Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಗಸ್ಟ್ 16 ರಿಂದ ಕೇಂದ್ರ ಸಚಿವರ ಆಶೀರ್ವಾದ ಯಾತ್ರೆ: ಕೆ.ಲಕ್ಷ್ಮಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಗಸ್ಟ್ 16 ರಿಂದ ಕೇಂದ್ರ ಸಚಿವರ ಆಶೀರ್ವಾದ ಯಾತ್ರೆ: ಕೆ.ಲಕ್ಷ್ಮಣ್

Bengaluru City

ಆಗಸ್ಟ್ 16 ರಿಂದ ಕೇಂದ್ರ ಸಚಿವರ ಆಶೀರ್ವಾದ ಯಾತ್ರೆ: ಕೆ.ಲಕ್ಷ್ಮಣ್

Public TV
Last updated: August 8, 2021 8:23 pm
Public TV
Share
3 Min Read
NARENDRA BABU 1
SHARE

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಸಚಿವರು ತಮ್ಮ ರಾಜ್ಯಗಳಿಗೆ ತೆರಳಿ ಜನರ ಆಶೀರ್ವಾದ ಪಡೆಯುವಂತೆ ಬಿಜೆಪಿ ಸೂಚಿಸಿದೆ. ಅದರನ್ವಯ ಆಗಸ್ಟ್ 16ರಿಂದ 19ರ ನಡುವಿನ ಅವಧಿಯಲ್ಲಿ ಸಚಿವರು ಆಶೀರ್ವಾದ ಯಾತ್ರೆ ನಡೆಸಲಿದ್ದಾರೆ.

ರಾಜ್ಯದಲ್ಲಿನ ನೂತನ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ ಮತ್ತು ರಾಜೀವ್ ಚಂದ್ರಶೇಖರ್ ಅವರು ಈ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಅಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರೂ ಆದ ಕೆ.ಲಕ್ಷ್ಮಣ್ ಅವರು ತಿಳಿಸಿದರು.

ನಂದಿ ಹಿಲ್ಸ್ ನಲ್ಲಿ ವೃಕ್ಷಾರೋಹಣ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಇಂದು ದೇವನಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬಿಸಿ ಮೋರ್ಚಾದ ರಾಜ್ಯ ಘಟಕಕ್ಕೆ 60 ಸಾವಿರ ಸಸಿ ನೆಡುವ ಗುರಿ ನೀಡಿದ್ದು, ಒಂದು ಲಕ್ಷಕ್ಕೂ ಹೆಚ್ಚು ಸಸಿ ನೆಟ್ಟು ಅದು ಜಾಗತಿಕ ತಾಪಮಾನ ನಿಯಂತ್ರಣದ ನಿಟ್ಟಿನಲ್ಲಿ ಮಹತ್ವದ ಕಾರ್ಯ ಮಾಡಿದೆ. ಇದಕ್ಕಾಗಿ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷರಾದ ನೆ.ಲ.ನರೇಂದ್ರಬಾಬು ಮತ್ತು ಅವರ ತಂಡವನ್ನು ಅಭಿನಂದಿಸುವುದಾಗಿ ತಿಳಿಸಿದರು.

NARENDRA BABU

ದೇಶದ ಒಟ್ಟು ಜನಸಂಖ್ಯೆಯ ಶೇ.50ಕ್ಕೂ ಹೆಚ್ಚು ಜನರು ಒಬಿಸಿ ಸಮುದಾಯಕ್ಕೆ ಸೇರಿದ್ದಾರೆ. ಮೊದಲ ಬಾರಿಗೆ ಒಬಿಸಿ ಸಮುದಾಯದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲು ಬಿಜೆಪಿ ಕಾರಣವಾಗಿದೆ. ಇದು ಕೇವಲ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು.

ದೇಶವನ್ನು ಸುಮಾರು 60 ವರ್ಷಗಳ ಕಾಲ ಆಳಿದ ಕಾಂಗ್ರೆಸ್ ಪಕ್ಷವು ಕೇವಲ ನೆಹರೂ ವಂಶದ ಆಡಳಿತಕ್ಕೆ ತನ್ನನ್ನು ಸೀಮಿತಗೊಳಿಸಿತ್ತು. ಒಬಿಸಿ ಸಮುದಾಯವನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪಕ್ಷ ಬಳಸಿಕೊಂಡಿತ್ತು. ಬಿಜೆಪಿ ಸರಕಾರದಲ್ಲಿ ಒಬಿಸಿ ಸಮುದಾಯಕ್ಕೆ ಗರಿಷ್ಠ ಆದ್ಯತೆ ಕೊಡಲಾಗಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು. ಸಂಸತ್ತಿನಲ್ಲಿ ಒಬಿಸಿ, ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಮಸೂದೆಗಳನ್ನು ಮಂಡಿಸದಂತೆ ಕಾಂಗ್ರೆಸ್ ಪಕ್ಷ ಅಡ್ಡಿಪಡಿಸಿದೆ ಎಂದು ಅವರು ಆಕ್ಷೇಪಿಸಿದರು.

narendra modi pmo medium

ಒಬಿಸಿ ಸಮುದಾಯದ ಬಗ್ಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೀಸಲಾತಿ, ಒಬಿಸಿ ಸಮುದಾಯದ ಎಲ್ಲರಿಗೂ ಮೀಸಲಾತಿಯ ಲಾಭ ಸಿಗುವ ದೃಷ್ಟಿಯಿಂದ ಆಯೋಗವನ್ನೂ ರಚಿಸಿದ್ದಾರೆ. ಇದು ಶ್ಲಾಘನೀಯ ಎಂದು ತಿಳಿಸಿದರು. ಇದನ್ನೂ ಓದಿ : ದೇಶದ ಕೆಟ್ಟ ಕನಸುಗಾರ ಸಿದ್ದರಾಮಯ್ಯ: ಈಶ್ವರಪ್ಪ

ಮೀನುಗಾರಿಕೆಗೆ ಸಂಬಂಧಿಸಿ ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ಬಜೆಟ್ ಹೊಂದಿರುವುದು ಕೂಡ ಮೆಚ್ಚತಕ್ಕ ವಿಚಾರ ಎಂದು ತಿಳಿಸಿದರು. ಮೀನುಗಾರರ ಬೋಟ್ ಗಳಿಗೆ ವಿಶೇಷ ಸಹಾಯಧನ ನೀಡಿದ್ದು, ಮೀನುಗಾರರ ಮಕ್ಕಳಿಗೆ ಸ್ಕಾಲರ್‍ಶಿಪ್ ಕೊಡಲಾಗುತ್ತಿದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದಲ್ಲಿ ಶೇ.35 ಸಚಿವ ಸ್ಥಾನಗಳನ್ನು ಒಬಿಸಿ ಸಮುದಾಯಕ್ಕೆ ನೀಡಿದ್ದು, ಇದರಿಂದ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿದೆ. ನರೇಂದ್ರ ಮೋದಿ ಅವರು ಕುಟುಂಬದ ಕುರಿತು ಚಿಂತಿಸುವ ವ್ಯಕ್ತಿಯಲ್ಲ. ವಿವಿಧ ಸಮುದಾಯಗಳ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ (ಇಡಬ್ಲ್ಯುಎಸ್) ಶೇ.10 ಮೀಸಲಾತಿಯನ್ನೂ ಅವರು ನೀಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ, ಜೆಡಿಎಸ್ ಮತ್ತು ಇತರ ವಿರೋಧ ಪಕ್ಷಗಳು ವಂಶಾಡಳಿತಕ್ಕೆ ಆದ್ಯತೆ ಕೊಡುತ್ತಿವೆ ಎಂದು ತಿಳಿಸಿದರು.

shobha karandlaje medium

ಕೇಂದ್ರ ಸರಕಾರದ ಕ್ರಮಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಒಬಿಸಿ ಸಮುದಾಯಕ್ಕೆ 4 ಸಾವಿರ ಮತ್ತು ಇಡಬ್ಲ್ಯುಎಸ್ ವಿದ್ಯಾರ್ಥಿಗಳಿಗೆ 1,500 ಸೀಟುಗಳು ಲಭಿಸಲಿವೆ. ಕಾಲೇಜುಗಳ ಸಂಖ್ಯೆ ಹೆಚ್ಚಾದರೆ ಸೀಟುಗಳ ಸಂಖ್ಯೆಯೂ ಹೆಚ್ಚಾಗಲಿದೆ. ಈ ಎಲ್ಲ ಕ್ರಾಂತಿಕಾರಿ ಕ್ರಮಗಳು ಕೇವಲ ಏಳು ವರ್ಷಗಳಲ್ಲಿ ಆಗಿವೆ. ಹಿಂದೆ ಕಾಂಗ್ರೆಸ್ ಪಕ್ಷವು ಒಬಿಸಿ ಸಮುದಾಯವನ್ನು ಮತ ಬ್ಯಾಂಕ್ ಆಗಿ ನೋಡುತ್ತಿತ್ತು. ಅವರನ್ನು ಮನುಷ್ಯರೆಂದೇ ಪರಿಗಣಿಸಲು ಸಿದ್ಧ ಇರಲಿಲ್ಲ ಎಂದು ಅವರು ವಿವರಿಸಿದರು.

ಎಸ್‍ಸಿ, ಎಸ್‍ಟಿ ಒಬಿಸಿ, ಮಹಿಳೆಯರು ಮತ್ತು ಶೋಷಿತರ ಸಶಕ್ತೀಕರಣಕ್ಕೆ ನರೇಂದ್ರ ಮೋದಿ ಅವರು ತಮ್ಮ ಅಧಿಕಾರದ ಮೊದಲ ದಿನದಿಂದಲೇ ಶ್ರಮಿಸುತ್ತ ಬಂದಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಕೇಂದ್ರ ಸರಕಾರದ ಸಚಿವ ಸಂಪುಟದ ಪುನಾರಚನೆ ವೇಳೆ ಎಸ್‍ಸಿ ಸಮುದಾಯದ 12, ಎಸ್‍ಟಿ 8, ಒಬಿಸಿ 27, ಮಹಿಳೆಯರು 11 ಹಾಗೂ ಅಲ್ಪಸಂಖ್ಯಾತ ಸಮುದಾಯದ 5 ಜನರಿಗೆ ಸೇರಿದಂತೆ ಒಟ್ಟು ಶೇ.70 ಪ್ರಾತಿನಿಧ್ಯತೆಯನ್ನು ದುರ್ಬಲ ವರ್ಗಕ್ಕೆ ನೀಡಿದ್ದಾರೆ. ಇದು ಶ್ಲಾಘನೀಯ. ಇದರಿಂದ ಒಬಿಸಿ ಸಮುದಾಯವು ಬಿಜೆಪಿಯತ್ತ ಆಕರ್ಷಿತವಾಗುತ್ತಿದ್ದು, ಭವಿಷ್ಯದಲ್ಲಿ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

rajeev chandrasekhar shobha karandlaje Bhagwanth Khuba narayana swamy medium

ಸಂಘಟನೆಯನ್ನು ಬಲಪಡಿಸಲು ಒಬಿಸಿ ವತಿಯಿಂದ ಮೀನುಗಾರರ ಸಮ್ಮೇಳನ, ನೇಕಾರರ ಸಮ್ಮೇಳನ ಸೇರಿದಂತೆ ವಿವಿಧ ಸಮ್ಮೇಳನಗಳ ಮೂಲಕ ಶ್ರೀ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳ ಬಗ್ಗೆ, ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುತ್ತಿರುವುದರ ಕುರಿತು ಹಾಗೂ ನೇರ ಸೌಲಭ್ಯ ವರ್ಗಾವಣೆ (ಡಿಬಿಟಿ) ವಿಚಾರದಲ್ಲಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.

ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷರಾದ ನೆ.ಲ.ನರೇಂದ್ರಬಾಬು ಅವರು ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿ ಮುನ್ನಡೆಯುತ್ತಿದೆ. ಒಂದು ಲಕ್ಷ ಸಸಿ ನೆಟ್ಟ ಮೋರ್ಚಾವು 5 ಲಕ್ಷ ಬೀಜ ದುಂಡೆಗಳನ್ನು ಮಳೆಗಾಲ ಮುಗಿಯುವುದರೊಳಗೆ ಬಿತ್ತುತ್ತಿದೆ. 310 ಮಂಡಲಗಳಲ್ಲಿ ಶ್ರಮದಾನವನ್ನೂ ಮಾಡಲಾಗಿದೆ ಎಂದರು. ನಂದಿ ಬೆಟ್ಟದ ಸ್ವಚ್ಛತೆಯೂ ನಡೆಯಲಿದೆ ಎಂದು ಹೇಳಿದರು. ಮೋರ್ಚಾದ ಪದಾಧಿಕಾರಿಗಳು ಹಾಜರಿದ್ದರು.

TAGGED:bjpelectionsJan Ashirwad Yatrakarnatakaಆಶೀರ್ವಾದ ಯಾತ್ರೆಒಬಿಸಿಕರ್ನಾಟಕಚುನಾವಣೆಬಿಜೆಪಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
6 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
7 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
7 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
7 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
8 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?