ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಿಧನರಾಗಿ 5 ದಿನ ಕಳೆದಿದ್ದರೂ, ಅವರ ನೆನಪು ಮಾತ್ರ ಇನ್ನೂ ಜೀವಂತವಾಗಿಯೇ ಇದೆ. ಸದ್ಯ ಗೆಳೆಯನ ಅಗಲಿಕೆಯಿಂದ ಬಹಳ ದುಃಖದಲ್ಲಿರುವ ನಟ ನೀನಾಸಂ ಸತೀಶ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಇದೇ ಜೂನ್ 20ರಂದು ನಟ ನೀನಾಸಂ ಸತೀಶ್ ಹುಟ್ಟುಹಬ್ಬವಿದೆ. ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಬರ್ತ್ಡೇ ಸೆಲೆಬ್ರೆಟ್ ಮಾಡಿಕೊಳ್ಳುತ್ತಿದ್ದ ನೀನಾಸಂ ಸತೀಶ್ ಈ ಬಾರಿ ಆಪ್ತ ಗೆಳೆಯನನ್ನು ಕಳೆದುಕೊಂಡ ನೋವಿನಿಂದ ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ.
ಈ ಕುರಿತಂತೆ ನೀನಾಸಂ ಸತೀಶ್ರವರು ತಮ್ಮ ಫೇಸ್ಬುಕ್ ಖಾತೆಯಲ್ಲಿ, ಗೆಳೆಯರೇ ಇದೇ 20 ನನ್ನ ಹುಟ್ಟುಹಬ್ಬ, ವಿಜಿ ಇಲ್ಲದ ಈ ಸಂದರ್ಭದಲ್ಲಿ ತುಂಬ ನೋವಿನಲ್ಲಿ ನನ್ನ ಗೆಳೆಯನ ಬಳಗವಿದೆ. ಹಾಗಾಗಿ ಆ ದಿನ ಯಾವುದೇ ಸಂಭ್ರಮಗಳಿರಿವುದಿಲ್ಲ. ಬಿಡುಗಡೆಯಾಗಬೇಕಿದ್ದ ಪೆಟ್ರೋಮ್ಯಾಕ್ಸ್ ಟೀಸರ್ ಕೂಡ ಮುಂದೂಡಿದ್ದೇವೆ. ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?
ಈ ಬಾರಿ ಕೊರೊನಾ ಲಾಕ್ಡೌನ್ ವೇಳೆ ಸಂಚಾರಿ ವಿಜಯ್ ಹಾಗೂ ನೀನಾಸಂ ಸತೀಶ್ ಇಬ್ಬರೂ ಒಟ್ಟಿಗೆ ಸೇರಿ ಕಷ್ಟದಲ್ಲಿ ಜನರಿಗೆ ಅಗತ್ಯ ದಿನಸಿಗಳನ್ನು ವಿತರಣೆ ಮಾಡಿದ್ದರು. ಈ ವೀಡಿಯೋವನ್ನು ನೀನಾಸಂ ಸತೀಶ್ರವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
View this post on Instagram
ಬೈಕ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ನಟ ಸಂಚಾರಿ ವಿಜಯ್ ಇತ್ತೀಚೆಗಷ್ಟೇ ನಿಧನರಾಗಿದ್ದು. ತಮ್ಮ ವಿಭಿನ್ನವಾದ ಅಭಿನಯದ ರಾಷ್ಟ್ರ ಪ್ರಶಸ್ತಿಯನ್ನು ಗಳಿಸಿದ ಪ್ರತಿಭಾವಂತ ನಟ ಸಂಚಾರಿ ವಿಜಯ್ಗೆ ಇಡೀ ಸ್ಯಾಂಡಲ್ವುಡ್ ಕಂಬನಿ ಮಿಡಿಯುವ ಮೂಲಕ ಸಂತಾಪ ಸೂಚಿಸಿದ್ದರು. ಇದನ್ನೂ ಓದಿ: ಮತ್ತೆ ಹುಟ್ಟಿ ಬಾ ಗೆಳೆಯ ಎಂದ ಸ್ಯಾಂಡಲ್ವುಡ್