ಹಾಸನ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ವಿರುದ್ಧ ಹಾಸನ ಜಿಲ್ಲೆಯ ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅರಸೀಕೆರೆ ನಗರಸಭೆ ಸದಸ್ಯೆ ಕಲೈರಸಿ ಅವರು ದೂರು ನೀಡಿದ್ದಾರೆ.
ಅರಸೀಕೆರೆ ನಗರಸಭೆಗೆ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಏಳು ಜನ ಸದಸ್ಯರು ಜೆಡಿಎಸ್ಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನಂತರ ತಮ್ಮಬೆಂಬಲ ಬಿಜೆಪಿಗೆ ಇದೆ. ನಮಗೆ ಬೇರೆ ಆಸನ ವ್ಯವಸ್ಥೆ ಮಾಡಿ ಎಂದು ಡಿಸಿಗೆ ಮನವಿ ಮಾಡಿದ್ದರು. ಈ ವಿಚಾರವಾಗಿ ಯೂಟರ್ನ್ ಹೊಡೆದ ಕಲೈರಸಿ, ನನಗೆ ಹತ್ತು ಲಕ್ಷ ನೀಡಿ ಬಿಜೆಪಿಗೆ ಬೆಂಬಲ ನೀಡುವಂತೆ ಬೆದರಿಕೆ ಹಾಕಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ದೂರವಾಣಿಯಲ್ಲಿ ಬೆದರಿಕೆ ಹಾಕಿದ್ದಾರೆ. ಸಂತೋಷ್ ಆಪ್ತರಾದ ಸಿಖಂದರ್, ಹರ್ಷವರ್ಧನ್ ಎಂಬವರು ನಮ್ಮ ಮನೆಗೆ ಬಂದು 10 ಲಕ್ಷ ಹಣ ಇಟ್ಟು ಬಿಜೆಪಿಗೆ ಸಪೋರ್ಟ್ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಜಾತಿನಿಂದನೆ ಕೂಡ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಇದೇ ವಿಚಾರವಾಗಿ ನಿನ್ನೆ 10 ಲಕ್ಷ ಹಣದೊಂದಿಗೆ ಶಾಸಕರಾದ ರೇವಣ್ಣ ಮತ್ತು ಶಿವಲಿಂಗೇಗೌಡ ಜಂಟಿ ಸುದ್ದಿಗೋಷ್ಟಿ ನಡೆಸಿದ್ದರು. ಈ ಭವಿಷ್ಯದಲ್ಲಿ ಕೋರ್ಟ್ ಮೆಟ್ಟಿಲೇರುವುದಾಗಿಯೂ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಹತ್ತು ಲಕ್ಷ ಹಣದೊಂದಿಗೆ ಸುದ್ದಿಗೋಷ್ಠಿ ನಡೆಸಿದ ಹೆಚ್ಡಿ.ರೇವಣ್ಣ, ಶಿವಲಿಂಗೇಗೌಡ