Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕ್ಟ್-1978: ಟ್ರೇಲರ್ ಮೂಲಕ ಕೌತುಕದ ಬಾಂಬಿಟ್ಟರು ಮಂಸೋರೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಆಕ್ಟ್-1978: ಟ್ರೇಲರ್ ಮೂಲಕ ಕೌತುಕದ ಬಾಂಬಿಟ್ಟರು ಮಂಸೋರೆ!

Cinema

ಆಕ್ಟ್-1978: ಟ್ರೇಲರ್ ಮೂಲಕ ಕೌತುಕದ ಬಾಂಬಿಟ್ಟರು ಮಂಸೋರೆ!

Public TV
Last updated: November 3, 2020 11:03 am
Public TV
Share
2 Min Read
ACT 1978
SHARE

– ಕೊರೊನಾ ಕಂಟಕವನ್ನೂ ಛಿದ್ರಗೊಳಿಸೋ ಲಕ್ಷಣ!

ಒಂದೊಳ್ಳೆ ಸಿನಿಮಾ ಎಂಟ್ರಿ ಕೊಟ್ರೆ ತಿಂಗಳಿಂದೀಚೆಗೆ ಕವುಚಿಕೊಂಡಿರೋ ಕೊರೊನಾ ಗ್ರಹಣ ತಂತಾನೇ ಕಳಚಿಕೊಳ್ಳುತ್ತೆ. ಇದು ಸಿನಿಮಾ ಪ್ರೇಮಿಗಳ ಒಕ್ಕೊರಲಿನ ಅಭಿಪ್ರಾಯ. ಅದರಲ್ಲಿಯೇ ಮತ್ತೆ ಸಿನಿಮಾ ಮಂದಿರಗಳು ಗಿಜಿಗುಡುತ್ತಾ ಕಳೆಗಟ್ಟಿಕೊಳ್ಳಲೆಂಬ ಹಾರೈಕೆಯೂ ಇದೆ. ಅದೆಷ್ಟೋ ಸಿನಿಮಾ ಪ್ರೇಮಿಗಳ ಈ ಮನದಿಂಗಿತವನ್ನು ನಿಜವಾಗಿಸುವಂಥಾ ಗಾಢ ಭರವಸೆ ಹೊತ್ತು ಆಕ್ಟ್-1978 ಚಿತ್ರದ ಟ್ರೇಲರ್ ಲಾಂಚ್ ಆಗಿದೆ.

ACT 1978 1

ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಅದಕ್ಕೆ ದಕ್ಕಿರೋ ವೀಕ್ಷಣೆ, ನಾನಾ ದಿಕ್ಕುಗಳಿಂದ ಹರಿದು ಬರುತ್ತಿರೋ ಸದಭಿಪ್ರಾಯಗಳೆಲ್ಲವೂ ಒಂದು ಮಹಾ ಗೆಲುವಿನ ಮುನ್ಸೂಚನೆಯಂತೆಯೂ, ಚಿತ್ರರಂಗದ ಪಾಲಿಗೆ ಸುಗ್ಗಿ ಸಂಭ್ರಮ ಪಡಿಮೂಡಿಕೊಳ್ಳುವ ಶುಭ ಸೂಚನೆಯಂತೆಯೂ ಕಾಣಿಸಲಾರಂಭಿಸಿದೆ.

ACT 1978 5 Mansore

ಇದು ಹರಿವು ಮತ್ತು ನಾತಿಚರಾಮಿಯಂಥ ಸದಭಿರುಚಿಯ ಸಿನಿಮಾಗಳನ್ನು ಕೊಡಮಾಡಿರುವ ಮಂಸೋರೆ ನಿರ್ದೇಶನದ ಚಿತ್ರ. ಈ ಹಿಂದೆ ಒಂದೇ ಒಂದು ಪೋಸ್ಟರ್ ಮೂಲಕ ಈ ಸಿನಿಮಾ ಸೃಷ್ಟಿಸಿದ್ದ ಕ್ರೇಜ್ ಎಂಥಾದ್ದೆಂಬುದನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಆ ದೆಸೆಯಿಂದಲೇ ಆಕ್ಟ್-1978  ಬಗ್ಗೆ ವಿಶೇಷವಾದ ಕುತೂಹಲ ಮೂಡಿಕೊಂಡಿತ್ತು. ಈಗ ಪುನೀತ್ ರಾಜ್ ಕುಮಾರ್ ಅವರ ಪಿಆರ್‍ಕೆ ಯೂಟ್ಯೂಬ್ ಚಾನೆಲ್ ಮೂಲಕ ಲಾಂಚ್ ಆಗಿರೋ ಟ್ರೇಲರ್ ಎಲ್ಲ ನಿರೀಕ್ಷೆಗಳನ್ನೂ ಮತ್ತಷ್ಟು ಉದ್ದೀಪಿಸುವಂತೆ ಮೂಡಿ ಬಂದಿದೆ. ನಿರ್ದೇಶಕ ಮಂಸೋರೆ ಈ ಬಾರಿ ಎಲ್ಲರ ಮನಸುಗಳಿಗೂ ಕೌತುಕದ ಬಾಂಬಿಟ್ಟು ಬಿಟ್ಟಿದ್ದಾರೆ.

ACT 1978 2

ಮಂಸೋರೆ ಭಿನ್ನ ಪಥದಲ್ಲಿಯೇ ಸದ್ದು ಮಾಡುತ್ತಾ, ಪ್ರತಿ ಹೆಜ್ಜೆಯಲ್ಲಿಯೂ ಹೊಸಾ ಸಾಧ್ಯತೆಗಳತ್ತ ಕೈ ಚಾಚುತ್ತಾ ಈ ನೆಲದ ಕಥೆಗಳಿಗೆ ದೃಶ್ಯ ರೂಪ ನೀಡೋ ಅಪರೂಪದ ನಿರ್ದೇಶಕ. ಅವರು ಈ ಬಾರಿ ಪಕ್ಕಾ ಥ್ರಿಲ್ಲರ್ ಕಥಾನಕದೊಂದಿಗೆ ಅಡಿಯಿರಿಸುತ್ತಿದ್ದಾರೆ. ಈ ವ್ಯವಸ್ಥೆಯ ವಿರುದ್ಧ ಸಿಡಿದೆದ್ದು ಒಂದು ಸರ್ಕಾರಿ ಕಚೇರಿಯನ್ನೇ ಹೈಜಾಕ್ ಮಾಡೋ ದೃಶ್ಯಾವಳಿಗಳೊಂದಿಗೆ ಈ ಟ್ರೇಲರ್ ಎಲ್ಲರನ್ನೂ ಸೆಳೆದುಕೊಂಡಿದೆ. ಮೈಗೆ ಬಾಂಬು ಕಟ್ಟಿಕೊಂಡಿರೋ ಬಸುರಿ ಹೆಂಗಸಿನ ರೆಬೆಲ್ ಪಾತ್ರದಲ್ಲಿ ಯಜ್ಞ ಶೆಟ್ಟಿ ಅಕ್ಷರಶಃ ಮಿಂಚಿದ್ದಾರೆ. ಮಿಕ್ಕುಳಿದ ಪಾತ್ರಗಳೂ ಕೂಡಾ ಅಷ್ಟೇ ಮಜವಾಗಿ ಮೂಡಿ ಬಂದಿರೋದರ ಸೂಚನೆಗಳೂ ಈ ಟ್ರೇಲರ್‌ನಲ್ಲಿ ಕಾಣಿಸಿವೆ.

ACT 1978 3

ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರೂ ಕೂಡಾ ಕುದಿತವೊಂದನ್ನು ಒಳಗಿಟ್ಟುಕೊಂಡಿರುತ್ತಾರೆ. ಆದರೆ, ಅದರ ವಿರುದ್ಧದ ಹೋರಾಟ, ಕ್ರಾಂತಿಗೆ ಮತ್ಯಾವುದೋ ಮಹಾ ಶಕ್ತಿಯೇ ಧರೆಗಿಳಿದು ಬರಬೇಕೆಂಬಂತೆ ಎಲ್ಲವನ್ನೂ ಅವುಡುಗಚ್ಚಿ ಸಹಿಸಿಕೊಂಡಿರುತ್ತಾರೆ. ಆದರೆ ಮನಸು ಮಾಡಿದರೆ ಸಾಮಾನ್ಯರ ಕುದಿತ, ಬೇಗುದಿಗಳೂ ಅಸಾಧಾರಣ ರೀತಿಯಲ್ಲಿ ಆಸ್ಫೋಟಗೊಳ್ಳಬಹುದೆಂಬ ಕಥಾ ಹೂರಣ ಈ ಟ್ರೇಲರ್‍ನಲ್ಲಿ ಧ್ವನಿಸಿದೆ. ಅಂತೂ ಪ್ರತಿ ಕ್ಷಣವೂ ಉಸಿರು ಬಿಗಿಹಿಡಿದು ಕಾಯುವಂಥಾ ಬಿಗುವಿನೊಂದಿಗೆ ಈ ಸಿನಿಮಾ ಮೂಡಿಬಂದಿದೆ ಅನ್ನೋ ನಂಬಿಕೆ ಪ್ರತಿಯೊಬ್ಬರಲ್ಲಿಯೂ ಮೂಡಿಕೊಂಡಿದೆ.

ACT 1978 4

ಈ ಹಿಂದಿನ ಸಿನಿಮಾಗಳನ್ನು ನೋಡಿದ ಬಹುತೇಕರು ನಿರ್ದೇಶಕ ಮಂಸೋರೆಯ ಅಗಾಧ ಪ್ರತಿಭೆಯನ್ನು ಮೆಚ್ಚಿಕೊಂಡಿದ್ದರು. ಅವರೀಗ ಪರಭಾಷಾ ಚಿತ್ರರಂಗಗಳ ಮಂದಿಯೇ ನಿಬ್ಬೆರಗಾಗೋ ಕಥಾ ವಸ್ತುವಿನೊಂದಿಗೆ ಕಮಾಲ್ ಮಾಡಲು ಮುಂದಾಗಿದ್ದಾರೆ. ಯಜ್ಞ ಶೆಟ್ಟಿಯನ್ನಂತೂ ಈ ಬಸುರಿ ಹೆಂಗಸಿನ ಪಾತ್ರ ಮತ್ತೊಂದು ಎತ್ತರಕ್ಕೇರಿಸೋದರಲ್ಲಿ, ಈ ಸಿನಿಮಾ ಮೂಲಕವೇ ಅವರ ವೃತ್ತಿ ಬದುಕಿನ ದಿಕ್ಕು ಬದಲಾಗೋದು ಗ್ಯಾರೆಂಟಿ ಅಂತ ನೋಡುಗರೇ ಭವಿಷ್ಯ ನುಡಿಯುತ್ತಿದ್ದಾರೆ. ಒಂದು ಟ್ರೇಲರ್ ಇಂಥಾ ಅಭಿಪ್ರಾಯಗಳನ್ನು ಹೊಮ್ಮಿಸುವಂತೆ ಮಾಡೋದು ಆರಂಭಿಕ ಗೆಲುವು. ಅದು ಆಕ್ಟ್-1978  ಚಿತ್ರಕ್ಕೆ ದಕ್ಕಿದೆ. ಮುಂದೆ ಮಹಾ ಗೆಲುವೊಂದು ಬಾಚಿ ತಬ್ಬಿಕೊಳ್ಳಲು ಕಾದು ನಿಂತಿರುವಂತಿದೆ!

TAGGED:Act 1978kannada cinemaMansorePRKThriller MovieYajna Shettyಆಕ್ಟ್ 1978ಕನ್ನಡ ಸಿನಿಮಾಥ್ರಿಲ್ಲರ್ ಸಿನಿಮಾನಾತಿಚರಾಮಿಪಬ್ಲಿಕ್ ಟಿವಿಪಿಆರ್‍ಕೆಮಂಸೋರೆಯಜ್ಞ ಶೆಟ್ಟಿಹರಿವು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
11 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
29 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
30 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
47 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
47 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?