Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆತ್ಮ ನಿರ್ಭರ ಭಾರತ ಯಶಸ್ವಿಗೆ ಸ್ವದೇಶಿ, ಸ್ವಭಾಷಾ ಮತ್ತು ಸ್ವಭೂಷ ಸೂತ್ರ: ಬಿಎಲ್ ಸಂತೋಷ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆತ್ಮ ನಿರ್ಭರ ಭಾರತ ಯಶಸ್ವಿಗೆ ಸ್ವದೇಶಿ, ಸ್ವಭಾಷಾ ಮತ್ತು ಸ್ವಭೂಷ ಸೂತ್ರ: ಬಿಎಲ್ ಸಂತೋಷ್

Bengaluru City

ಆತ್ಮ ನಿರ್ಭರ ಭಾರತ ಯಶಸ್ವಿಗೆ ಸ್ವದೇಶಿ, ಸ್ವಭಾಷಾ ಮತ್ತು ಸ್ವಭೂಷ ಸೂತ್ರ: ಬಿಎಲ್ ಸಂತೋಷ್

Public TV
Last updated: July 6, 2020 8:40 pm
Public TV
Share
3 Min Read
BL SANTHOSH copy
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಆತ್ಮ ನಿರ್ಭರ ಭಾರತ ಯಶಸ್ವಿಗೆ ಎಲ್ಲರೂ ಸ್ವದೇಶಿ, ಸ್ವಭಾಷಾ ಮತ್ತು ಸ್ವಭೂಷ (ನಮ್ಮ ಸಂಸ್ಕೃತಿ) ಎಂಬ ಮೂರು ಸೂತ್ರಗಳನ್ನು ಪಾಲನೆ ಮಾಡಬೇಕು ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಿಳಿಸಿದರು.

ಮೋದಿ ಸರ್ಕಾರದ ಒಂದು ವರ್ಷದ ಸಾಧನೆ ಹಾಗೂ ಕೋವಿಡ್-19 ಕುರಿತು ಬಿಜೆಪಿ ಕೈಗೊಂಡಿದ್ದ ಹಮ್ಮಿಕೊಂಡಿದ್ದ ಜನ ಸಂಪರ್ಕ ಅಭಿಯಾನದ ಸಮಾರೋಪ ಸಮಾರಂಭ ಇಂದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿದ್ದ ಬಿ.ಎಲ್.ಸಂತೋಷ್ ಅವರು ದೆಹಲಿಯಿಂದಲೇ ಮಾತನಾಡಿದರು.

BL SANSHOSH

ಕೊರೊನಾ ಸಂಕಷ್ಟದ ಕಾಲದಲ್ಲಿ ನಾವೆಲ್ಲ ಇದ್ದು, ಒಂದು ಪಕ್ಷದ ಕಾರ್ಯಕರ್ತರಾಗಿ ನಾವು ಕೇವಲ ಪಕ್ಷದ ಕೆಲಸ, ರಾಜಕೀಯ ಕೆಲಸಕ್ಕೆ ಸೀಮಿತವಾಗಬಾರದು. ಸಾಮಾನ್ಯ ಜನರ ತಲ್ಲಣ, ನೋವುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು. ಜಗತ್ತಿನ ಅನೇಕ ವೈದ್ಯರು ಫೇಸ್ ಕವರ್, ಮಾಸ್ಕ್ ಅಗತ್ಯ ಇಲ್ಲ ಎಂದಿದ್ದರು. ಆದರೆ ನಮ್ಮ ಪ್ರಧಾನಿ ನಮಗೆಲ್ಲ ಫೇಸ್ ಕವರ್, ಮಾಸ್ಕ್ ಅಗತ್ಯ ಇದೆ ಅಂದ್ರು. ಈಗ ಆ ವಿಜ್ಞಾನಿಗಳೂ, ವೈದ್ಯರೂ ಫೇಸ್ ಕವರ್, ಮಾಸ್ಕ್ ಅಗತ್ಯ ಅಂತಿದ್ದಾರೆ.

ಕೊರೊನಾ ಬಗ್ಗೆ ಸಮೂಹ ಸನ್ನಿ, ಸಾಮೂಹಿಕ ಉದ್ವೇಗ ಹೆಚ್ಚಿಸುವ ಪ್ರಯತ್ನಗಳು ನಡೆಯುತ್ತಿವೆ. ದೇಶದಲ್ಲಿ ಈಗಾಗಲೇ ಶೇ.40ರಷ್ಟು ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ನಾವು ವೈಯಕ್ತಿಕ ಎಚ್ಚರಿಕೆಗಳನ್ನು ಕೈಗೊಳ್ಳುವ ಮೂಲಕ ಕೊರೊನಾ ಎದುರಿಸಬೇಕಿದೆ. ಕೊರೊನಾ ಬಗ್ಗೆ ಆತಂಕ ಪಡುವ ಸನ್ನಿವೇಶ ಈಗ ದೇಶದಲ್ಲಿ ಇಲ್ಲ. ಇದುವರೆಗೂ ದೇಶದಲ್ಲಿ 1 ಕೋಟಿ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. 1,100 ಕ್ಕೂ ಹೆಚ್ಚು ಟೆಸ್ಟಿಂಗ್ ಲ್ಯಾಬ್‍ಗಳು ದೇಶದಲ್ಲಿವೆ. ಇಂತಹ ಸಂಕಷ್ಟದ ಸಮಯದಲ್ಲಿ 39 ಕೋಟಿ ಬ್ಯಾಂಕ್ ಖಾತೆಗಳಿಗೆ 65 ಸಾವಿರ ಕೋಟಿ ರೂ. ಪರಿಹಾರದ ಹಣ ಜಮೆ ಮಾಡಲಾಗಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ, ಯಾವುದೇ ಭ್ರಷ್ಟಾಚಾರ ಇಲ್ಲದೇ ಪರಿಹಾರ ಕೊಡಲಾಗಿದೆ ಎಂದು ಕೇಂದ್ರ ಸರ್ಕಾರದ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.

I attended the video conference by Shri @blsanthosh , general secretary (organisation) of the @BJP4India , on the valediction of the #KarnatakaJansamvadrally at the office of the Marathalli legislator. 1/2 pic.twitter.com/8a6ZsGbDWr

— Aravind Limbavali (@ArvindLBJP) July 6, 2020

ಕಾಂಗ್ರೆಸ್ ವಿರುದ್ಧ ಟೀಕೆ: ವೀರ್ ಸಾವರ್ಕರ್ ಯಾರು ಎಂದು ಪ್ರಶ್ನೆ ಮಾಡಿದವರಿಗೆ ಭವಿಷ್ಯದಲ್ಲಿ ಕಸದ ಬುಟ್ಟಿಗೆ ಸೇರುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ ಸಂತೋಷ್ ಅವರು, ರಾಹುಲ್ ಗಾಂಧಿ ಅವರು ವಿರುದ್ಧವೂ ಕಿಡಿಕಾರಿದರು. ಪ್ರಧಾನಿ ಮೋದಿ ಅವರು ಸೈನಿಕರನ್ನು ಭೇಟಿ ಮಾಡಿದಕ್ಕೂ ಟೀಕೆ ಮಾಡಿದ್ದಾರೆ. ಸೇನೆಯಯಲ್ಲಿ ಚೇತರಿಕೆ (ರಿಕವರಿ) ವಾರ್ಡ್ ಎಂದು ಸೈನಿಕರಿಗೆ ನೀಡಲಾಗಿರುತ್ತದೆ. ಸೈನಿಕರ ಗಾಯ ವಾಸಿಯಾದ ಮೇಲೆ ಈ ವಾರ್ಡಿನಲ್ಲಿರುತ್ತಾರೆ. ಸೈನಿಕರನ್ನು ಅಂತಹ ವಾರ್ಡಿನಲಿಟ್ಟ ವೇಳೆ ಪ್ರಧಾನಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆದರೆ ಇದುವರೆಗೂ ಒಂದೇ ಒಂದು ರಕ್ಷಣಾ ಸಭೆಗೆ ಬಾರದಿರುವವರು ಇಂತಹ ಆರೋಪ ಮಾಡಿರುವುದು ಸರಿಯಲ್ಲ ಎಂದರು.

ಇದೇ ವೇಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ರಾಜ್ಯ ಸರ್ಕಾರವನ್ನು ಬಿಎಲ್ ಸಂತೋಷ್ ಅವರು ಶ್ಲಾಘಿಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಇತರೇ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ತಿಳಿಸಿದರು.

Joined closing ceremony of #JanSamvadKarnataka from @BjpUdupi district office!@BJP4India National Organization General Secretary Sri @blsanthosh Ji addressed the karyakartas through video conference. pic.twitter.com/vTBgqEkYxE

— Shobha Karandlaje (@ShobhaBJP) July 6, 2020

ಮೋದಿ ಸರ್ಕಾರದ ಒಂದು ವರ್ಷದ ಸಾಧನೆಗಾಗಿ ಮತ್ತು ಕೊರೊನಾ ಕುರಿತ ಮಾಹಿತಿಯನ್ನು ಮೂವತೈದು ಲಕ್ಷ ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗಿತ್ತು. ಸ್ವದೇಶಿ ವಸ್ತು ಬಳಕೆಗೆ ಪ್ರತಿಜ್ಞೆ ಕುರಿತಂತೆ ಮನೆ ಮನೆ ಭೇಟಿ ನೀಡಿ ಮಾಹಿತಿ ನೀಡಲಾಗಿತ್ತು. ಸಾಮಾಜಿಕ ಜಾಲತಾಣ ಮೂಲಕ ಕೊರೊನಾ ಕುರಿತು ಜಾಗೃತಿ ಮೂಡಿಸಲು ಮಾಹಿತಿ ನೀಡಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ ಮತ್ತು ಸುರೇಶ್ ಕುಮಾರ್, ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಭೈರತಿ ಬಸವರಾಜು ಭಾಗಿಯಾಗಿದ್ದರು. ಕಾವೇರಿ ನಿವಾಸದಲ್ಲಿ, ಕುಟುಂಬ ಸದಸ್ಯರೊಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಾರ್ಯಕ್ರಮ ವೀಕ್ಷಿಸಿದರು.

ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್ ರವರು “ಕರ್ನಾಟಕ ಜನಸಂವಾದ” ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ವೀಡಿಯೋ ಸಂವಾದದ ಮೂಲಕ ಭಾಷಣವನ್ನು ಮಾಡುತ್ತಿದ್ದು, ಬೆಳಗಾವಿ ಸದಾಶಿವ ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡರೊಂದಿಗೆ ವೀಕ್ಷಣೆ ಮಾಡುತ್ತಿರುವುದು.#JanSamvadKarnataka pic.twitter.com/FOuNrNH8bu

— Suresh Angadi (@SureshAngadi_) July 6, 2020

TAGGED:bengaluruBJP campaignBL SantoshCM BS YeddyurappaCoronaPM ModiPublic TVಕೊರೊನಾಪಬ್ಲಿಕ್ ಟಿವಿಪ್ರಧಾನಿ ಮೋದಿಬಿಎಲ್ ಸಂತೋಷ್ಬಿಜೆಪಿ ಅಭಿಯಾನಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
01 17
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-1

Public TV
By Public TV
5 hours ago
02 16
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-2

Public TV
By Public TV
5 hours ago
03 14
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-3

Public TV
By Public TV
5 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?