ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ ಎಂದು ನಟ ಧನಂಜಯ (Daali Dhananjay) ಮಾತನಾಡಿದ್ದಾರೆ. ಇದು ಎಲ್ಲರೂ ಖುಷಿಪಡುವಂತಹ ವಿಚಾರ ಎಂದು ಭಾರತ ಸೇನೆಯ ಬಗ್ಗೆ ಮೆಚ್ಚಿಗೆಯ ಮಾತುಗಳನ್ನಾಡಿದ್ದಾರೆ ಡಾಲಿ. ಇದನ್ನೂ ಓದಿ:12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
ಕಾರ್ಯಕ್ರಮವೊಂದರಲ್ಲಿ ಡಾಲಿ ಮಾತನಾಡಿ, ಉಗ್ರರಿಗೆ ಉತ್ತರ ಕೊಡಲೇಬೇಕು. ಪ್ರತಿ ಬಾರಿಯೂ ಉತ್ತರ ಕೊಟ್ಟಿದ್ದೇವೆ. ಇದೀಗ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ. ಇದು ಎಲ್ಲರೂ ಖುಷಿಪಡುವಂತದ್ದು ಎಂದಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್ಗೆ ಗುಡ್ ನ್ಯೂಸ್- ಬರಲಿದೆ ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸೀಕ್ವೆಲ್
ಇದೇ ವೇಳೆ ಸೋನು ನಿಗಮ್ ಅವರ ಕನ್ನಡ ವಿವಾದದ ಬಗ್ಗೆಯೂ ಡಾಲಿ ಮಾತನಾಡಿ, ನಾಡು ನುಡಿ ಅಂತ ಬಂದಾಗ ಎಲ್ಲರೂ ನಿಂತುಕೊಳ್ಳಲೇಬೇಕು. ಸೋನು ನಿಗಮ್ ಕೂಡ ಕನ್ನಡದ ಬಗ್ಗೆ ಕಾಳಜಿಯಿರುವ ಕಲಾವಿದ. ಅವರು ಒಳ್ಳೆಯ ಸಿಂಗರ್, ಚಿತ್ರರಂಗಕ್ಕೆ ಅವರು ಕೊಡುಗೆ ಕೊಟ್ಟಿದ್ದಾರೆ. ನಾವು ಅವರು ಹಾಡಿರುವ ಹಾಡುಗಳನ್ನು ಕೇಳಿ ಎಂಜಾಯ್ ಮಾಡಿದ್ದೇವೆ. ಅಂದಿನ ಸಂದರ್ಭದಲ್ಲಿ ಅವರ ಪ್ರತಿಕ್ರಿಯೆ ಬೇರೆ ತರಹ ಕಾಣಿಸಿರಬಹುದು. ಅಥವಾ ತಪ್ಪಾಗಿ ರಿಯಾಕ್ಟ್ ಮಾಡಿರಬಹುದು. ಆದರೆ ಕನ್ನಡ ಅಂತ ಬಂದಾಗ ನಾವೆಂದಿಗೂ ಕನ್ನಡದ ಪರನೇ ಇರುತ್ತೇವೆ. ಕನ್ನಡನೇ ನಮ್ಮ ಅನ್ನ, ಅದೇ ನಮ್ಮ ಜೀವ ಎಂದಿದ್ದಾರೆ.