಲಿ ಸಾವಿರಾರು ಮೌಲ್ಯದ ಹುಲ್ಲು ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆ ಪೂರ್ತಿ ಹುಲ್ಲು ಸುಟ್ಟು ಭಸ್ಮವಾಗಿರುವ ಕಾರಣ ರೈತ ಚೌಡಣ್ಣ ಅವರು ಸಾಕಿರುವ ಹಸುಗಳಿಗೆ ಬೇರೆ ಹುಲ್ಲನ್ನು ಖರೀದಿ ಮಾಡಬೇಕಾದ ಅನಿರ್ವಾರ್ಯತೆ ಎದುರಾಗಿದೆ.

CKB FIRE 3

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಕಿ ತಗುಲಲು ಕಾರಣ ಏನೆಂದು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ.

Share This Article
Leave a Comment

Leave a Reply

Your email address will not be published. Required fields are marked *