Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಫ್ಟರ್ ಪಾರ್ಟಿಗೆ ಪ್ರತ್ಯೇಕ ಆಹ್ವಾನ ಇರುತ್ತೆ, ಭಾರೀ ಹಣ ಖರ್ಚು ಮಾಡ್ತಾರೆ- ನಟ ಸಂತೋಷ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಆಫ್ಟರ್ ಪಾರ್ಟಿಗೆ ಪ್ರತ್ಯೇಕ ಆಹ್ವಾನ ಇರುತ್ತೆ, ಭಾರೀ ಹಣ ಖರ್ಚು ಮಾಡ್ತಾರೆ- ನಟ ಸಂತೋಷ್ ಕುಮಾರ್

Cinema

ಆಫ್ಟರ್ ಪಾರ್ಟಿಗೆ ಪ್ರತ್ಯೇಕ ಆಹ್ವಾನ ಇರುತ್ತೆ, ಭಾರೀ ಹಣ ಖರ್ಚು ಮಾಡ್ತಾರೆ- ನಟ ಸಂತೋಷ್ ಕುಮಾರ್

Public TV
Last updated: September 18, 2020 3:41 pm
Public TV
Share
2 Min Read
Kannada Actor Santhosh Kumar a
SHARE

– ಡ್ರಗ್ಸ್ ಪಾರ್ಟಿ ಆಗಿರುವುದೂ ನನ್ನ ಗಮನಕ್ಕೂ ಬಂದಿದೆ
– ಇಂದ್ರಜಿತ್‍ಗೆ ಧನ್ಯವಾದ ಹೇಳಬೇಕು
– ಮುಂಜಾನೆ 6 ಗಂಟೆಯವರೆಗೂ ಪಾರ್ಟಿ

ಬೆಂಗಳೂರು: ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನನಗೆ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಎರಡನೇ ಬಿಗ್ ಬಾಸ್ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ನಟ ಸಂತೋಷ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಯಾವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ ಎಂಬುದು ನನಗೂ ಕುತೂಹಲ ಇದೆ. ಒಬ್ಬ ಪ್ರಜೆಯಾಗಿ ವಿಚಾರಣೆಗೆ ಹಾಜರಾಗುವುದು ನನ್ನ ಕರ್ತವ್ಯ ಆದ್ದರಿಂದ ಹೋಗುತ್ತೇನೆ. ಅಮ್ಮನ ಕಾರ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದೇನೆ. ನಾಳೆ ಬೆಂಗಳೂರಿಗೆ ವಾಪಸ್ ಆಗುತ್ತೇನೆ. ನೋಟಿಸ್ ನೀಡಿದ ಸಂದರ್ಭದಲ್ಲಿ ಇಂದು ಸಂಜೆಯೇ ಬರುತ್ತೇನೆ ಎಂದು ಪೊಲೀಸರಲ್ಲಿ ಕೇಳಿದ್ದೆ. ಆದರೆ ಅವರು ನಾಳೆಯೇ ಬನ್ನಿ ಎಂದಿದ್ದಾರೆ ಎಂದು ತಿಳಿಸಿದರು.

Kannada Actor Santhosh Kumar b

ನನ್ನದು ಒಂದು ವಿಲ್ಲಾ ಇತ್ತು. ಆದರೆ ಜನವರಿಯಲ್ಲಿ ನಾನು ಅದನ್ನು ಖಾಲಿ ಮಾಡಿದ್ದೆ. ಅಲ್ಲಿ ಹುಟ್ಟಹಬ್ಬ ಕಾರ್ಯಕ್ರಮ ಸೇರಿದಂತೆ ಕೆಲ ಪಾರ್ಟಿಗಳಿಗೆ ಬಾಡಿಗೆ ನೀಡುತ್ತಿದ್ದೇವು. ಈ ಕುರಿತ ಮಾಹಿತಿ ಪಡೆಯಲು ವಿಚಾರಣೆಗೆ ಕರೆದಿರಬಹುದು. ಲಾಕ್‍ಡೌನ್ ಸಮಯದಲ್ಲಿ ನಾನು ಯಾವುದೇ ಪಾರ್ಟಿಗೆ ಭಾಗಿಯಾಗಿಲ್ಲ. ಏಕೆಂದರೆ ನಾನು ಕೋವಿಡ್ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದೆ. ಸುಮಾರು 35 ದಿನಗಳ ಕಾಲ 20 ಸಾವಿರಕ್ಕೂ ಹೆಚ್ಚು ಊಟವನ್ನು ವಿತರಣೆ ಮಾಡಿದ್ದೇವೆ. ಇದನ್ನೂ ಓದಿ: ಜನ್ರಿಂದ ಸೈ ಎನಿಸಿಕೊಳ್ಳೋದಕ್ಕಿಂತ ಬೆಸ್ಟ್ ಡ್ರಗ್ ಇಲ್ಲ: ಅಕುಲ್

indrajit lankesh 2

ಆದರೆ ಲಾಕ್‍ಡೌನ್ ಸಮಯದಲ್ಲೇ ನಗರದ ಹೊರವಲಯದಲ್ಲಿ ಪಾರ್ಟಿಗಳು ನಡೆಯುತ್ತಿದ್ದ ಮಾಹಿತಿ ನನಗೂ ತಿಳಿದಿದೆ. ಆದರೆ ಯಾರೂ ಆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದರೂ ಎಂಬ ಬಗ್ಗೆ ಮಾಹಿತಿ ಇಲ್ಲ. ನಟಿಯೊಬ್ಬರ ಅಪಘಾತ ಆದ ಸಂದರ್ಭದಲ್ಲಿ ನನಗೆ ಆಚ್ಚರಿ ಆಗಿತ್ತು. ಪಾರ್ಟಿಗಳಲ್ಲಿ ಆಫ್ಟರ್ ಪಾರ್ಟಿ ನಡೆಯುತ್ತದೆ ಎಂಬುವುದು ಎಲ್ಲರಿಗೂ ತಿಳಿದಿದೆ. ನಾವು ಕೆಲ ಪಾರ್ಟಿಗಳಿಗೆ ಹೋಗಿದ್ದು, ಆದರೆ ಆಫ್ಟರ್ ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ಮುಂಜಾನೆ 6 ಗಂಟೆವರೆಗೂ ಪಾರ್ಟಿ ನಡೆಸಿರುವ ಸಂದರ್ಭಗಳಿದ್ದೂ, ಆಫ್ಟರ್ ಪಾರ್ಟಿಗೆ ಪ್ರತ್ಯೇಕ ಆಹ್ವಾನ ಇರುತ್ತೆ. ಈ ಪಾರ್ಟಿಗಳಿಗೆ ಬೇಕಾದಷ್ಟು ಹಣ ಖರ್ಚು ಮಾಡುತ್ತಾರೆ ಎಂದು ವಿವರಿಸಿದರು.

Kannada Actor Santhosh Kumar c copy

ಸದ್ಯ ನಾವು ಇಂದ್ರಜಿತ್ ಅವರಿಗೆ ಧನ್ಯವಾದ ಹೇಳಬೇಕು. ಅವರು ಕೆಲಸ ಮಾಡುತ್ತಿದ್ದಾರೆ. ಆದರೆ ಸಿನಿಮಾ ಮಾತ್ರವಲ್ಲದೇ ಎಲ್ಲಾ ರಂಗದಲ್ಲಿಯೂ ಡ್ರಗ್ಸ್ ಮಾಫಿಯಾ ಹರಡಿಕೊಂಡಿದೆ. ನಮ್ಮ ತಂದೆ-ತಾಯಿ ಮಾಡಿದ ಪುಣ್ಯದಿಂದ ನಾವು ಅಂತಹ ಪಾರ್ಟಿಗಳಿಗೆ ಹೋಗಿಲ್ಲ. ನಾನು ಈಗ ಪ್ರೇಕ್ಷಕರ ಎದುರು ಬರಲು ಅತ್ಯುತ್ತಮ ಪಾತ್ರವೊಂದರ ಹುಡುಕಾಟದಲ್ಲಿದ್ದೇನೆ. ಸ್ಯಾಂಡಲ್‍ವುಡ್ ಕೋವಿಡ್ ವಾರಿಯರ್ಸ್ ಎಂಬ ಗ್ರೂಪ್ ಮಾಡಿಕೊಂಡಿದ್ದು, ಊಟ, ಹಣ್ಣು, ತರಕಾರಿ, ಮಾಸ್ಕ್ ಸೇರಿದಂತೆ ಅಗತ್ಯ ಸೇವೆಗಳನ್ನು ನೀಡುವ ಕಾರ್ಯವನ್ನು ಲಾಕ್‍ಡೌನ್ ಸಮಯದಲ್ಲಿ ಮಾಡಿದ್ದೇವೆ. ನಾವು ದೊಡ್ಡ ತಂಡ ಕಟ್ಟಿಕೊಂಡು ಹಲವರ ನೆರವು ಪಡೆದುಕೊಂಡು ಸಹಾಯ ಮಾಡಿದ್ದೇವೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ಅಕುಲ್ ಬಾಲಾಜಿಗೆ ಸಿಸಿಬಿ ನೋಟಿಸ್

432733

ಚಿತ್ರರಂಗದಲ್ಲಿರುವ ಕೆಲ ಕಲಾವಿದರೂ ಬೇಡದ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದ್ದರಿಂದ ಇಂತಹ ಆರೋಪಗಳು ಕೇಳಿ ಬರುತ್ತಿದೆ. ಆಫ್ಟರ್ ಪಾರ್ಟಿಗಳಲ್ಲಿ 2 ರೀತಿ ಇದ್ದು, ಸ್ನೇಹಿತರ ಮನೆಯಲ್ಲಿ ಪಾರ್ಟಿ ಮಾಡಿ ತಡರಾತ್ರಿಯಲ್ಲಿ ಮನೆಗೆ ಹಿಂದಿರುಗಲು ಆಗುದಿಲ್ಲ ಎಂಬ ಕಾರಣಕ್ಕೆ ಅಲ್ಲೇ ಉಳಿಯುತ್ತಿದ್ದರು. ಆದರೆ ಮತ್ತೊಂದು ರೀತಿಯ ಆಫ್ಟರ್ ಪಾರ್ಟಿಯಲ್ಲಿ ಎಂಟ್ರಿಗೆ 5 ಸಾವಿರ ನೀಡಬೇಕು. ಆದರೆ ನನಗೆ ಇಂತಹ ಪಾರ್ಟಿಗಳಿಗೆ ಯಾವುದೇ ಆಹ್ವಾನವೂ ಬಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಈಗಾಗ್ಲೇ ಸಾಕಷ್ಟು ವಿಚಾರಣೆ ನಡೆಸಿದ್ದೀರಿ, ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿ – ಸ್ವಾಮೀಜಿಯಿಂದ ಒತ್ತಡ

TAGGED:Actor Santosh KumarbengaluruccbCovid 19Drugs MafiaLockdownPublic TVಕೋವಿಡ್ 19ಡ್ರಗ್ಸ್‌ ಮಾಫಿಯಾನಟ ಸಂತೋಷ್ ಕುಮಾರ್ಪಬ್ಲಿಕ್ ಟಿವಿಬೆಂಗಳೂರುಲಾಕ್‍ಡೌನ್ಸಿಸಿಬಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
4 minutes ago
Mission Drishti launched its the worlds 1st OptoSAR satellite Why is it a headache for Pakistan and China
Karnataka

ಬೆಂಗಳೂರಿನ ಗ್ಯಾಲಕ್ಸ್ ಐ ಅಭಿವೃದ್ಧಿ ಪಡಿಸಿದ ವಿಶ್ವದ ಮೊದಲ OptoSAR ಉಪಗ್ರಹ ಉಡಾವಣೆ ಯಶಸ್ವಿ – ಪಾಕಿಸ್ತಾನ, ಚೀನಾಗೆ ತಲೆನೋವು ಯಾಕೆ?

Public TV
By Public TV
12 minutes ago
Kyle Jamieson Vaibhav Suryavanshi
Cricket

IPL 2026 | ವೈಭವ್‌ ಅಬ್ಬರಕ್ಕೆ ಹೆದರಿದ್ದೆ – ಕೈಲ್ ಜೇಮಿಸನ್

Public TV
By Public TV
14 minutes ago
pune rape case
Belgaum

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆಗೈದ ವೃದ್ಧ

Public TV
By Public TV
15 minutes ago
Ramanagara Farmer Death copy
Districts

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

Public TV
By Public TV
45 minutes ago
Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?